Homeಮುಖಪುಟಮೋದಿ ಹೆಸರು ಜಪಿಸುವ ಪತಿಗೆ ಊಟ ಹಾಕ್ಬೇಡಿ: ಅರವಿಂದ್ ಕೇಜ್ರಿವಾಲ್

ಮೋದಿ ಹೆಸರು ಜಪಿಸುವ ಪತಿಗೆ ಊಟ ಹಾಕ್ಬೇಡಿ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಮನೆಯಲ್ಲಿ ಮೋದಿ ಹೆಸರನ್ನು ಜಪ ಮಾಡಿದರೆ ಪತಿಗೆ ರಾತ್ರಿ ಊಟವನ್ನು ಹಾಕ್ಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹಿಳೆಯರಿಗೆ ಹೇಳಿದ್ದಾರೆ.

‘ಮಹಿಳಾ ಸಮ್ಮಾನ್ ಸಮರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಅನೇಕ ಪುರುಷರು ಪ್ರಧಾನಿ ಮೋದಿಯವರ ಹೆಸರನ್ನು ಜಪಿಸುತ್ತಿದ್ದಾರೆ, ಆದರೆ ನೀವು ಅವರನ್ನು ಸರಿಪಡಿಸಬೇಕು. ನಿಮ್ಮ ಪತಿ ಮೋದಿಯವರ ಹೆಸರನ್ನು ಜಪಿಸಿದರೆ, ನೀವು ಅವರಿಗೆ ರಾತ್ರಿಯ ಊಟವನ್ನು ನೀಡುವುದಿಲ್ಲ ಎಂದು ಹೇಳಬೇಕು ಎಂದು ಹೇಳಿದ್ದಾರೆ.

ಸರ್ಕಾರವು 2024-25ರ ಬಜೆಟ್‌ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ ಮೊತ್ತ 1,000 ರೂ.ಗಳನ್ನು ಒದಗಿಸುವ ಯೋಜನೆಯನ್ನು ಘೋಷಿಸಿದ ನಂತರ ಮಹಿಳೆಯರೊಂದಿಗೆ ಸಂವಾದ ನಡೆಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ಕಾರ್ಯಕ್ರಮದಲ್ಲಿ, ಮಹಿಳೆಯರು ಎಎಪಿ ಪಕ್ಷಕ್ಕೆ ಬೆಂಬಲಿಸಬೇಕು ಮತ್ತು ತಮ್ಮ ಕುಟುಂಬಸ್ಥರನ್ನು ಆಪ್‌ಗೆ ಬೆಂಬಲಿಸುವಂತೆ ಮನವೊಲಿಕೆ ಮಾಡಬೇಕು,  ಬಿಜೆಪಿಯನ್ನು ಬೆಂಬಲಿಸುವ ಇತರ ಮಹಿಳೆಯರಿಗೆ ನಿಮ್ಮ ಸಹೋದರ ಕೇಜ್ರಿವಾಲ್ ಮಾತ್ರ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಹೇಳುವಂತೆ ಅವರು ಮಹಿಳೆಯರಿಗೆ  ಆಗ್ರಹಿಸಿದ್ದಾರೆ.

ನಾನು ಕರೆಂಟ್ ಫ್ರೀ ಮಾಡಿದ್ದೇನೆ, ಬಸ್ ಟಿಕೆಟ್ ಉಚಿತ ಮಾಡಿದ್ದೇನೆ, ಈಗ ನಾನು ಪ್ರತಿ ತಿಂಗಳು ಮಹಿಳೆಯರಿಗೆ ಈ 1,000 ರೂಗಳನ್ನು ನೀಡುತ್ತಿದ್ದೇನೆ, ಬಿಜೆಪಿ ಅವರಿಗೆ ಏನು ಮಾಡಿದೆ? ಬಿಜೆಪಿಗೆ ಏಕೆ ಮತ ಹಾಕಬೇಕು? ಈ ಬಾರಿ ಕೇಜ್ರಿವಾಲ್‌ಗೆ ಮತ ಹಾಕಿ, ಅವರು ಮಹಿಳಾ ಸಬಲೀಕರಣದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರು ಪಕ್ಷದಲ್ಲಿ ಮಹಿಳೆಯರಿಗೆ ಕೆಲ ಹುದ್ದೆ ನೀಡಿ ಮಹಿಳಾ ಸಬಲೀಕರಣ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಮಹಿಳೆಯರಿಗೆ ಹುದ್ದೆ ಬೇಡ, ದೊಡ್ಡ ಹುದ್ದೆ, ಟಿಕೇಟ್ ಎಲ್ಲ ಸಿಗಬೇಕು ಎಂದು ನಾನು ಹೇಳುತ್ತಿಲ್ಲ. ಆದರೆ ಇದರಿಂದ ಕೇವಲ ಎರಡ್ಮೂರು ಮಹಿಳೆಯರಿಗೆ ಮಾತ್ರ ಲಾಭ. ಉಳಿದ ಮಹಿಳೆಯರಿಗೆ ಏನು ಸಿಗುತ್ತದೆ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ತಮ್ಮ ಸರ್ಕಾರದ ಹೊಸ ಯೋಜನೆ  ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ’ ನಿಜವಾದ ಮಹಿಳಾ ಸಬಲೀಕರಣವನ್ನು ಮಾಡುತ್ತದೆ ಎಂದು ಹೇಳಿದ್ದಾರೆ.

ಹಣವಿದ್ದಾಗ ಸಬಲೀಕರಣವಾಗುತ್ತದೆ, ಪ್ರತಿ ಮಹಿಳೆಗೆ ಪ್ರತಿ ತಿಂಗಳು 1,000ರೂ. ಸಿಕ್ಕಾಗ ನಿಜವಾದ ಸಬಲೀಕರಣವಾಗುತ್ತದೆ. ಇಡೀ ವಿಶ್ವದಲ್ಲಿ ಈ ಯೋಜನೆಯು “ಅತಿದೊಡ್ಡ ಮಹಿಳಾ ಸಬಲೀಕರಣದ ಕಾರ್ಯಕ್ರಮ” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...