Homeಮುಖಪುಟಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

ಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

- Advertisement -
- Advertisement -

ಜೂನ್ 15ರೊಳಗೆ ತಮಗೆ ನ್ಯಾಯ ಸಿಗದಿದ್ದರೆ, ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಮರುಪ್ರಾರಂಭಿಸುವುದಾಗಿ ಭಾರತೀಯ ಕುಸ್ತಿಪಟುಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು, ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು, ”ಜೂನ್ 15ರೊಳಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು  ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ (ಡಬ್ಲ್ಯುಎಫ್‌ಐ) ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಶೀಘ್ರ ತನಿಖೆ ನಡೆಸುವುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭರವಸೆ ನೀಡಿದ ನಂತರ ಇದೀಗ ಭಾರತದ ಕುಸ್ತಿಪಟುಗಳು ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದಾರೆ.

ಕುಸ್ತಿಪಟುಗಳು ಏಪ್ರಿಲ್‌ನಿಂದ ಬ್ರಿಜ್ ಭೂಷಣ್ ಅವರ ಬಂಧನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೂ, ಈ ವರೆಗೂ ಯಾವುದೇ ಕ್ರ ಆಗಿಲ್ಲ. ಬ್ರಿಜ್‌ಭೂಷಣ್ ಸಿಂಗ್ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಆರು ಬಾರಿ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಈಗಾಗಲೇ ಲೈಂಗಿಕ ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಕುಸ್ತಿಪಟುಗಳ ಹೋರಟಕ್ಕೆ ಖಾಪ್ ಪಂಚಾಯತ್, ರೈತರು ಮತ್ತು ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರಂತಹ ಖ್ಯಾತ ಕ್ರೀಡಾಪಟುಗಳು ಬೆಂಬಲ ನೀಡಿದ್ದಾರೆ.

ಪುನಿಯಾ, ”ಆಟಗಾರರನ್ನು ಪಂಚಾಯ್ತಿ ಕರೆಯಲಾಗಿದೆ. ನಾವು ಸರ್ಕಾರದೊಂದಿಗೆ ಚರ್ಚಿಸಿದ್ದನ್ನು ನಾವು ಮುಂದಿಟ್ಟಿದ್ದೇವೆ. ಜೂನ್ 15ರೊಳಗೆ ಎಲ್ಲಾ ತನಿಖೆಗಳನ್ನು ನಡೆಸಲಾಗುವುದು ಎಂದು ಸರ್ಕಾರ ನಮಗೆ ಭರವಸೆ ನೀಡಿದೆ. ಜೂನ್ 15ರವರೆಗೆ ನಾವು ಕಾಯುತ್ತೇವೆ ಎಂದು ಪಂಚಾಯತ್ ಹೇಳಿದೆ. ಆದರೆ ಏನೂ ಆಗದಿದ್ದರೆ ನಾವು ಬೃಹತ್ ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

”ಬ್ರಿಜ್ ಭೂಷಣ್ ಅವರ ಕುಟುಂಬದಿಂದ ಯಾರೂ ಡಬ್ಲ್ಯುಎಫ್‌ಐಗೆ ಆಯ್ಕೆಯಾಗುವುದಿಲ್ಲ ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ” ಎಂದು ಪುನಿಯಾ ಹೇಳಿದರು.

ಇದನ್ನೂ ಓದಿ: ಈ ಭಯದ ವಾತಾವರಣದಲ್ಲಿ ನಮಗೆ ನ್ಯಾಯ ಸಿಗುವುದೇ?: ಕುಸ್ತಿಪಟು ವಿನೇಶ್ ಫೋಗಟ್ ಆತಂಕ

”ಜೂನ್ 15ರೊಳಗೆ ಪೊಲೀಸರು ಆರೋಪಪಟ್ಟಿ ಸಲ್ಲಿಸಬೇಕಾಗಿರುವುದರಿಂದ ನಾವೂ ತನಿಖೆಗೆ ಸಹಕರಿಸುತ್ತಿದ್ದೇವೆ. ನಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಸಿಂಗ್ ವಿರುದ್ಧ ಪ್ರತಿಭಟನಾ ನಿರತರಲ್ಲಿ ಮುಖ್ಯವಾದವರಲ್ಲಿ ಒಬ್ಬರಾದ ಕುಸ್ತಿಪಟು ವಿನೇಶ್ ಫೋಗಟ್ ಅವರು, ಈ ವಿಷಯದ ತನಿಖೆಯಲ್ಲಿ ಪೊಲೀಸರ ವಿಳಂಬವನ್ನು ಟೀಕಿಸಿದ್ದಾರೆ.

”ತರಬೇತಿ ಶಿಬಿರಗಳು ಮತ್ತು ಪಂದ್ಯಾವಳಿಗಳ ಸಮಯದಲ್ಲಿ, ಸಿಂಗ್ ಅಟವರು ಯುವ ಅಥ್ಲೀಟ್‌ಗಳನ್ನು ಪ್ರತ್ಯೇಕಿಸಲು ಮತ್ತು ಪದೇಪದೇ ಅವರನ್ನು ಮುಟ್ಟಲು ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಬಳಸುತ್ತಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

”ಈ ರೀತಿ ಅಸಹ್ಯಕರ ಘಟನೆಗಳಲ್ಲಿ ನಾನು ಬಲಿಪಶುಗಳ ನಡುವೆ ಇದ್ದೇನೆ” ಎಂದು ಅವರು ಹೇಳಿಕೊಂಡರು.

ಈ ಕುಸ್ತಿಪಟುಗಳ ದೂರುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನಿಯಾಗಿರುವುದಕ್ಕೆ ಫೋಗಟ್ ನಿರಾಶೆ ವ್ಯಕ್ತಪಡಿಸಿದ್ದಾರೆ.

”ಇದು ಭಾವನಾತ್ಮಕವಾಗಿ ಬರಿದಾಗಿದೆ, ಈ ಪ್ರಕರಣದ ಬಗ್ಗೆ ಪ್ರಧಾನಿ ಏನನ್ನೂ ಹೇಳಿಲ್ಲ” ಎಂದು ಫೋಗಟ್ ಹೇಳಿದರು.

”ಯಾರೂ ನಮ್ಮ ಮಾತನ್ನು ಕೇಳುತ್ತಿಲ್ಲ ಎಂಬ ಅಂಶವನ್ನು ಸಾರ್ವಜನಿಕರಿಗೆ ತಿಳಿಸಲು ಪ್ರತಿಭಟನೆಯನ್ನು ಪ್ರಾರಂಭಿಸಿದೆವು. ಖ್ಯಾತ ಕ್ರೀಡಾಪಟುಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ರಾಷ್ಟ್ರವು ತಿಳಿಯಬೇಕೆಂದು ನಾವು ಬಯಸುತ್ತೇವೆ” ಎಂದು ಫೋಗಟ್ ಹೇಳಿದರು.

ಜನವರಿಯಲ್ಲಿ, ನೊಂದ ಕುಸ್ತಿಪಟುಗಳಿಂದ ಸಂಕ್ಷಿಪ್ತ ಪ್ರತಿಭಟನೆಯನ್ನು ಪ್ರಾರಂಭಿಸಲಾಯಿತು. ಅವರು ಏಪ್ರಿಲ್ 23ರಂದು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದರು ಮತ್ತು ಮೇ 28ರಂದು ದೆಹಲಿ ಪೊಲೀಸರು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದರು.

ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಮತ್ತು ನಂತರ ಕ್ರೀಡಾ ಸಚಿವರನ್ನು ಭೇಟಿ ಮಾಡಲು ಒಪ್ಪುವ ಮೊದಲು ತಮ್ಮ ಪದಕಗಳನ್ನು ಗಂಗೆಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದರು.

ಜೂನ್ 15ರೊಳಗೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಠಾಕೂರ್ ಹೇಳಿದರು ಮತ್ತು ಅಲ್ಲಿಯವರೆಗೆ ಪ್ರದರ್ಶನ ನೀಡದಂತೆ ಕುಸ್ತಿಪಟುಗಳಿಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...