Homeಅಂತರಾಷ್ಟ್ರೀಯನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

ಅಂದುಕೊಂಡಂತೆ ಯಾವುದು ನಡೆಯುತ್ತಿಲ್ಲ ಎಂಬುದನ್ನು ಒಪ್ಪಿಕೊಂಡ ಅವರು, "ಅಧ್ಯಕ್ಷೀಯ ಚುನಾವಣೆಯ ಇತಿಹಾಸದಲ್ಲಿ ಒಬ್ಬ ಕೆಟ್ಟ ಅಭ್ಯರ್ಥಿಯ ವಿರುದ್ಧ ಸ್ಫರ್ಧಿಸಿರುವುದು ನನ್ನ ಮೇಲೆ ಒತ್ತಡ ಉಂಟುಮಾಡಿದೆ ಎಂದಿದ್ದಾರೆ.

- Advertisement -
- Advertisement -

ನಾನು ಚುನಾವಣೆಯಲ್ಲಿ ಸೋಲುವುದನ್ನು ನೀವು ಊಹಿಸಬಲ್ಲಿರಾ..? ನಾನು ಚುನಾವಣೆಯಲ್ಲಿ ಸೋತರೆ ದೇಶವನ್ನು ಬಿಟ್ಟು ಹೋಗಬಹುದೇನೋ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಫ್ಲೋರಿಡಾ ಮತ್ತು ಜಾರ್ಜಿಯಾದಲ್ಲಿ ನಡೆದ ರ್‍ಯಾಲಿಗಳಲ್ಲಿ ಮಾತನಾಡಿದ, ಎದುರಾಳಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಿಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಅಂದುಕೊಂಡಂತೆ ಯಾವುದು ನಡೆಯುತ್ತಿಲ್ಲ ಎಂಬುದನ್ನು ಒಪ್ಪಿಕೊಂಡ ಅವರು, “ಅಧ್ಯಕ್ಷೀಯ ಚುನಾವಣೆಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಕೆಟ್ಟ ಅಭ್ಯರ್ಥಿಯ ವಿರುದ್ಧ ಸ್ಫರ್ಧಿಸಿರುವುದು ನನ್ನ ಮೇಲೆ ಒತ್ತಡ ಉಂಟುಮಾಡಿದೆ. ನಾನು ಸೋಲಬಹುದೆಂದು ನೀವು ಊಹಿಸಬಲ್ಲಿರಾ? ಹಾಗೇನಾದರೂ ಸೋತರೆ ನಾನು ಏನು ಮಾಡಲಿ? ಬಹುಶಃ ನಾನು ದೇಶ ಬಿಡಬಹುದು ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಚರ್ಚೆಯಲ್ಲಿ ಭಾಗವಹಿಸಲು ನಿರಾಕರಿಸಿದ ಟ್ರಂಪ್

ಅಮೆರಿಕದಲ್ಲಿ ಚುನಾವಣೆ ಜೊತೆಗೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿರುವುದರಿಂದ  ಟ್ರಂಪ್ ತಮ್ಮ ಗಮನವನ್ನು ಸಂಪೂರ್ಣವಾಗಿ ಪ್ರಮುಖ ರಿಪಬ್ಲಿಕನ್ ನೆಲೆಯ ಮೇಲೆ ಕೇಂದ್ರೀಕರಿಸಿದ್ದಾರೆ. ಅಲ್ಲಿಂದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಹೊರಹೊಮ್ಮುತ್ತಾರೆ ಎಂಬ ಭರವಸೆಯಲ್ಲಿದ್ದಾರೆ.

ಇತ್ತ, ಬಿಡೆನ್ ತಮ್ಮ ಚುನಾವಣಾ ಪ್ರಚಾರದಲ್ಲಿ, ಡೊನಾಲ್ಡ್ ಟ್ರಂಪ್ ಸರ್ಕಾರ ಕೊರೊನಾ ವೈರಸ್ ನಿಯಂತ್ರಣ ಮಾಡದ ವಿಚಾರವನ್ನು ಅಭಿಯಾನದ ಪ್ರಬಲ ವಿಷಯವಾಗಿಟ್ಟುಕೊಂಡಿದ್ದಾರೆ. ’ಈ ವೈರಸ್ ಪವಾಡದಂತೆ ಕಣ್ಮರೆಯಾಗಲಿದೆ ಎಂದು ಅವರು ನಮಗೆ ಹೇಳುತ್ತಲೇ ಇರುತ್ತಾರೆ ಆದರೆ ವಾಸ್ತವವಾಗಿ ಅದು ಮತ್ತಷ್ಟು ಹೆಚ್ಚುತ್ತಿದೆ’ ಎಂದಿದ್ದಾರೆ.

ರ್‍ಯಾಲಿಗಳಲ್ಲಿ ಬಿಡೆನ್ “ನಾವು ಭಯದ ಬದಲು ಭರವಸೆಯನ್ನು, ವಿಭಜನೆಯ ಬದಲು ಏಕತೆಯನ್ನು, ಕಲ್ಪನೆಗೆ ಬದಲು ವಿಜ್ಞಾನವನ್ನು, ಜೊತೆಗೆ ಸುಳ್ಳಿನ ಬದಲು ಸತ್ಯವನ್ನು ಆರಿಸಿಕೊಳ್ಳುತ್ತೇವೆ” ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ.


ಇದನ್ನೂ ಓದಿ: ಕೊರೊನಾ ಬಗ್ಗೆ ತಪ್ಪು ಮಾಹಿತಿ: ಟ್ರಂಪ್ ಟ್ವೀಟ್‌ ಅನ್ನು ನಿರ್ಬಂಧಿಸಿದ ಟ್ವಿಟ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...