Homeಮುಖಪುಟಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಚುನಾವಣಾ ಆಯೋಗದಲ್ಲಿ ಈಗಾಗಲೇ ನೋಂದಣಿಯಾಗಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಈಗಾಗಲೇ ಪ್ರಚಾರ ಕಾರ್ಯ ಶುರು ಮಾಡಿರುವ ನಟ, ಮಕ್ಕಳ್ ನೀದಿ ಮಯ್ಯಂ ಮುಖ್ಯಸ್ಥ ಕಮಲ್ ಹಾಸನ್, ರಜನಿಕಾಂತ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಅವರೊಂದಿಗೆ ಕೈಜೋಡಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಕಮಲ್ ಹಾಸನ್ “ನಮ್ಮ ಸಿದ್ಧಾಂತವು ಹೋಲುತ್ತಿದ್ದರೆ, ನಮ್ಮ ಮೈತ್ರಿಯಿಂದ ಜನರಿಗೆ ಪ್ರಯೋಜನವಾಗುವಂತಿದ್ದರೇ, ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧ ”ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಹಿಂದೆ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ. ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಇತ್ತ ಶೀಘ್ರದಲ್ಲೇ ತಮ್ಮ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡಲು ನಟ ರಜನಿಕಾಂತ್ ಸಜ್ಜಾಗಿದ್ದಾರೆ. ಆದರೂ ಸಹ ರಜನಿಕಾಂತ್ ಅವರೊಂದಿಗೆ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದನ್ನು ಕಮಲ್ ಹಾಸನ್ ತಳ್ಳಿಹಾಕಿಲ್ಲ.

ನಟ ರಜನಿಕಾಂತ್‌ ತಮ್ಮ‌ ಹೊಸ ಪಕ್ಷ ಪ್ರಾರಂಭ ದಿನಾಂಕ ಮತ್ತು ಇತರ ವಿವರಗಳನ್ನು ಈ ತಿಂಗಳ 31 ರಂದು ತಿಳಿಸಲಾಗುವುದು ಎಂದು ಘೋಷಿಸಿದ್ದರು. ಈ ಹಿನ್ನಲೆಯಲ್ಲಿ, ಈಗಾಗಲೇ ಚುನಾವಣಾ ಆಯೋಗದಲ್ಲಿ ನೋಂದಾಯಿಸಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ.

ನಟ ಕಮಲ್ ಹಾಸನ್ ಡಿಸೆಂಬರ್ 13 ರಂದು 2021 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದ್ದು, ಡಿಸೆಂಬರ್‌ 16 ರಂದು ಮೊದಲ ಹಂತದ ಪ್ರಚಾರ ಕಾರ್ಯ ಕೊನೆಗೊಳ್ಳಲಿದೆ.

ಈ ನಾಲ್ಕು ದಿನಗಳ ವೇಳಾಪಟ್ಟಿಯಲ್ಲಿ ಮಧುರೈ, ಥೇಣಿ, ದಿಂಡಿಗಲ್, ವಿರುಧುನಗರ್​, ತಿರುಣಲ್​ವೇಲಿ, ಟುಟುಕೊರಿನ್ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ತಮ್ಮ ಪ್ರಚಾರದಲ್ಲಿ ಮಧುರೈ ಅನ್ನು ಎರಡನೇ ರಾಜಧಾನಿ ಮಾಡುವ ಭರವಸೆ ನೀಡಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಪಕ್ಷವು ಸುಮಾರು 4 ಶೇಕಡಾ ಮತಗಳನ್ನು ಗಳಿಸಿದೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ನಟಿ, ರಾಜಕಾರಣಿ ಖುಷ್ಬೂ, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿಗಳಾದ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಕೂಡ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಬಿಜೆಪಿ ಕೂಡ ವೆಟ್ರಿವೇಲ್ ಯಾತ್ರೆ ನಡೆಸಿ ಜನರಲ್ಲಿ ಧರ್ಮದ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...