Homeಮುಖಪುಟಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

ಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

- Advertisement -
- Advertisement -

ಜೂನ್ 15ರೊಳಗೆ ತಮಗೆ ನ್ಯಾಯ ಸಿಗದಿದ್ದರೆ, ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಮರುಪ್ರಾರಂಭಿಸುವುದಾಗಿ ಭಾರತೀಯ ಕುಸ್ತಿಪಟುಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು, ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು, ”ಜೂನ್ 15ರೊಳಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು  ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ (ಡಬ್ಲ್ಯುಎಫ್‌ಐ) ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಶೀಘ್ರ ತನಿಖೆ ನಡೆಸುವುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭರವಸೆ ನೀಡಿದ ನಂತರ ಇದೀಗ ಭಾರತದ ಕುಸ್ತಿಪಟುಗಳು ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದಾರೆ.

ಕುಸ್ತಿಪಟುಗಳು ಏಪ್ರಿಲ್‌ನಿಂದ ಬ್ರಿಜ್ ಭೂಷಣ್ ಅವರ ಬಂಧನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೂ, ಈ ವರೆಗೂ ಯಾವುದೇ ಕ್ರ ಆಗಿಲ್ಲ. ಬ್ರಿಜ್‌ಭೂಷಣ್ ಸಿಂಗ್ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಆರು ಬಾರಿ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಈಗಾಗಲೇ ಲೈಂಗಿಕ ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಕುಸ್ತಿಪಟುಗಳ ಹೋರಟಕ್ಕೆ ಖಾಪ್ ಪಂಚಾಯತ್, ರೈತರು ಮತ್ತು ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರಂತಹ ಖ್ಯಾತ ಕ್ರೀಡಾಪಟುಗಳು ಬೆಂಬಲ ನೀಡಿದ್ದಾರೆ.

ಪುನಿಯಾ, ”ಆಟಗಾರರನ್ನು ಪಂಚಾಯ್ತಿ ಕರೆಯಲಾಗಿದೆ. ನಾವು ಸರ್ಕಾರದೊಂದಿಗೆ ಚರ್ಚಿಸಿದ್ದನ್ನು ನಾವು ಮುಂದಿಟ್ಟಿದ್ದೇವೆ. ಜೂನ್ 15ರೊಳಗೆ ಎಲ್ಲಾ ತನಿಖೆಗಳನ್ನು ನಡೆಸಲಾಗುವುದು ಎಂದು ಸರ್ಕಾರ ನಮಗೆ ಭರವಸೆ ನೀಡಿದೆ. ಜೂನ್ 15ರವರೆಗೆ ನಾವು ಕಾಯುತ್ತೇವೆ ಎಂದು ಪಂಚಾಯತ್ ಹೇಳಿದೆ. ಆದರೆ ಏನೂ ಆಗದಿದ್ದರೆ ನಾವು ಬೃಹತ್ ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

”ಬ್ರಿಜ್ ಭೂಷಣ್ ಅವರ ಕುಟುಂಬದಿಂದ ಯಾರೂ ಡಬ್ಲ್ಯುಎಫ್‌ಐಗೆ ಆಯ್ಕೆಯಾಗುವುದಿಲ್ಲ ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ” ಎಂದು ಪುನಿಯಾ ಹೇಳಿದರು.

ಇದನ್ನೂ ಓದಿ: ಈ ಭಯದ ವಾತಾವರಣದಲ್ಲಿ ನಮಗೆ ನ್ಯಾಯ ಸಿಗುವುದೇ?: ಕುಸ್ತಿಪಟು ವಿನೇಶ್ ಫೋಗಟ್ ಆತಂಕ

”ಜೂನ್ 15ರೊಳಗೆ ಪೊಲೀಸರು ಆರೋಪಪಟ್ಟಿ ಸಲ್ಲಿಸಬೇಕಾಗಿರುವುದರಿಂದ ನಾವೂ ತನಿಖೆಗೆ ಸಹಕರಿಸುತ್ತಿದ್ದೇವೆ. ನಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಸಿಂಗ್ ವಿರುದ್ಧ ಪ್ರತಿಭಟನಾ ನಿರತರಲ್ಲಿ ಮುಖ್ಯವಾದವರಲ್ಲಿ ಒಬ್ಬರಾದ ಕುಸ್ತಿಪಟು ವಿನೇಶ್ ಫೋಗಟ್ ಅವರು, ಈ ವಿಷಯದ ತನಿಖೆಯಲ್ಲಿ ಪೊಲೀಸರ ವಿಳಂಬವನ್ನು ಟೀಕಿಸಿದ್ದಾರೆ.

”ತರಬೇತಿ ಶಿಬಿರಗಳು ಮತ್ತು ಪಂದ್ಯಾವಳಿಗಳ ಸಮಯದಲ್ಲಿ, ಸಿಂಗ್ ಅಟವರು ಯುವ ಅಥ್ಲೀಟ್‌ಗಳನ್ನು ಪ್ರತ್ಯೇಕಿಸಲು ಮತ್ತು ಪದೇಪದೇ ಅವರನ್ನು ಮುಟ್ಟಲು ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಬಳಸುತ್ತಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

”ಈ ರೀತಿ ಅಸಹ್ಯಕರ ಘಟನೆಗಳಲ್ಲಿ ನಾನು ಬಲಿಪಶುಗಳ ನಡುವೆ ಇದ್ದೇನೆ” ಎಂದು ಅವರು ಹೇಳಿಕೊಂಡರು.

ಈ ಕುಸ್ತಿಪಟುಗಳ ದೂರುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನಿಯಾಗಿರುವುದಕ್ಕೆ ಫೋಗಟ್ ನಿರಾಶೆ ವ್ಯಕ್ತಪಡಿಸಿದ್ದಾರೆ.

”ಇದು ಭಾವನಾತ್ಮಕವಾಗಿ ಬರಿದಾಗಿದೆ, ಈ ಪ್ರಕರಣದ ಬಗ್ಗೆ ಪ್ರಧಾನಿ ಏನನ್ನೂ ಹೇಳಿಲ್ಲ” ಎಂದು ಫೋಗಟ್ ಹೇಳಿದರು.

”ಯಾರೂ ನಮ್ಮ ಮಾತನ್ನು ಕೇಳುತ್ತಿಲ್ಲ ಎಂಬ ಅಂಶವನ್ನು ಸಾರ್ವಜನಿಕರಿಗೆ ತಿಳಿಸಲು ಪ್ರತಿಭಟನೆಯನ್ನು ಪ್ರಾರಂಭಿಸಿದೆವು. ಖ್ಯಾತ ಕ್ರೀಡಾಪಟುಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ರಾಷ್ಟ್ರವು ತಿಳಿಯಬೇಕೆಂದು ನಾವು ಬಯಸುತ್ತೇವೆ” ಎಂದು ಫೋಗಟ್ ಹೇಳಿದರು.

ಜನವರಿಯಲ್ಲಿ, ನೊಂದ ಕುಸ್ತಿಪಟುಗಳಿಂದ ಸಂಕ್ಷಿಪ್ತ ಪ್ರತಿಭಟನೆಯನ್ನು ಪ್ರಾರಂಭಿಸಲಾಯಿತು. ಅವರು ಏಪ್ರಿಲ್ 23ರಂದು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದರು ಮತ್ತು ಮೇ 28ರಂದು ದೆಹಲಿ ಪೊಲೀಸರು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದರು.

ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಮತ್ತು ನಂತರ ಕ್ರೀಡಾ ಸಚಿವರನ್ನು ಭೇಟಿ ಮಾಡಲು ಒಪ್ಪುವ ಮೊದಲು ತಮ್ಮ ಪದಕಗಳನ್ನು ಗಂಗೆಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದರು.

ಜೂನ್ 15ರೊಳಗೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಠಾಕೂರ್ ಹೇಳಿದರು ಮತ್ತು ಅಲ್ಲಿಯವರೆಗೆ ಪ್ರದರ್ಶನ ನೀಡದಂತೆ ಕುಸ್ತಿಪಟುಗಳಿಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...