Homeಮುಖಪುಟಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಚುನಾವಣಾ ಆಯೋಗದಲ್ಲಿ ಈಗಾಗಲೇ ನೋಂದಣಿಯಾಗಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಈಗಾಗಲೇ ಪ್ರಚಾರ ಕಾರ್ಯ ಶುರು ಮಾಡಿರುವ ನಟ, ಮಕ್ಕಳ್ ನೀದಿ ಮಯ್ಯಂ ಮುಖ್ಯಸ್ಥ ಕಮಲ್ ಹಾಸನ್, ರಜನಿಕಾಂತ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಅವರೊಂದಿಗೆ ಕೈಜೋಡಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಕಮಲ್ ಹಾಸನ್ “ನಮ್ಮ ಸಿದ್ಧಾಂತವು ಹೋಲುತ್ತಿದ್ದರೆ, ನಮ್ಮ ಮೈತ್ರಿಯಿಂದ ಜನರಿಗೆ ಪ್ರಯೋಜನವಾಗುವಂತಿದ್ದರೇ, ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧ ”ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಹಿಂದೆ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ. ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಇತ್ತ ಶೀಘ್ರದಲ್ಲೇ ತಮ್ಮ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡಲು ನಟ ರಜನಿಕಾಂತ್ ಸಜ್ಜಾಗಿದ್ದಾರೆ. ಆದರೂ ಸಹ ರಜನಿಕಾಂತ್ ಅವರೊಂದಿಗೆ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದನ್ನು ಕಮಲ್ ಹಾಸನ್ ತಳ್ಳಿಹಾಕಿಲ್ಲ.

ನಟ ರಜನಿಕಾಂತ್‌ ತಮ್ಮ‌ ಹೊಸ ಪಕ್ಷ ಪ್ರಾರಂಭ ದಿನಾಂಕ ಮತ್ತು ಇತರ ವಿವರಗಳನ್ನು ಈ ತಿಂಗಳ 31 ರಂದು ತಿಳಿಸಲಾಗುವುದು ಎಂದು ಘೋಷಿಸಿದ್ದರು. ಈ ಹಿನ್ನಲೆಯಲ್ಲಿ, ಈಗಾಗಲೇ ಚುನಾವಣಾ ಆಯೋಗದಲ್ಲಿ ನೋಂದಾಯಿಸಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ.

ನಟ ಕಮಲ್ ಹಾಸನ್ ಡಿಸೆಂಬರ್ 13 ರಂದು 2021 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದ್ದು, ಡಿಸೆಂಬರ್‌ 16 ರಂದು ಮೊದಲ ಹಂತದ ಪ್ರಚಾರ ಕಾರ್ಯ ಕೊನೆಗೊಳ್ಳಲಿದೆ.

ಈ ನಾಲ್ಕು ದಿನಗಳ ವೇಳಾಪಟ್ಟಿಯಲ್ಲಿ ಮಧುರೈ, ಥೇಣಿ, ದಿಂಡಿಗಲ್, ವಿರುಧುನಗರ್​, ತಿರುಣಲ್​ವೇಲಿ, ಟುಟುಕೊರಿನ್ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ತಮ್ಮ ಪ್ರಚಾರದಲ್ಲಿ ಮಧುರೈ ಅನ್ನು ಎರಡನೇ ರಾಜಧಾನಿ ಮಾಡುವ ಭರವಸೆ ನೀಡಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಪಕ್ಷವು ಸುಮಾರು 4 ಶೇಕಡಾ ಮತಗಳನ್ನು ಗಳಿಸಿದೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ನಟಿ, ರಾಜಕಾರಣಿ ಖುಷ್ಬೂ, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿಗಳಾದ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಕೂಡ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಬಿಜೆಪಿ ಕೂಡ ವೆಟ್ರಿವೇಲ್ ಯಾತ್ರೆ ನಡೆಸಿ ಜನರಲ್ಲಿ ಧರ್ಮದ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...