Homeಮುಖಪುಟಮೋದಿ ಹೆಸರು ಜಪಿಸುವ ಪತಿಗೆ ಊಟ ಹಾಕ್ಬೇಡಿ: ಅರವಿಂದ್ ಕೇಜ್ರಿವಾಲ್

ಮೋದಿ ಹೆಸರು ಜಪಿಸುವ ಪತಿಗೆ ಊಟ ಹಾಕ್ಬೇಡಿ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಮನೆಯಲ್ಲಿ ಮೋದಿ ಹೆಸರನ್ನು ಜಪ ಮಾಡಿದರೆ ಪತಿಗೆ ರಾತ್ರಿ ಊಟವನ್ನು ಹಾಕ್ಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹಿಳೆಯರಿಗೆ ಹೇಳಿದ್ದಾರೆ.

‘ಮಹಿಳಾ ಸಮ್ಮಾನ್ ಸಮರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಅನೇಕ ಪುರುಷರು ಪ್ರಧಾನಿ ಮೋದಿಯವರ ಹೆಸರನ್ನು ಜಪಿಸುತ್ತಿದ್ದಾರೆ, ಆದರೆ ನೀವು ಅವರನ್ನು ಸರಿಪಡಿಸಬೇಕು. ನಿಮ್ಮ ಪತಿ ಮೋದಿಯವರ ಹೆಸರನ್ನು ಜಪಿಸಿದರೆ, ನೀವು ಅವರಿಗೆ ರಾತ್ರಿಯ ಊಟವನ್ನು ನೀಡುವುದಿಲ್ಲ ಎಂದು ಹೇಳಬೇಕು ಎಂದು ಹೇಳಿದ್ದಾರೆ.

ಸರ್ಕಾರವು 2024-25ರ ಬಜೆಟ್‌ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ ಮೊತ್ತ 1,000 ರೂ.ಗಳನ್ನು ಒದಗಿಸುವ ಯೋಜನೆಯನ್ನು ಘೋಷಿಸಿದ ನಂತರ ಮಹಿಳೆಯರೊಂದಿಗೆ ಸಂವಾದ ನಡೆಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ಕಾರ್ಯಕ್ರಮದಲ್ಲಿ, ಮಹಿಳೆಯರು ಎಎಪಿ ಪಕ್ಷಕ್ಕೆ ಬೆಂಬಲಿಸಬೇಕು ಮತ್ತು ತಮ್ಮ ಕುಟುಂಬಸ್ಥರನ್ನು ಆಪ್‌ಗೆ ಬೆಂಬಲಿಸುವಂತೆ ಮನವೊಲಿಕೆ ಮಾಡಬೇಕು,  ಬಿಜೆಪಿಯನ್ನು ಬೆಂಬಲಿಸುವ ಇತರ ಮಹಿಳೆಯರಿಗೆ ನಿಮ್ಮ ಸಹೋದರ ಕೇಜ್ರಿವಾಲ್ ಮಾತ್ರ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಹೇಳುವಂತೆ ಅವರು ಮಹಿಳೆಯರಿಗೆ  ಆಗ್ರಹಿಸಿದ್ದಾರೆ.

ನಾನು ಕರೆಂಟ್ ಫ್ರೀ ಮಾಡಿದ್ದೇನೆ, ಬಸ್ ಟಿಕೆಟ್ ಉಚಿತ ಮಾಡಿದ್ದೇನೆ, ಈಗ ನಾನು ಪ್ರತಿ ತಿಂಗಳು ಮಹಿಳೆಯರಿಗೆ ಈ 1,000 ರೂಗಳನ್ನು ನೀಡುತ್ತಿದ್ದೇನೆ, ಬಿಜೆಪಿ ಅವರಿಗೆ ಏನು ಮಾಡಿದೆ? ಬಿಜೆಪಿಗೆ ಏಕೆ ಮತ ಹಾಕಬೇಕು? ಈ ಬಾರಿ ಕೇಜ್ರಿವಾಲ್‌ಗೆ ಮತ ಹಾಕಿ, ಅವರು ಮಹಿಳಾ ಸಬಲೀಕರಣದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರು ಪಕ್ಷದಲ್ಲಿ ಮಹಿಳೆಯರಿಗೆ ಕೆಲ ಹುದ್ದೆ ನೀಡಿ ಮಹಿಳಾ ಸಬಲೀಕರಣ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಮಹಿಳೆಯರಿಗೆ ಹುದ್ದೆ ಬೇಡ, ದೊಡ್ಡ ಹುದ್ದೆ, ಟಿಕೇಟ್ ಎಲ್ಲ ಸಿಗಬೇಕು ಎಂದು ನಾನು ಹೇಳುತ್ತಿಲ್ಲ. ಆದರೆ ಇದರಿಂದ ಕೇವಲ ಎರಡ್ಮೂರು ಮಹಿಳೆಯರಿಗೆ ಮಾತ್ರ ಲಾಭ. ಉಳಿದ ಮಹಿಳೆಯರಿಗೆ ಏನು ಸಿಗುತ್ತದೆ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ತಮ್ಮ ಸರ್ಕಾರದ ಹೊಸ ಯೋಜನೆ  ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ’ ನಿಜವಾದ ಮಹಿಳಾ ಸಬಲೀಕರಣವನ್ನು ಮಾಡುತ್ತದೆ ಎಂದು ಹೇಳಿದ್ದಾರೆ.

ಹಣವಿದ್ದಾಗ ಸಬಲೀಕರಣವಾಗುತ್ತದೆ, ಪ್ರತಿ ಮಹಿಳೆಗೆ ಪ್ರತಿ ತಿಂಗಳು 1,000ರೂ. ಸಿಕ್ಕಾಗ ನಿಜವಾದ ಸಬಲೀಕರಣವಾಗುತ್ತದೆ. ಇಡೀ ವಿಶ್ವದಲ್ಲಿ ಈ ಯೋಜನೆಯು “ಅತಿದೊಡ್ಡ ಮಹಿಳಾ ಸಬಲೀಕರಣದ ಕಾರ್ಯಕ್ರಮ” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...