Homeಕರ್ನಾಟಕಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

ಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಕದಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ- MES

- Advertisement -
- Advertisement -

ಬೆಳಗಾವಿಯ ಮಹಾನಗರ ಪಾಲಿಕೆ ಕಛೇರಿ ಎದುರು ಹಾರಿಸಿರುವ ಕನ್ನಡ ಬಾವುಟವನ್ನು ಡಿಸಂಬರ್ 31 ರೊಳಗೆ ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯು (MES) ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ ಮತ್ತೊಂದು ಎಚ್ಚರಿಕೆಯನ್ನೂ ನೀಡಿದ್ದು, “ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರದ ಗಲ್ಲಿ ಗಲ್ಲಿಗಳಲ್ಲಿ ಭಗವಾಧ್ವಜಗಳು ಹಾರಾಡಲಿವೆ. ಜೊತೆಗೆ ಗಡಿ ವಿವಾದಕ್ಕೆ ಸಂಬಂಧಿಸಿದ ಘೋಷಣೆಗಳು ಮೊಳಗಲಿವೆ” ಎಂದು ಜಿಲ್ಲಾಡಳಿತಕ್ಕೆ ಸವಾಲು ಹಾಕಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಸಾವನ್ನಪ್ಪಿದ್ದ MES ಕಾರ್ಯಕರ್ತರ ನೆನಪಿಗಾಗಿ ಜನವರಿ 17 ರಂದು ಹುತಾತ್ಮ ದಿನಾಚರಣೆ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲು ಮರಾಠಾ ಮಂದಿರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

MES ಅಧ್ಯಕ್ಷ ದೀಪಕ ದಳವಿ ಮಾತನಾಡಿ, “ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಕದಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಇದರಿಂದ ಮರಾಠಾ ಜನರ ಆತಂಕ ಮತ್ತು ವೇದನೆ ಹೆಚ್ಚಾಗಿದೆ” ಎಂದು ಆರೋಪಿಸಿದರು.

ಹಲವು ವರ್ಷಗಳ ಹೋರಾಟದ ನಂತರ, ಪಾಲಿಕೆ ಕಚೇರಿ ಎದುರು ಇತ್ತೀಚೆಗೆ ಕನ್ನಡಪರ ಹೋರಾಟಗಾರರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

ಈ ಹಿಂದೆಯೂ, ಅಲ್ಲಿ ಕನ್ನಡ ಬಾವುಟ ಹಾರಿಸಿದ ಬೆನ್ನಲ್ಲೇ ಪೊಲೀಸರು ಅದನ್ನು ತೆರವುಗೊಳಿಸಿದ್ದರು. ಇದೇ ರೀತಿ ಈಗಲೂ ತೆರವುಗೊಳಿಸಬಹುದೆಂಬ ಕಾರಣಕ್ಕೆ ಕನ್ನಡಪರ ಹೋರಾಟಗಾರರು ಕಂಬ ಹಾಗೂ ಬಾವುಟವನ್ನು ಕಾವಲು ಕಾಯುತ್ತಿದ್ದಾರೆ. ಕೊರೆವ ಚಳಿಯಲ್ಲೂ ರಾತ್ರಿಯಿಡೀ ಅಲ್ಲಿಯೇ ಮಲಗಿ, ಧ್ವಜಸ್ತಂಭ ತೆರವುಗೊಳಿಸಬಾರದು ಎಂದು ಒತ್ತಾಯಿಸುತ್ತಿದ್ದಾರೆ.

“ಮಹಾನಗರ ಪಾಲಿಕೆ ಕಛೇರಿ ಸೇರಿದಂತೆ, ನಗರದ ರೈಲು ನಿಲ್ದಾಣ, ಪ್ರಾದೇಶಿಕ ಆಯುಕ್ತರ ಕಛೇರಿಯ ಬಳಿ ಕಾನೂನುಬಾಹಿರವಾಗಿ ಹಳದಿ–ಕೆಂಪು ಬಣ್ಣದ ಧ್ವಜ ಹಾರಿಸಲಾಗಿದೆ. ಈ ಧ್ವಜಕ್ಕೆ ಮಾನ್ಯತೆ ಸಿಕ್ಕಿಲ್ಲ. ರಾಷ್ಟ್ರಧ್ವಜದ ಎದುರು ಈ ಧ್ವಜ ಹಾರಿಸಿ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರಲಾಗಿದೆ. ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು MES ಸದಸ್ಯರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...