Homeಮುಖಪುಟಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

ಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

- Advertisement -
- Advertisement -

ಕೊರೊನಾದಿಂದಾಗಿ ಬಂದ್‌ ಆಗಿದ್ದ ದೆಹಲಿಯ ಶಾಲೆಗಳು ಸುಮಾರು 1.5 ವರ್ಷಗಳ ನಂತರ ಕಟ್ಟುನಿಟ್ಟಾದ ಸುರಕ್ಷತಾ ಪ್ರೋಟೋಕಾಲ್ ನಡುವೆ ಬುಧವಾರ(ಇಂದು)ದಿಂದ ತೆರೆಯುತ್ತಿದೆ. ಆದರೆ 9-12 ತರಗತಿಳಿಗೆ ಮಾತ್ರ ದೆಹಲಿ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಮತ್ತೆ ತೆರೆಯುವ ನಿರ್ಧಾರವನ್ನು ಇನ್ನು ಮುಂದೆ ವಿಳಂಬ ಮಾಡಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

“ಒಂದು ವೇಳೆ ಇನ್ನೂ ವಿಳಂಬ ಮಾಡಿದರೆ ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ಪ್ರತಿಪಾದಿಸಿದ್ದಾರೆ. ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಕೋಚಿಂಗ್ ಸಂಸ್ಥೆಗಳು ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಮತ್ತೆ ತೆರೆಯಲಾಗುತ್ತಿದೆ.

ಶಿಕ್ಷಕರಿಗೆ ವ್ಯಾಕ್ಸಿನೇಷನ್, ತರಗತಿಗಳಲ್ಲಿ 50% ರಷ್ಟು ಆಸನ ಸಾಮರ್ಥ್ಯ, ತೆರೆದ ಪ್ರದೇಶದಲ್ಲಿ ಊಟದ ವಿರಾಮಗಳು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ಹೇಳಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

“ಕಳೆದ 1.5 ವರ್ಷಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸಿದ್ದಾರೆ. ನಾವೆಲ್ಲರೂ ಅವರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದೇವೆ … ಜೊತೆಗೆ ಅವರ ಅಧ್ಯಯನದ ಬಗ್ಗೆಯು. ಶಾಲೆ ತೆರೆಯುವ ಬಗ್ಗೆ ನಾವು ಸಲಹೆಗಳನ್ನು ಕೇಳಿದಾಗ, 70% ದಷ್ಟು ಪೋಷಕರು ಶಾಲೆಗಳನ್ನು ತೆರೆಯಲು ಬಯಸಿದ್ದಾರೆ. ಹೆಚ್ಚಿನ ಪೋಷಕರು ಪ್ರೋಟೋಕಾಲ್ ಅನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ” ಎಂದು ಹೇಳಿದ್ದಾರೆ.

“ಚಿಕ್ಕ ಮಕ್ಕಳಿಗೆ ಕಡಿಮೆ ಅಪಾಯವಿರುವುದರಿಂದ ತಜ್ಞರು ಕೂಡಾ ಪ್ರಾಥಮಿಕ ಶಾಲೆಗಳನ್ನು ಪುನಃ ತೆರೆಯಬಹುದು ಎಂದು ಹೇಳಿದ್ದಾರೆ. ಆದ್ದರಿಂದ ನಾವು 9 ರಿಂದ 12 ನೇ ತರಗತಿಯ ಶಾಲೆಗಳನ್ನು ಆರಂಭಿಸಲು ಯೋಚಿಸಿದ್ದೇವೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ನಿರ್ಣಾಯಕ ವರ್ಷವನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ, ದೆಹಲಿ ಸರ್ಕಾರವು ಸೇತು ಬಂಧ ಕೋರ್ಸ್‌ಗಳನ್ನು ನಡೆಸಲು ಯೋಜಿಸಿದೆ. “ಸಾಂಕ್ರಾಮಿಕ ರೋಗವು ನಮ್ಮ ದಾರಿಯಲ್ಲಿ ಸಾಕಷ್ಟು ಸವಾಲುಗಳನ್ನು ಒಡ್ಡಿದೆ. ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಇದನ್ನು ಅಪಾಯಕಾರಿ ನಿರ್ಧಾರ ಎಂದು ಕರೆಯಬಹುದು, ಆದರೆ ವಿದ್ಯಾರ್ಥಿಗಳು ಅವರಿಗೆ ಬೇಕಾಗದ ಸಾಕಷ್ಟು ಸಂಪನ್ಮೂಲಗಳನ್ನು ಪಡೆಯಲು ಸಾಧ್ಯವಾಗದೆ ಅಪಾಯದಲ್ಲಿದ್ದಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಸ್ತುತ, ದೆಹಲಿಯಲ್ಲಿ ಪ್ರತಿದಿನ 30-35 ಕೊರೊನಾ ಪ್ರಕರಣಗಳು ವರದಿಯಾಗುತ್ತಿದೆ. ನಾವೀಗ ಮುಂದುವರೆಯಬೇಕು, ಈ ನಿರ್ಧಾರವು ಇನ್ನಷ್ಟು ವಿಳಂಬವಾದರೆ, ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...