Homeಮುಖಪುಟಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

ಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

- Advertisement -
- Advertisement -

ಜೂನ್ 15ರೊಳಗೆ ತಮಗೆ ನ್ಯಾಯ ಸಿಗದಿದ್ದರೆ, ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಮರುಪ್ರಾರಂಭಿಸುವುದಾಗಿ ಭಾರತೀಯ ಕುಸ್ತಿಪಟುಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು, ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು, ”ಜೂನ್ 15ರೊಳಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು  ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ (ಡಬ್ಲ್ಯುಎಫ್‌ಐ) ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಶೀಘ್ರ ತನಿಖೆ ನಡೆಸುವುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭರವಸೆ ನೀಡಿದ ನಂತರ ಇದೀಗ ಭಾರತದ ಕುಸ್ತಿಪಟುಗಳು ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದಾರೆ.

ಕುಸ್ತಿಪಟುಗಳು ಏಪ್ರಿಲ್‌ನಿಂದ ಬ್ರಿಜ್ ಭೂಷಣ್ ಅವರ ಬಂಧನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೂ, ಈ ವರೆಗೂ ಯಾವುದೇ ಕ್ರ ಆಗಿಲ್ಲ. ಬ್ರಿಜ್‌ಭೂಷಣ್ ಸಿಂಗ್ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಆರು ಬಾರಿ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಈಗಾಗಲೇ ಲೈಂಗಿಕ ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಕುಸ್ತಿಪಟುಗಳ ಹೋರಟಕ್ಕೆ ಖಾಪ್ ಪಂಚಾಯತ್, ರೈತರು ಮತ್ತು ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರಂತಹ ಖ್ಯಾತ ಕ್ರೀಡಾಪಟುಗಳು ಬೆಂಬಲ ನೀಡಿದ್ದಾರೆ.

ಪುನಿಯಾ, ”ಆಟಗಾರರನ್ನು ಪಂಚಾಯ್ತಿ ಕರೆಯಲಾಗಿದೆ. ನಾವು ಸರ್ಕಾರದೊಂದಿಗೆ ಚರ್ಚಿಸಿದ್ದನ್ನು ನಾವು ಮುಂದಿಟ್ಟಿದ್ದೇವೆ. ಜೂನ್ 15ರೊಳಗೆ ಎಲ್ಲಾ ತನಿಖೆಗಳನ್ನು ನಡೆಸಲಾಗುವುದು ಎಂದು ಸರ್ಕಾರ ನಮಗೆ ಭರವಸೆ ನೀಡಿದೆ. ಜೂನ್ 15ರವರೆಗೆ ನಾವು ಕಾಯುತ್ತೇವೆ ಎಂದು ಪಂಚಾಯತ್ ಹೇಳಿದೆ. ಆದರೆ ಏನೂ ಆಗದಿದ್ದರೆ ನಾವು ಬೃಹತ್ ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

”ಬ್ರಿಜ್ ಭೂಷಣ್ ಅವರ ಕುಟುಂಬದಿಂದ ಯಾರೂ ಡಬ್ಲ್ಯುಎಫ್‌ಐಗೆ ಆಯ್ಕೆಯಾಗುವುದಿಲ್ಲ ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ” ಎಂದು ಪುನಿಯಾ ಹೇಳಿದರು.

ಇದನ್ನೂ ಓದಿ: ಈ ಭಯದ ವಾತಾವರಣದಲ್ಲಿ ನಮಗೆ ನ್ಯಾಯ ಸಿಗುವುದೇ?: ಕುಸ್ತಿಪಟು ವಿನೇಶ್ ಫೋಗಟ್ ಆತಂಕ

”ಜೂನ್ 15ರೊಳಗೆ ಪೊಲೀಸರು ಆರೋಪಪಟ್ಟಿ ಸಲ್ಲಿಸಬೇಕಾಗಿರುವುದರಿಂದ ನಾವೂ ತನಿಖೆಗೆ ಸಹಕರಿಸುತ್ತಿದ್ದೇವೆ. ನಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಸಿಂಗ್ ವಿರುದ್ಧ ಪ್ರತಿಭಟನಾ ನಿರತರಲ್ಲಿ ಮುಖ್ಯವಾದವರಲ್ಲಿ ಒಬ್ಬರಾದ ಕುಸ್ತಿಪಟು ವಿನೇಶ್ ಫೋಗಟ್ ಅವರು, ಈ ವಿಷಯದ ತನಿಖೆಯಲ್ಲಿ ಪೊಲೀಸರ ವಿಳಂಬವನ್ನು ಟೀಕಿಸಿದ್ದಾರೆ.

”ತರಬೇತಿ ಶಿಬಿರಗಳು ಮತ್ತು ಪಂದ್ಯಾವಳಿಗಳ ಸಮಯದಲ್ಲಿ, ಸಿಂಗ್ ಅಟವರು ಯುವ ಅಥ್ಲೀಟ್‌ಗಳನ್ನು ಪ್ರತ್ಯೇಕಿಸಲು ಮತ್ತು ಪದೇಪದೇ ಅವರನ್ನು ಮುಟ್ಟಲು ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಬಳಸುತ್ತಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

”ಈ ರೀತಿ ಅಸಹ್ಯಕರ ಘಟನೆಗಳಲ್ಲಿ ನಾನು ಬಲಿಪಶುಗಳ ನಡುವೆ ಇದ್ದೇನೆ” ಎಂದು ಅವರು ಹೇಳಿಕೊಂಡರು.

ಈ ಕುಸ್ತಿಪಟುಗಳ ದೂರುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನಿಯಾಗಿರುವುದಕ್ಕೆ ಫೋಗಟ್ ನಿರಾಶೆ ವ್ಯಕ್ತಪಡಿಸಿದ್ದಾರೆ.

”ಇದು ಭಾವನಾತ್ಮಕವಾಗಿ ಬರಿದಾಗಿದೆ, ಈ ಪ್ರಕರಣದ ಬಗ್ಗೆ ಪ್ರಧಾನಿ ಏನನ್ನೂ ಹೇಳಿಲ್ಲ” ಎಂದು ಫೋಗಟ್ ಹೇಳಿದರು.

”ಯಾರೂ ನಮ್ಮ ಮಾತನ್ನು ಕೇಳುತ್ತಿಲ್ಲ ಎಂಬ ಅಂಶವನ್ನು ಸಾರ್ವಜನಿಕರಿಗೆ ತಿಳಿಸಲು ಪ್ರತಿಭಟನೆಯನ್ನು ಪ್ರಾರಂಭಿಸಿದೆವು. ಖ್ಯಾತ ಕ್ರೀಡಾಪಟುಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ರಾಷ್ಟ್ರವು ತಿಳಿಯಬೇಕೆಂದು ನಾವು ಬಯಸುತ್ತೇವೆ” ಎಂದು ಫೋಗಟ್ ಹೇಳಿದರು.

ಜನವರಿಯಲ್ಲಿ, ನೊಂದ ಕುಸ್ತಿಪಟುಗಳಿಂದ ಸಂಕ್ಷಿಪ್ತ ಪ್ರತಿಭಟನೆಯನ್ನು ಪ್ರಾರಂಭಿಸಲಾಯಿತು. ಅವರು ಏಪ್ರಿಲ್ 23ರಂದು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದರು ಮತ್ತು ಮೇ 28ರಂದು ದೆಹಲಿ ಪೊಲೀಸರು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದರು.

ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಮತ್ತು ನಂತರ ಕ್ರೀಡಾ ಸಚಿವರನ್ನು ಭೇಟಿ ಮಾಡಲು ಒಪ್ಪುವ ಮೊದಲು ತಮ್ಮ ಪದಕಗಳನ್ನು ಗಂಗೆಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದರು.

ಜೂನ್ 15ರೊಳಗೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಠಾಕೂರ್ ಹೇಳಿದರು ಮತ್ತು ಅಲ್ಲಿಯವರೆಗೆ ಪ್ರದರ್ಶನ ನೀಡದಂತೆ ಕುಸ್ತಿಪಟುಗಳಿಗೆ ವಿನಂತಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದ ಎಸ್‌ಐಟಿ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದೀಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ...