Homeಮುಖಪುಟಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

ಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

- Advertisement -
- Advertisement -

ಜೂನ್ 15ರೊಳಗೆ ತಮಗೆ ನ್ಯಾಯ ಸಿಗದಿದ್ದರೆ, ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಮರುಪ್ರಾರಂಭಿಸುವುದಾಗಿ ಭಾರತೀಯ ಕುಸ್ತಿಪಟುಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು, ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು, ”ಜೂನ್ 15ರೊಳಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು  ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ (ಡಬ್ಲ್ಯುಎಫ್‌ಐ) ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಶೀಘ್ರ ತನಿಖೆ ನಡೆಸುವುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭರವಸೆ ನೀಡಿದ ನಂತರ ಇದೀಗ ಭಾರತದ ಕುಸ್ತಿಪಟುಗಳು ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದಾರೆ.

ಕುಸ್ತಿಪಟುಗಳು ಏಪ್ರಿಲ್‌ನಿಂದ ಬ್ರಿಜ್ ಭೂಷಣ್ ಅವರ ಬಂಧನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೂ, ಈ ವರೆಗೂ ಯಾವುದೇ ಕ್ರ ಆಗಿಲ್ಲ. ಬ್ರಿಜ್‌ಭೂಷಣ್ ಸಿಂಗ್ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಆರು ಬಾರಿ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಈಗಾಗಲೇ ಲೈಂಗಿಕ ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಕುಸ್ತಿಪಟುಗಳ ಹೋರಟಕ್ಕೆ ಖಾಪ್ ಪಂಚಾಯತ್, ರೈತರು ಮತ್ತು ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರಂತಹ ಖ್ಯಾತ ಕ್ರೀಡಾಪಟುಗಳು ಬೆಂಬಲ ನೀಡಿದ್ದಾರೆ.

ಪುನಿಯಾ, ”ಆಟಗಾರರನ್ನು ಪಂಚಾಯ್ತಿ ಕರೆಯಲಾಗಿದೆ. ನಾವು ಸರ್ಕಾರದೊಂದಿಗೆ ಚರ್ಚಿಸಿದ್ದನ್ನು ನಾವು ಮುಂದಿಟ್ಟಿದ್ದೇವೆ. ಜೂನ್ 15ರೊಳಗೆ ಎಲ್ಲಾ ತನಿಖೆಗಳನ್ನು ನಡೆಸಲಾಗುವುದು ಎಂದು ಸರ್ಕಾರ ನಮಗೆ ಭರವಸೆ ನೀಡಿದೆ. ಜೂನ್ 15ರವರೆಗೆ ನಾವು ಕಾಯುತ್ತೇವೆ ಎಂದು ಪಂಚಾಯತ್ ಹೇಳಿದೆ. ಆದರೆ ಏನೂ ಆಗದಿದ್ದರೆ ನಾವು ಬೃಹತ್ ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

”ಬ್ರಿಜ್ ಭೂಷಣ್ ಅವರ ಕುಟುಂಬದಿಂದ ಯಾರೂ ಡಬ್ಲ್ಯುಎಫ್‌ಐಗೆ ಆಯ್ಕೆಯಾಗುವುದಿಲ್ಲ ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ” ಎಂದು ಪುನಿಯಾ ಹೇಳಿದರು.

ಇದನ್ನೂ ಓದಿ: ಈ ಭಯದ ವಾತಾವರಣದಲ್ಲಿ ನಮಗೆ ನ್ಯಾಯ ಸಿಗುವುದೇ?: ಕುಸ್ತಿಪಟು ವಿನೇಶ್ ಫೋಗಟ್ ಆತಂಕ

”ಜೂನ್ 15ರೊಳಗೆ ಪೊಲೀಸರು ಆರೋಪಪಟ್ಟಿ ಸಲ್ಲಿಸಬೇಕಾಗಿರುವುದರಿಂದ ನಾವೂ ತನಿಖೆಗೆ ಸಹಕರಿಸುತ್ತಿದ್ದೇವೆ. ನಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಸಿಂಗ್ ವಿರುದ್ಧ ಪ್ರತಿಭಟನಾ ನಿರತರಲ್ಲಿ ಮುಖ್ಯವಾದವರಲ್ಲಿ ಒಬ್ಬರಾದ ಕುಸ್ತಿಪಟು ವಿನೇಶ್ ಫೋಗಟ್ ಅವರು, ಈ ವಿಷಯದ ತನಿಖೆಯಲ್ಲಿ ಪೊಲೀಸರ ವಿಳಂಬವನ್ನು ಟೀಕಿಸಿದ್ದಾರೆ.

”ತರಬೇತಿ ಶಿಬಿರಗಳು ಮತ್ತು ಪಂದ್ಯಾವಳಿಗಳ ಸಮಯದಲ್ಲಿ, ಸಿಂಗ್ ಅಟವರು ಯುವ ಅಥ್ಲೀಟ್‌ಗಳನ್ನು ಪ್ರತ್ಯೇಕಿಸಲು ಮತ್ತು ಪದೇಪದೇ ಅವರನ್ನು ಮುಟ್ಟಲು ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಬಳಸುತ್ತಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

”ಈ ರೀತಿ ಅಸಹ್ಯಕರ ಘಟನೆಗಳಲ್ಲಿ ನಾನು ಬಲಿಪಶುಗಳ ನಡುವೆ ಇದ್ದೇನೆ” ಎಂದು ಅವರು ಹೇಳಿಕೊಂಡರು.

ಈ ಕುಸ್ತಿಪಟುಗಳ ದೂರುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನಿಯಾಗಿರುವುದಕ್ಕೆ ಫೋಗಟ್ ನಿರಾಶೆ ವ್ಯಕ್ತಪಡಿಸಿದ್ದಾರೆ.

”ಇದು ಭಾವನಾತ್ಮಕವಾಗಿ ಬರಿದಾಗಿದೆ, ಈ ಪ್ರಕರಣದ ಬಗ್ಗೆ ಪ್ರಧಾನಿ ಏನನ್ನೂ ಹೇಳಿಲ್ಲ” ಎಂದು ಫೋಗಟ್ ಹೇಳಿದರು.

”ಯಾರೂ ನಮ್ಮ ಮಾತನ್ನು ಕೇಳುತ್ತಿಲ್ಲ ಎಂಬ ಅಂಶವನ್ನು ಸಾರ್ವಜನಿಕರಿಗೆ ತಿಳಿಸಲು ಪ್ರತಿಭಟನೆಯನ್ನು ಪ್ರಾರಂಭಿಸಿದೆವು. ಖ್ಯಾತ ಕ್ರೀಡಾಪಟುಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ರಾಷ್ಟ್ರವು ತಿಳಿಯಬೇಕೆಂದು ನಾವು ಬಯಸುತ್ತೇವೆ” ಎಂದು ಫೋಗಟ್ ಹೇಳಿದರು.

ಜನವರಿಯಲ್ಲಿ, ನೊಂದ ಕುಸ್ತಿಪಟುಗಳಿಂದ ಸಂಕ್ಷಿಪ್ತ ಪ್ರತಿಭಟನೆಯನ್ನು ಪ್ರಾರಂಭಿಸಲಾಯಿತು. ಅವರು ಏಪ್ರಿಲ್ 23ರಂದು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದರು ಮತ್ತು ಮೇ 28ರಂದು ದೆಹಲಿ ಪೊಲೀಸರು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದರು.

ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಮತ್ತು ನಂತರ ಕ್ರೀಡಾ ಸಚಿವರನ್ನು ಭೇಟಿ ಮಾಡಲು ಒಪ್ಪುವ ಮೊದಲು ತಮ್ಮ ಪದಕಗಳನ್ನು ಗಂಗೆಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದರು.

ಜೂನ್ 15ರೊಳಗೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಠಾಕೂರ್ ಹೇಳಿದರು ಮತ್ತು ಅಲ್ಲಿಯವರೆಗೆ ಪ್ರದರ್ಶನ ನೀಡದಂತೆ ಕುಸ್ತಿಪಟುಗಳಿಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...