Homeಮುಖಪುಟಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

ಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

- Advertisement -
- Advertisement -

ಕೊರೊನಾದಿಂದಾಗಿ ಬಂದ್‌ ಆಗಿದ್ದ ದೆಹಲಿಯ ಶಾಲೆಗಳು ಸುಮಾರು 1.5 ವರ್ಷಗಳ ನಂತರ ಕಟ್ಟುನಿಟ್ಟಾದ ಸುರಕ್ಷತಾ ಪ್ರೋಟೋಕಾಲ್ ನಡುವೆ ಬುಧವಾರ(ಇಂದು)ದಿಂದ ತೆರೆಯುತ್ತಿದೆ. ಆದರೆ 9-12 ತರಗತಿಳಿಗೆ ಮಾತ್ರ ದೆಹಲಿ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಮತ್ತೆ ತೆರೆಯುವ ನಿರ್ಧಾರವನ್ನು ಇನ್ನು ಮುಂದೆ ವಿಳಂಬ ಮಾಡಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

“ಒಂದು ವೇಳೆ ಇನ್ನೂ ವಿಳಂಬ ಮಾಡಿದರೆ ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ಪ್ರತಿಪಾದಿಸಿದ್ದಾರೆ. ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಕೋಚಿಂಗ್ ಸಂಸ್ಥೆಗಳು ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಮತ್ತೆ ತೆರೆಯಲಾಗುತ್ತಿದೆ.

ಶಿಕ್ಷಕರಿಗೆ ವ್ಯಾಕ್ಸಿನೇಷನ್, ತರಗತಿಗಳಲ್ಲಿ 50% ರಷ್ಟು ಆಸನ ಸಾಮರ್ಥ್ಯ, ತೆರೆದ ಪ್ರದೇಶದಲ್ಲಿ ಊಟದ ವಿರಾಮಗಳು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ಹೇಳಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

“ಕಳೆದ 1.5 ವರ್ಷಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸಿದ್ದಾರೆ. ನಾವೆಲ್ಲರೂ ಅವರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದೇವೆ … ಜೊತೆಗೆ ಅವರ ಅಧ್ಯಯನದ ಬಗ್ಗೆಯು. ಶಾಲೆ ತೆರೆಯುವ ಬಗ್ಗೆ ನಾವು ಸಲಹೆಗಳನ್ನು ಕೇಳಿದಾಗ, 70% ದಷ್ಟು ಪೋಷಕರು ಶಾಲೆಗಳನ್ನು ತೆರೆಯಲು ಬಯಸಿದ್ದಾರೆ. ಹೆಚ್ಚಿನ ಪೋಷಕರು ಪ್ರೋಟೋಕಾಲ್ ಅನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ” ಎಂದು ಹೇಳಿದ್ದಾರೆ.

“ಚಿಕ್ಕ ಮಕ್ಕಳಿಗೆ ಕಡಿಮೆ ಅಪಾಯವಿರುವುದರಿಂದ ತಜ್ಞರು ಕೂಡಾ ಪ್ರಾಥಮಿಕ ಶಾಲೆಗಳನ್ನು ಪುನಃ ತೆರೆಯಬಹುದು ಎಂದು ಹೇಳಿದ್ದಾರೆ. ಆದ್ದರಿಂದ ನಾವು 9 ರಿಂದ 12 ನೇ ತರಗತಿಯ ಶಾಲೆಗಳನ್ನು ಆರಂಭಿಸಲು ಯೋಚಿಸಿದ್ದೇವೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ನಿರ್ಣಾಯಕ ವರ್ಷವನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ, ದೆಹಲಿ ಸರ್ಕಾರವು ಸೇತು ಬಂಧ ಕೋರ್ಸ್‌ಗಳನ್ನು ನಡೆಸಲು ಯೋಜಿಸಿದೆ. “ಸಾಂಕ್ರಾಮಿಕ ರೋಗವು ನಮ್ಮ ದಾರಿಯಲ್ಲಿ ಸಾಕಷ್ಟು ಸವಾಲುಗಳನ್ನು ಒಡ್ಡಿದೆ. ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಇದನ್ನು ಅಪಾಯಕಾರಿ ನಿರ್ಧಾರ ಎಂದು ಕರೆಯಬಹುದು, ಆದರೆ ವಿದ್ಯಾರ್ಥಿಗಳು ಅವರಿಗೆ ಬೇಕಾಗದ ಸಾಕಷ್ಟು ಸಂಪನ್ಮೂಲಗಳನ್ನು ಪಡೆಯಲು ಸಾಧ್ಯವಾಗದೆ ಅಪಾಯದಲ್ಲಿದ್ದಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಸ್ತುತ, ದೆಹಲಿಯಲ್ಲಿ ಪ್ರತಿದಿನ 30-35 ಕೊರೊನಾ ಪ್ರಕರಣಗಳು ವರದಿಯಾಗುತ್ತಿದೆ. ನಾವೀಗ ಮುಂದುವರೆಯಬೇಕು, ಈ ನಿರ್ಧಾರವು ಇನ್ನಷ್ಟು ವಿಳಂಬವಾದರೆ, ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...