Homeಕರ್ನಾಟಕಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್...

ಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್ ಎಚ್ಚರಿಕೆ

ಡಿಸೆಂಬರ್‌ 18 ರಿಂದ ಕರವೇ #ಕನ್ನಡವಿವಿಉಳಿಸಿ ಅಭಿಯಾನ ನಡೆಸುತ್ತಿದೆ.

- Advertisement -
- Advertisement -

ಕಳೆದ ಎರಡು ವಾರದಿಂದ #ಕನ್ನಡವಿವಿಉಳಿಸಿ ಅಭಿಯಾನದ ಮೂಲಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿ ಚಳವಳಿಯನ್ನು ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇದೀಗ ತನ್ನ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದೆ. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿರುವುದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಸರ್ಕಾರವು ಐದು ದಿನಗಳೊಳಗೆ ಆಗ್ರಹಕ್ಕೆ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್‌ 18 ರಂದು ಕರವೇ #ಕನ್ನಡವಿವಿಉಳಿಸಿ ಟ್ವಿಟ್ಟರ್‌ ಅಭಿಯಾನ ಪ್ರಾರಂಭಿಸಿತ್ತು. ಇದರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು.‌ ಅದರ ನಂತರ ಕರವೇ ತನ್ನ ಅಭಿಯಾನದ ಹಕ್ಕೊತ್ತಾಯಗಳನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿಯು ಆಗಿರುವ ಅಶ್ವತ್ಥ್ ನಾರಾಯಣ್ ಅವರಿಗೆ ಸಲ್ಲಿಸಿತ್ತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿಯೆ ಪ್ರತಿಕ್ರಿಯಸಿದ್ದರು.

ಇದನ್ನೂ ಓದಿ: #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಸೋಮವಾರ ತನ್ನ ಫೇಸ್‌ಬುಕ್ ಖಾತೆಯಲ್ಲಿ ರಾಜ್ಯ ಸರ್ಕಾರದ ಧೋರಣೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿ.ಎ. ನಾರಾಯಣ ಗೌಡ, “ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ಚಳವಳಿಯನ್ನು ತೀವ್ರಗೊಳಿಸಲಾಗುವುದು. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿದೆ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ತನ್ನದೇ ಆದ ವಿಧಾನದಲ್ಲಿ ಪ್ರತಿಭಟನೆ ನಡೆಸಲಿದೆ. ಇನ್ನು ಐದು ದಿನಗಳೊಳಗೆ ರಾಜ್ಯ ಸರ್ಕಾರ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವುದರ ಜತೆಗೆ ಅದರ ಪ್ರತ್ಯೇಕ ಅಸ್ತಿತ್ವವನ್ನು ಹಾಗೇ ಉಳಿಸಿಕೊಳ್ಳುವ ಘೋಷಣೆಯನ್ನು ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪದೇ ಪದೇ ಚಳವಳಿ‌ ಮಾಡಬೇಡಿ, ಮಾತುಕತೆಗೆ ಬನ್ನಿ, ಚಳವಳಿಗಳಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ ಎನ್ನುತ್ತಾರೆ. ಆದರೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಮೇಲೂ ಮೌನವಾಗಿದ್ದಾರೆ. ಉನ್ನತ ಶಿಕ್ಷಣ ಸಚಿವರು ನೀಡಿದ ಭರವಸೆ ಹುಸಿಯಾಗಿದೆ. ರಾಜ್ಯ ಸರ್ಕಾರ ಸಂವೇದನಾಶೀಲತೆಯನ್ನು ಕಳೆದುಕೊಂಡಿದೆ. ದಪ್ಪಚರ್ಮದ ರಾಜಕಾರಣಿಗಳು, ಅಧಿಕಾರಿಗಳು ರಾಜ್ಯದ ಜನರ ಕೂಗಿಗೆ ಬೆಲೆಕೊಡುತ್ತಿಲ್ಲ. ಹೀಗಾದಲ್ಲಿ ಸಾಮಾನ್ಯ ಜನರ ಸಿಟ್ಟು ಕಟ್ಟೆಯೊಡೆದು, ಅದರ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

“ಕರವೇ ನಿಯೋಗದ ಆಗ್ರಹಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿ,‌ ಕೂಡಲೇ ಹಂಪಿ ಕನ್ನಡ ವಿವಿಗೆ ಅನುದಾನ‌ ಬಿಡುಗಡೆ‌ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಸರ್ಕಾರ ತನ್ನ ಮಾತು ನಡೆಸಿಕೊಳ್ಳಲಿಲ್ಲ” ಎಂದು ಅವರು ಹೇಳಿದ್ದಾರೆ.

“ಅಲ್ಲದೆ ಕರವೇ ನಾಡಿನ ವಿದ್ವಜ್ಜನರ ಹೇಳಿಕೆಗಳನ್ನು ಪಡೆದು ಸಾಮಾಜಿಕ‌ ಜಾಲತಾಣಗಳಲ್ಲಿ ‘ಭಿತ್ತಿಪತ್ರ ಚಳವಳಿ’ ನಡೆಸುತ್ತಿದೆ. ಇಷ್ಟಾದರೂ ಸರ್ಕಾರ ಬೇಜವಾಬ್ದಾರಿ ಮತ್ತು ಉದಾಸೀನ‌ ಪ್ರವೃತ್ತಿಯನ್ನು ಮುಂದುವರೆಸಿದೆ. ಇಂಥ ಸಮಯದಲ್ಲಿ‌ ನಮಗೆ ತೀವ್ರ ಸ್ವರೂಪದ‌ ಚಳವಳಿ ನಡೆಸದೇ ಬೇರೆ ದಾರಿ‌ ಉಳಿದಿಲ್ಲ. ಐದು ದಿನಗಳೊಳಗೆ ಸರ್ಕಾರ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳಿಗೆ ಸರ್ಕಾರವೇ ಹೊಣೆ ಹೊರಬೇಕು” ಎಂದು ಟಿ.ಎ. ನಾರಾಯಣ ಗೌಡರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...