Homeಮುಖಪುಟಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ' ಎಂದ ಸೇನಾ ಶಾಸಕ

ಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದ ಸೇನಾ ಶಾಸಕ

- Advertisement -
- Advertisement -

ರೆಮ್‌ಡಿಸಿವಿರ್ ಪೂರೈಕೆಯ ಕುರಿತ ವಿವಾದವೀಗ ಮಹಾರಾಷ್ಟ್ರದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ್ದು, ‘ಕೊರೋನಾ ವೈರಸ್ ಏನಾದ್ರೂ ನನ್ ಕೈಗೆ ಸಿಕ್ರೆ ಅದನ್ನ ದೇವೇಂದ್ರ ಫಢ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದು ಶಿವಸೇನಾದ ಶಾಸಕ ಸಂಜಯ್ ಗಾಯಕವಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಪ್ರತಿಭಟನೆಗೆ ನಾಂದಿ ಹಾಡಿದೆ.
ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹೆಚ್ಚಿನ ಬೇಡಿಕೆಯಿರುವ ರೆಮ್‌ಡೆಸಿವಿರ್‌ನ ಬಾಟಲುಗಳನ್ನು ದಾಸ್ತಾನು ಮಾಡಲಾಗಿದೆಯೆಂದು ಆರೋಪಿಸಿ ಫಾರ್ಮಾ ಕಂಪನಿಯ ಉನ್ನತ ಕಾರ್ಯನಿರ್ವಾಹಕ ಒಬ್ಬರನ್ನು ಮುಂಬೈ ಪೊಲೀಸರು ವಿಚಾರಣೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿಜೆಪಿಯ ಫಡ್ನವೀಸ್ ಅವರನ್ನು ಗುರಿಯಾಗಿಸಿಕೊಂಡು ಮಹಾರಾಷ್ಟ್ರದ ಆಡಳಿತ ಪಕ್ಷಗಳು ಟೀಕೆ ಮಾಡುತ್ತಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬುಲ್ಖಾನಾ ಶಾಸಕರಾದ ಸಂಜಯ್ ಗಾಯಕವಾಡ್, ಸಾಂಕ್ರಾಮಿಕ ರೋಗದ ಈ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದರೆ ಫಡ್ನವೀಸ್ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸಚಿವರನ್ನು ಬೆಂಬಲಿಸುವ ಬದಲು, ಬಿಜೆಪಿ ನಾಯಕರು ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ ಮತ್ತು ಈ ಸರ್ಕಾರ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿರುವ) ಹೇಗೆ ವಿಫಲಗೊಳ್ಳುತ್ತದೆ ಎಂಬುದನ್ನು ನೋಡುತ್ತಿದ್ದಾರೆ ಎಂದು ಅವರು ಹೇಳಿದರು.

“ಆದ್ದರಿಂದ, ಆಕಸ್ಮಾತ್ ಕೊರೊನಾ ವೈರಸ್ ನನ್ನ ಕೈಗೆ ಸಿಕ್ಕರೆ ನಾನು ಅದನ್ನು ದೇವೇಂದ್ರ ಫಡ್ನವೀಸ್ ಅವರ ಬಾಯಿಗೆ ಹಾಕುತ್ತಿದ್ದೆ” ಎಂದು ಅವರು ಹೇಳಿದರು.

ಫಡ್ನವಿಸ್ ಮತ್ತು ಬಿಜೆಪಿ ನಾಯಕರಾದ ಪ್ರವೀಣ್ ದಾರೇಕರ್ ಮತ್ತು ಚಂದ್ರಕಾಂತ್ ಪಾಟೀಲ್ ಅವರು ರೆಮ್‌ಡಿಸಿವಿರ್ ಚುಚ್ಚುಮದ್ದಿನ ವಿತರಣೆಯ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಗಾಯಕವಾಡ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದ ರೆಮ್‌ಡೆಸಿವಿರ್ ಉತ್ಪಾದನಾ ಕಂಪನಿಗಳಿಗೆ ರಾಜ್ಯಕ್ಕೆ ಔಷಧಿ ಸರಬರಾಜು ಮಾಡದಂತೆ ಕೇಂದ್ರ ಹೇಳಿದೆ. ಅವರು ಮಹಾರಾಷ್ಟ್ರಕ್ಕೆ ಅಗತ್ಯವಾದ ವೈದ್ಯಕೀಯ ಆಮ್ಲಜನಕವನ್ನು ಸಹ ನೀಡುತ್ತಿಲ್ಲ ಎಂದು ಶಾಸಕ ಗಾಯಕವಾಡ್ ಹೇಳಿದ್ದಾರೆ.

ಅವರು ಗುಜರಾತ್‌ಗೆ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ನೀಡುತ್ತಿದ್ದಾರೆ ಮತ್ತು ಮಹಾರಾಷ್ಟ್ರದ ಬಿಜೆಪಿ ಕಚೇರಿಯಿಂದ 50,000 ಔಷಧದ ಬಾಟಲುಗಳನ್ನು ಆ ರಾಜ್ಯಕ್ಕೆ ಉಚಿತವಾಗಿ ಪೂರೈಸುತ್ತಿದ್ದಾರೆ, ಆದರೆ ಮಹಾರಾಷ್ಟ್ರದಲ್ಲಿ ಜನರು ಸಾಯುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ರಾಜಕೀಯ ಮಾಡಲು ಇದು ಸಮಯವೇ? ಕೇಂದ್ರ ಮತ್ತು ಫಡ್ನವೀಸ್ ಅವರ ಕೃತ್ಯಗಳಿಗೆ ನಾಚಿಕೆಪಡಬೇಕು ಎಂದು ಅವರು ಹೇಳಿದರು. ಗಾಯಕವಾಡ್ ಅವರ ಟೀಕೆಗಳ ನಂತರ, ಬಿಜೆಪಿ ಕಾರ್ಯಕರ್ತರು ಭಾನುವಾರ ಬುಲ್ಖಾನಾದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರು ಮತ್ತು ಶಾಸಕರ ಪ್ರತಿಕೃತಿಗಳನ್ನು ಸುಟ್ಟುಹಾಕಿದರು.

ತಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ತನ್ನ ವಿರುದ್ಧ ಯಾವುದೇ ವಿಚಾರಣೆಗೆ ಹೆದರುವುದಿಲ್ಲ ಎಂದು ಫಡ್ನವೀಸ್ ಭಾನುವಾರ ಹೇಳಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...