Homeಕರ್ನಾಟಕಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್...

ಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್ ಎಚ್ಚರಿಕೆ

ಡಿಸೆಂಬರ್‌ 18 ರಿಂದ ಕರವೇ #ಕನ್ನಡವಿವಿಉಳಿಸಿ ಅಭಿಯಾನ ನಡೆಸುತ್ತಿದೆ.

- Advertisement -
- Advertisement -

ಕಳೆದ ಎರಡು ವಾರದಿಂದ #ಕನ್ನಡವಿವಿಉಳಿಸಿ ಅಭಿಯಾನದ ಮೂಲಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿ ಚಳವಳಿಯನ್ನು ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇದೀಗ ತನ್ನ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದೆ. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿರುವುದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಸರ್ಕಾರವು ಐದು ದಿನಗಳೊಳಗೆ ಆಗ್ರಹಕ್ಕೆ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್‌ 18 ರಂದು ಕರವೇ #ಕನ್ನಡವಿವಿಉಳಿಸಿ ಟ್ವಿಟ್ಟರ್‌ ಅಭಿಯಾನ ಪ್ರಾರಂಭಿಸಿತ್ತು. ಇದರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು.‌ ಅದರ ನಂತರ ಕರವೇ ತನ್ನ ಅಭಿಯಾನದ ಹಕ್ಕೊತ್ತಾಯಗಳನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿಯು ಆಗಿರುವ ಅಶ್ವತ್ಥ್ ನಾರಾಯಣ್ ಅವರಿಗೆ ಸಲ್ಲಿಸಿತ್ತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿಯೆ ಪ್ರತಿಕ್ರಿಯಸಿದ್ದರು.

ಇದನ್ನೂ ಓದಿ: #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಸೋಮವಾರ ತನ್ನ ಫೇಸ್‌ಬುಕ್ ಖಾತೆಯಲ್ಲಿ ರಾಜ್ಯ ಸರ್ಕಾರದ ಧೋರಣೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿ.ಎ. ನಾರಾಯಣ ಗೌಡ, “ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ಚಳವಳಿಯನ್ನು ತೀವ್ರಗೊಳಿಸಲಾಗುವುದು. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿದೆ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ತನ್ನದೇ ಆದ ವಿಧಾನದಲ್ಲಿ ಪ್ರತಿಭಟನೆ ನಡೆಸಲಿದೆ. ಇನ್ನು ಐದು ದಿನಗಳೊಳಗೆ ರಾಜ್ಯ ಸರ್ಕಾರ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವುದರ ಜತೆಗೆ ಅದರ ಪ್ರತ್ಯೇಕ ಅಸ್ತಿತ್ವವನ್ನು ಹಾಗೇ ಉಳಿಸಿಕೊಳ್ಳುವ ಘೋಷಣೆಯನ್ನು ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪದೇ ಪದೇ ಚಳವಳಿ‌ ಮಾಡಬೇಡಿ, ಮಾತುಕತೆಗೆ ಬನ್ನಿ, ಚಳವಳಿಗಳಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ ಎನ್ನುತ್ತಾರೆ. ಆದರೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಮೇಲೂ ಮೌನವಾಗಿದ್ದಾರೆ. ಉನ್ನತ ಶಿಕ್ಷಣ ಸಚಿವರು ನೀಡಿದ ಭರವಸೆ ಹುಸಿಯಾಗಿದೆ. ರಾಜ್ಯ ಸರ್ಕಾರ ಸಂವೇದನಾಶೀಲತೆಯನ್ನು ಕಳೆದುಕೊಂಡಿದೆ. ದಪ್ಪಚರ್ಮದ ರಾಜಕಾರಣಿಗಳು, ಅಧಿಕಾರಿಗಳು ರಾಜ್ಯದ ಜನರ ಕೂಗಿಗೆ ಬೆಲೆಕೊಡುತ್ತಿಲ್ಲ. ಹೀಗಾದಲ್ಲಿ ಸಾಮಾನ್ಯ ಜನರ ಸಿಟ್ಟು ಕಟ್ಟೆಯೊಡೆದು, ಅದರ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

“ಕರವೇ ನಿಯೋಗದ ಆಗ್ರಹಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿ,‌ ಕೂಡಲೇ ಹಂಪಿ ಕನ್ನಡ ವಿವಿಗೆ ಅನುದಾನ‌ ಬಿಡುಗಡೆ‌ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಸರ್ಕಾರ ತನ್ನ ಮಾತು ನಡೆಸಿಕೊಳ್ಳಲಿಲ್ಲ” ಎಂದು ಅವರು ಹೇಳಿದ್ದಾರೆ.

“ಅಲ್ಲದೆ ಕರವೇ ನಾಡಿನ ವಿದ್ವಜ್ಜನರ ಹೇಳಿಕೆಗಳನ್ನು ಪಡೆದು ಸಾಮಾಜಿಕ‌ ಜಾಲತಾಣಗಳಲ್ಲಿ ‘ಭಿತ್ತಿಪತ್ರ ಚಳವಳಿ’ ನಡೆಸುತ್ತಿದೆ. ಇಷ್ಟಾದರೂ ಸರ್ಕಾರ ಬೇಜವಾಬ್ದಾರಿ ಮತ್ತು ಉದಾಸೀನ‌ ಪ್ರವೃತ್ತಿಯನ್ನು ಮುಂದುವರೆಸಿದೆ. ಇಂಥ ಸಮಯದಲ್ಲಿ‌ ನಮಗೆ ತೀವ್ರ ಸ್ವರೂಪದ‌ ಚಳವಳಿ ನಡೆಸದೇ ಬೇರೆ ದಾರಿ‌ ಉಳಿದಿಲ್ಲ. ಐದು ದಿನಗಳೊಳಗೆ ಸರ್ಕಾರ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳಿಗೆ ಸರ್ಕಾರವೇ ಹೊಣೆ ಹೊರಬೇಕು” ಎಂದು ಟಿ.ಎ. ನಾರಾಯಣ ಗೌಡರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...