Homeಮುಖಪುಟಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಚುನಾವಣಾ ಆಯೋಗದಲ್ಲಿ ಈಗಾಗಲೇ ನೋಂದಣಿಯಾಗಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಈಗಾಗಲೇ ಪ್ರಚಾರ ಕಾರ್ಯ ಶುರು ಮಾಡಿರುವ ನಟ, ಮಕ್ಕಳ್ ನೀದಿ ಮಯ್ಯಂ ಮುಖ್ಯಸ್ಥ ಕಮಲ್ ಹಾಸನ್, ರಜನಿಕಾಂತ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಅವರೊಂದಿಗೆ ಕೈಜೋಡಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಕಮಲ್ ಹಾಸನ್ “ನಮ್ಮ ಸಿದ್ಧಾಂತವು ಹೋಲುತ್ತಿದ್ದರೆ, ನಮ್ಮ ಮೈತ್ರಿಯಿಂದ ಜನರಿಗೆ ಪ್ರಯೋಜನವಾಗುವಂತಿದ್ದರೇ, ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧ ”ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಹಿಂದೆ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ. ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಇತ್ತ ಶೀಘ್ರದಲ್ಲೇ ತಮ್ಮ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡಲು ನಟ ರಜನಿಕಾಂತ್ ಸಜ್ಜಾಗಿದ್ದಾರೆ. ಆದರೂ ಸಹ ರಜನಿಕಾಂತ್ ಅವರೊಂದಿಗೆ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದನ್ನು ಕಮಲ್ ಹಾಸನ್ ತಳ್ಳಿಹಾಕಿಲ್ಲ.

ನಟ ರಜನಿಕಾಂತ್‌ ತಮ್ಮ‌ ಹೊಸ ಪಕ್ಷ ಪ್ರಾರಂಭ ದಿನಾಂಕ ಮತ್ತು ಇತರ ವಿವರಗಳನ್ನು ಈ ತಿಂಗಳ 31 ರಂದು ತಿಳಿಸಲಾಗುವುದು ಎಂದು ಘೋಷಿಸಿದ್ದರು. ಈ ಹಿನ್ನಲೆಯಲ್ಲಿ, ಈಗಾಗಲೇ ಚುನಾವಣಾ ಆಯೋಗದಲ್ಲಿ ನೋಂದಾಯಿಸಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ.

ನಟ ಕಮಲ್ ಹಾಸನ್ ಡಿಸೆಂಬರ್ 13 ರಂದು 2021 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದ್ದು, ಡಿಸೆಂಬರ್‌ 16 ರಂದು ಮೊದಲ ಹಂತದ ಪ್ರಚಾರ ಕಾರ್ಯ ಕೊನೆಗೊಳ್ಳಲಿದೆ.

ಈ ನಾಲ್ಕು ದಿನಗಳ ವೇಳಾಪಟ್ಟಿಯಲ್ಲಿ ಮಧುರೈ, ಥೇಣಿ, ದಿಂಡಿಗಲ್, ವಿರುಧುನಗರ್​, ತಿರುಣಲ್​ವೇಲಿ, ಟುಟುಕೊರಿನ್ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ತಮ್ಮ ಪ್ರಚಾರದಲ್ಲಿ ಮಧುರೈ ಅನ್ನು ಎರಡನೇ ರಾಜಧಾನಿ ಮಾಡುವ ಭರವಸೆ ನೀಡಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಪಕ್ಷವು ಸುಮಾರು 4 ಶೇಕಡಾ ಮತಗಳನ್ನು ಗಳಿಸಿದೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ನಟಿ, ರಾಜಕಾರಣಿ ಖುಷ್ಬೂ, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿಗಳಾದ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಕೂಡ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಬಿಜೆಪಿ ಕೂಡ ವೆಟ್ರಿವೇಲ್ ಯಾತ್ರೆ ನಡೆಸಿ ಜನರಲ್ಲಿ ಧರ್ಮದ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...