Homeಕರ್ನಾಟಕದೆಹಲಿಯಲ್ಲಿ ವಿದ್ಯುತ್ ಉಚಿತ v/s ಕರ್ನಾಟಕದಲ್ಲಿ ದರ ಹೆಚ್ಚಳ!: ಆಪ್ ಪ್ರತಿಭಟನೆ

ದೆಹಲಿಯಲ್ಲಿ ವಿದ್ಯುತ್ ಉಚಿತ v/s ಕರ್ನಾಟಕದಲ್ಲಿ ದರ ಹೆಚ್ಚಳ!: ಆಪ್ ಪ್ರತಿಭಟನೆ

ಕೇಜ್ರಿವಾಲ್‌ ಮಾದರಿ ನೀತಿ ಕರ್ನಾಟಕದಲ್ಲಿ ಅಳವಡಿಸಿ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ತಾಕತ್ತು ಯಡಿಯೂರಪ್ಪನವರ ಸರ್ಕಾರಕ್ಕೆ ಇದೇಯೇ?

- Advertisement -
- Advertisement -

ದೆಹಲಿಯಲ್ಲಿ ಲಕ್ಷಾಂತರ ಕುಟುಂಬಗಳಿಗೆ 200 ಯೂನಿಟ್‌ವರೆಗೂ ವಿದ್ಯುತ್ ಉಚಿತವಾಗಿ ದೊರೆಯುತ್ತಿದೆ. ಆದರೆ ಕರ್ನಾಟಕದಲ್ಲಿ 200 ಯೂನಿಟ್ ವಿದ್ಯುತ್ ಬಳಕೆಗೆ 1523ರೂ ಪಾವತಿಸಬೇಕಾಗಿದೆ. ಒಂದು ವೇಳೆ ನೀವು 400 ಯೂನಿಟ್ ಬಳಸಿದರೆ ದೆಹಲಿಯಲ್ಲಿ 1000 ರೂ ದರ ಪಾವತಿಸಬೇಕು. ಆದರೆ ಕರ್ನಾಟಕದಲ್ಲಿ ಮಾತ್ರ 3360 ರೂ ಪಾವತಿಸಬೇಕು? ಈ ಅಗಾಧ ತಾರತಮ್ಯ ಖಂಡಿಸಿ, ವಿದ್ಯುತ್ ದರ ಹೆಚ್ಚಿಸಿರುವ ಕರ್ನಾಟಕ ಸರ್ಕಾರದ ಕ್ರಮ ಖಂಡಿಸಿ ಆಮ್‌ ಆದ್ಮಿ ಪಕ್ಷ ಪ್ರತಿಭಟನೆ ಆರಂಭಿಸಿದೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿಯ ಕಾವೇರಿ ಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ “ಇಡೀ ದೇಶಕ್ಕೆ ಮಾದರಿಯಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಮಾದರಿ ವಿದ್ಯುಚ್ಛಕ್ತಿ ನೀತಿಯನ್ನು ಕರ್ನಾಟಕ ರಾಜ್ಯದಲ್ಲಿ ಅಳವಡಿಸಿ 200 ಯುನಿಟ್‌ ವಿದ್ಯುತ್ಛಕ್ತಿಯನ್ನು ಉಚಿತವಾಗಿ ನೀಡುವ ತಾಕತ್ತು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದೇಯೇ” ಎಂದು ಪ್ರಶ್ನಿಸಿದ್ದಾರೆ.

ದೆಹಲಿ ರಾಜ್ಯ ಕಿಂಚಿತ್ತೂ ವಿದ್ಯುತ್‌ ಉತ್ಪಾದನೆ ಮಾಡುವುದಿಲ್ಲ. ಎಲ್ಲವನ್ನೂ ಖಾಸಗಿ ಕಂಪೆನಿಗಳಿಂದ ಖರೀದಿಸಿ ವಿತರಿಸುತ್ತದೆ. ಆದರೂ ತನ್ನ ರಾಜ್ಯದ ಜನರಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಆದರೆ ವಿದ್ಯುತ್ ಉತ್ಪಾದನೆಯಲ್ಲಿ ಶೇ 100 ರಷ್ಟು ಸ್ವಾವಲಂಭಿಯಾಗಿರುವ ನಮ್ಮ ಕರ್ನಾಟಕ ರಾಜ್ಯ ಶೇ 6 ರಷ್ಟು ದರ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಅಧಿಕಾರದ ಅವಧಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿದ್ಯುತ್ ಖರೀದಿಯಲ್ಲಿ ಸಾಕಷ್ಟು ಹಗರಣ ನಡೆಸಿವೆ. ಅದರಿಂದಾದ ನಷ್ಟ ತುಂಬಿಕೊಳ್ಳಲು ದರ ಏರಿಸಿ ಜನ ಸಾಮಾನ್ಯರ ಮೇಲೆ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಈ ಕೂಡಲೇ ಈ ದರ ಹೆಚ್ಚಳದ ಆದೇಶವನ್ನು ಸರ್ಕಾರ ಹಿಂಪಡೆಯದೇ ಇದ್ದರೆ ಇಡೀ ರಾಜ್ಯದಾದ್ಯಂತ ಆಮ್ ಆದ್ಮಿ ಪಕ್ಷ ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಹಾಗೂ ನಾಳೆಯಿಂದ ನಮ್ಮ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಪ್ರತಿ ಮನೆ ಮನೆಗೆ ತೆರಳಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಕೆಟ್ಟ ಆಡಳಿತದ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದರು.

ಕಳೆದ ಶುಕ್ರವಾರ ಎಎಪಿ “ಶಾಕ್ ಬೇಡ” ಎನ್ನುವ ನೂತನ ಅಪ್ಲಿಕೇಶನ್‌ ಅಭಿವೃದ್ಧಿ ಪಡಿಸಿ ಬಿಡುಗಡೆ ಮಾಡಿತ್ತು. ಇದರಲ್ಲಿ ಕಳೆದ ತಿಂಗಳು ಬೆಂಗಳೂರಿನ ಜನರು ಪಾವತಿಸಿದ ವಿದ್ಯುತ್ ಬಿಲ್ ಮೊತ್ತವನ್ನು ನಮೂದಿಸಿ ನವೆಂಬರ್ ತಿಂಗಳು ಎಷ್ಟು ವಿದ್ಯುತ್‌ ಬಿಲ್‌ ಬರುತ್ತದೆ ಎಂದು ನೋಡಬಹುದು ಮತ್ತು ಅಷ್ಟೇ ಪ್ರಮಾಣದ ವಿದ್ಯುತ್‌ ಉಪಯೋಗಿಸುವ ದೆಹಲಿಯ ನಿವಾಸಿಗಳು ಎಷ್ಟು ಬಿಲ್‌ ಪಾವತಿಸುತ್ತಾರೆ ಎನ್ನುವುದನ್ನು ತುಲನೆ ಮಾಡಿ ನೋಡಬಹುದು ಎಂದು ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...