Homeಮುಖಪುಟತನಗೆ ಮೂಲಭೂತ ಹಕ್ಕುಗಳಿದ್ದರೆ, ಜಾರಿ ನಿರ್ದೇಶನಾಲಯ ಜನರ ಹಕ್ಕುಗಳ ಬಗ್ಗೆಯೂ ಯೋಚಿಸಬೇಕು: ಸುಪ್ರೀಂ ಕೋರ್ಟ್

ತನಗೆ ಮೂಲಭೂತ ಹಕ್ಕುಗಳಿದ್ದರೆ, ಜಾರಿ ನಿರ್ದೇಶನಾಲಯ ಜನರ ಹಕ್ಕುಗಳ ಬಗ್ಗೆಯೂ ಯೋಚಿಸಬೇಕು: ಸುಪ್ರೀಂ ಕೋರ್ಟ್

- Advertisement -
- Advertisement -

ತನಗೆ ಮೂಲಭೂತ ಹಕ್ಕುಗಳಿದ್ದರೆ, ಜಾರಿ ನಿರ್ದೇಶನಲಾಯ (ಇಡಿ0 ಜನರ ಹಕ್ಕುಗಳ ಬಗ್ಗೆಯೂ ಯೋಚಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಾಗರಿಕ್ ಅಪೂರ್ಣಿ ನಿಗಮ್ (ಎನ್‌ಎಎನ್) ಹಗರಣ ಪ್ರಕರಣವನ್ನು ಛತ್ತೀಸ್‌ಗಢದಿಂದ ನವದೆಹಲಿಗೆ ವರ್ಗಾಯಿಸುವಂತೆ ಕೋರಿ ತನಿಖಾ ಸಂಸ್ಥೆ ಸಲ್ಲಿಸಿದ ಮನವಿಯನ್ನು ಕೋರ್ಟ್‌ ಇಂದು ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವ್ಯಕ್ತಿಗಳಿಗೆ ಮೀಸಲಾದ ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ರಿಟ್ ಅರ್ಜಿಯನ್ನು ಹೇಗೆ ಸಲ್ಲಿಸಿದೆ ಎಂದು ಇಡಿಯನ್ನು ಪ್ರಶ್ನಿಸಿತು.

ಸಂವಿಧಾನದ 32 ನೇ ವಿಧಿಯು ‘ಸಾಂವಿಧಾನಿಕ ಪರಿಹಾರಗಳ ಹಕ್ಕನ್ನು’ ಖಾತರಿಪಡಿಸುತ್ತದೆ, ವ್ಯಕ್ತಿಗಳು ತಮ್ಮ ಮೂಲಭೂತ ಹಕ್ಕುಗಳ ಉಲ್ಲಂಘನೆಗಾಗಿ ಸುಪ್ರೀಂ ಕೋರ್ಟ್‌ನಿಂದ ಪರಿಹಾರವನ್ನು ಪಡೆಯಲು ಅಧಿಕಾರ ನೀಡುತ್ತದೆ, ಈ ಹಕ್ಕುಗಳ ಜಾರಿಗಾಗಿ ಅವರು ನೇರವಾಗಿ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ನೀಡುತ್ತದೆ.

ಪೀಠದ ಹೇಳಿಕೆಗಳನ್ನು ಅನುಸರಿಸಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅರ್ಜಿಯನ್ನು ಹಿಂಪಡೆಯಲು ಅದರ ಅನುಮತಿಯನ್ನು ಕೋರಿದರು. “ಇಡಿಗೂ ಮೂಲಭೂತ ಹಕ್ಕುಗಳಿವೆ” ಎಂದು ಹೇಳಿದರು. “ಸುಲಭವಾಗಿ ಹೇಳುವುದಾದರೆ, ಇಡಿಗೆ ಮೂಲಭೂತ ಹಕ್ಕುಗಳಿದ್ದರೆ, ಅದು ಜನರ ಮೂಲಭೂತ ಹಕ್ಕುಗಳ ಬಗ್ಗೆಯೂ ಯೋಚಿಸಬೇಕು” ಎಂದು ಪೀಠ ಹೇಳಿದೆ. ನಂತರ, ನ್ಯಾಯಾಲಯವು ರಾಜು ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿತು.

ಛತ್ತೀಸ್‌ಗಢದಲ್ಲಿ ಪ್ರಕರಣದಲ್ಲಿ ಮಾಜಿ ಐಎಎಸ್ ಅಧಿಕಾರಿ ಅನಿಲ್ ತುತೇಜಾ ಅವರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ಹೇಳಿಕೊಂಡಿದೆ.

ಬಹುಕೋಟಿ ರೂಪಾಯಿಗಳ ಎನ್‌ಎಎನ್ ಹಗರಣದಿಂದ ಉಂಟಾದ ಹಣ ವರ್ಗಾವಣೆ ಪ್ರಕರಣದ ಕೆಲವು ಆರೋಪಿಗಳಿಗೆ ನ್ಯಾಯಾಂಗ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಛತ್ತೀಸ್‌ಗಢದ ಕೆಲವು ಸಾಂವಿಧಾನಿಕ ಅಧಿಕಾರಿಗಳು ಹೈಕೋರ್ಟ್ ನ್ಯಾಯಾಧೀಶರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತನಿಖಾ ಸಂಸ್ಥೆ ಇತ್ತೀಚೆಗೆ ಆಘಾತಕಾರಿ ಹೇಳಿಕೆ ನೀಡಿದೆ.

ಪಿಎಂಎಲ್‌ಎ ಪ್ರಕರಣವನ್ನು ಛತ್ತೀಸ್‌ಗಢದಿಂದ ಹೊರಗೆ ವರ್ಗಾಯಿಸಲು ಕೋರುವುದರ ಜೊತೆಗೆ, ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲವು ಉನ್ನತ ವ್ಯಕ್ತಿಗಳಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಇಡಿ ಕೋರಿತು.

2019 ರಲ್ಲಿ, ಛತ್ತೀಸ್‌ಗಢ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ಮತ್ತು ನಾಗರಿಕ ಪೂರೈಕೆ ಹಗರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಸಲ್ಲಿಸಿದ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್ ಆಧರಿಸಿ, ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಇಡಿ ದೂರು ದಾಖಲಿಸಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (ಪಿಡಿಎಸ್) ನಡೆದಿದೆ ಎನ್ನಲಾದ ಹಗರಣವು ಫೆಬ್ರವರಿ 2015 ರಲ್ಲಿ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವು ಪಿಡಿಎಸ್ ವ್ಯವಸ್ಥೆಯ ಪರಿಣಾಮಕಾರಿ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳುವ ನೋಡಲ್ ಏಜೆನ್ಸಿಯಾದ ಎನ್‌ಎಎನ್‌ನ ಕೆಲವು ಕಚೇರಿಗಳ ಮೇಲೆ ದಾಳಿ ನಡೆಸಿ ಒಟ್ಟು 3.64 ಕೋಟಿ ರೂ.ಗಳ ಲೆಕ್ಕವಿಲ್ಲದ ಹಣವನ್ನು ವಶಪಡಿಸಿಕೊಂಡಾಗ ಬೆಳಕಿಗೆ ಬಂದಿತು.

ದಾಳಿಯ ಸಮಯದಲ್ಲಿ ಸಂಗ್ರಹಿಸಲಾದ ಅನೇಕ ಅಕ್ಕಿ ಮತ್ತು ಉಪ್ಪಿನ ಮಾದರಿಗಳನ್ನು ಅವುಗಳ ಗುಣಮಟ್ಟಕ್ಕಾಗಿ ಪರೀಕ್ಷಿಸಲಾಯಿತು. ಅವು ಕಳಪೆ ಗುಣಮಟ್ಟದ್ದಾಗಿದ್ದು ಮಾನವ ಬಳಕೆಗೆ ಅನರ್ಹವಾಗಿವೆ ಎಂದು ಹೇಳಲಾಗಿದೆ. ತುತೇಜಾ ಎನ್‌ಎಎನ್‌ನ ಅಧ್ಯಕ್ಷರಾಗಿದ್ದಾಗ, ಶುಕ್ಲಾ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಬಂಗಾಳದಲ್ಲಿ ತೀವ್ರಗೊಂಡ ವಕ್ಫ್ ವಿರುದ್ಧದ ಪ್ರತಿಭಟನೆ; ಕಾಯ್ದೆ ರದ್ದುಗೊಳಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...