Homeಮುಖಪುಟಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ಕೊರೊನಾ ವೈರಸ್ ಸಾಂಕ್ರಾಮಿಕದ ಆರಂಭದಲ್ಲಿ ಪ್ರಧಾನಿ ಮೋದಿ ಜನರಿಗೆ ಚಪ್ಪಾಳೆ ತಟ್ಟಲು ಮತ್ತು ಗಂಟೆ ಬಾರಿಸಲು ಕರೆ ನೀಡಿದ್ದನ್ನು ಶಾಸಕ ರಾಕೇಶ್ ರಾಥೋಡ್ ಟೀಕಿಸಿದ್ದರು

- Advertisement -
- Advertisement -

ಶಾಸಕರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನವಿಲ್ಲ. ನಾವು ಮಾಧ್ಯಮಗಳಿಗೆ ಹೆಚ್ಚಿನ ಹೇಳಿಕೆ ನೀಡಿದರೇ, ಮಾತನಾಡಿದರೇ ನಮ್ಮ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಬಹುದು ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ತಮ್ಮದೇ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಲಖನೌದಿಂದ 80 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಿಜೆಪಿ ಶಾಸಕ ರಾಕೇಶ್ ರಾಥೋಡ್ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ನಮ್ಮಂತಹ ಶಾಸಕರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನವಿಲ್ಲ, ನಾವು ಮಾಧ್ಯಮಗಳಿಗೆ ನೀಡುವ ಹೆಚ್ಚಿನ ಹೇಳಿಕೆಗಳು, ನಮ್ಮ ಮಾತುಗಳೂ ‘ದೇಶದ್ರೋಹ ಆರೋಪಕ್ಕೆ ಕಾರಣವಾಗಬಹುದು’ ಎಂದಿದ್ದಾರೆ.

ಸೀತಾಪುರದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರವನ್ನು ಮತ್ತೆ ಕಾರ್ಯಗತಗೊಳಿಸುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶಾಸಕ ರಾಕೇಶ್ ರಾಥೋಡ್, “ನಾನು ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇನೆ, ಆದರೆ ಶಾಸಕರಿಗೆ ಯಾವ ಸ್ಥಾನಮಾನವಿದೆ?. ನಾನು ಹೆಚ್ಚು ಮಾತನಾಡಿದರೆ, ನನ್ನ ವಿರುದ್ಧ ದೇಶದ್ರೋಹ ಆರೋಪ ಹೊರಿಸಬಹುದು” ಎಂದು ತಮ್ಮದೇ ಪಕ್ಷದ ವಿರುದ್ಧ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ತಮ್ಮದೆ ಪಕ್ಷದ ಸರ್ಕಾರ ಆಡಳಿತ ನಡೆಸುತ್ತಿರುವಾಗ ಶಾಸಕರಾಗಿ ತಮ್ಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, “ಇಲ್ಲಿ ಶಾಸಕರು ತಮ್ಮ ಮನಸ್ಸನ್ನು ಬಿಚ್ಚಿ ಮಾತನಾಡಬಲ್ಲರು ಎಂದು ನಿಮಗೆ ಅನ್ನಿಸುತ್ತಿದೆಯೇ? ನಾನು ಈ ಕುರಿತು ಹಿಂದೆಯೂ ಪ್ರಶ್ನೆ ಮಾಡಿದ್ದೇನೆಂದು ನಿಮಗೆ ತಿಳಿದಿಲ್ಲವೇ” ಎಂದಿದ್ದಾರೆ.

ಮೊದಲ ಬಾರಿಗೆ ಶಾಸಕರಾಗಿರುವ ರಾಕೇಶ್ ರಾಥೋಡ್ 2017 ರ ವಿಧಾನಸಭಾ ಚುನಾವಣೆಗೆ ಮೊದಲು ಬಿಜೆಪಿಗೆ ಸೇರಿದ್ದರು. ಮಾಯಾವತಿಯವರ ಬಹುಜನ ಸಮಾಜ ಪಕ್ಷದೊಂದಿಗೆ ನಂಟು ಹೊಂದಿದ್ದ ಇವರು,  ಈ ಹಿಂದೆ ಸ್ವತಂತ್ರರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಕಳೆದ ವರ್ಷ, ಕೊರೊನಾ ವೈರಸ್ ಸಾಂಕ್ರಾಮಿಕದ ಆರಂಭದಲ್ಲಿ ಪ್ರಧಾನಿ ಮೋದಿ ಜನರಿಗೆ ಚಪ್ಪಾಳೆ ತಟ್ಟಲು ಮತ್ತು ಗಂಟೆ ಬಾರಿಸಲು ಕರೆ ನೀಡಿದ್ದನ್ನು ಟೀಕಿಸಿದ್ದರು. ಮೋದಿಯವರನ್ನು ಟೀಕಿಸಿದ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬಿಜೆಪಿ ಈ ಕುರಿತು ಸ್ಪಷ್ಟನೆ ನೀಡುವಂತೆ ರಾಕೇಶ್ ರಾಥೋಡ್ ಅವರನ್ನು ಕೇಳಿತ್ತು.

ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು, ಸಾವುಗಳು ಅಧಿಕವಾಗುತ್ತಿದ್ದರೂ ಕೂಡ ಸರಿಯಾದ ಮಾಹಿತಿಯನ್ನು ರಾಜ್ಯ ಸರ್ಕಾರ ಮುಚ್ಚಿಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಜೊತೆಗೆ ಆಕ್ಸಿಜನ್ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೆ ಇಟ್ಟವರಿಗೆ ಬೆದರಿಕೆ ಒಡ್ಡಲಾಗಿತ್ತು.


ಇದನ್ನೂ ಓದಿ: ರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...