Homeಕರ್ನಾಟಕಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್...

ಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್ ಎಚ್ಚರಿಕೆ

ಡಿಸೆಂಬರ್‌ 18 ರಿಂದ ಕರವೇ #ಕನ್ನಡವಿವಿಉಳಿಸಿ ಅಭಿಯಾನ ನಡೆಸುತ್ತಿದೆ.

- Advertisement -
- Advertisement -

ಕಳೆದ ಎರಡು ವಾರದಿಂದ #ಕನ್ನಡವಿವಿಉಳಿಸಿ ಅಭಿಯಾನದ ಮೂಲಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿ ಚಳವಳಿಯನ್ನು ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇದೀಗ ತನ್ನ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದೆ. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿರುವುದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಸರ್ಕಾರವು ಐದು ದಿನಗಳೊಳಗೆ ಆಗ್ರಹಕ್ಕೆ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್‌ 18 ರಂದು ಕರವೇ #ಕನ್ನಡವಿವಿಉಳಿಸಿ ಟ್ವಿಟ್ಟರ್‌ ಅಭಿಯಾನ ಪ್ರಾರಂಭಿಸಿತ್ತು. ಇದರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು.‌ ಅದರ ನಂತರ ಕರವೇ ತನ್ನ ಅಭಿಯಾನದ ಹಕ್ಕೊತ್ತಾಯಗಳನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿಯು ಆಗಿರುವ ಅಶ್ವತ್ಥ್ ನಾರಾಯಣ್ ಅವರಿಗೆ ಸಲ್ಲಿಸಿತ್ತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿಯೆ ಪ್ರತಿಕ್ರಿಯಸಿದ್ದರು.

ಇದನ್ನೂ ಓದಿ: #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಸೋಮವಾರ ತನ್ನ ಫೇಸ್‌ಬುಕ್ ಖಾತೆಯಲ್ಲಿ ರಾಜ್ಯ ಸರ್ಕಾರದ ಧೋರಣೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿ.ಎ. ನಾರಾಯಣ ಗೌಡ, “ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ಚಳವಳಿಯನ್ನು ತೀವ್ರಗೊಳಿಸಲಾಗುವುದು. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿದೆ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ತನ್ನದೇ ಆದ ವಿಧಾನದಲ್ಲಿ ಪ್ರತಿಭಟನೆ ನಡೆಸಲಿದೆ. ಇನ್ನು ಐದು ದಿನಗಳೊಳಗೆ ರಾಜ್ಯ ಸರ್ಕಾರ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವುದರ ಜತೆಗೆ ಅದರ ಪ್ರತ್ಯೇಕ ಅಸ್ತಿತ್ವವನ್ನು ಹಾಗೇ ಉಳಿಸಿಕೊಳ್ಳುವ ಘೋಷಣೆಯನ್ನು ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪದೇ ಪದೇ ಚಳವಳಿ‌ ಮಾಡಬೇಡಿ, ಮಾತುಕತೆಗೆ ಬನ್ನಿ, ಚಳವಳಿಗಳಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ ಎನ್ನುತ್ತಾರೆ. ಆದರೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಮೇಲೂ ಮೌನವಾಗಿದ್ದಾರೆ. ಉನ್ನತ ಶಿಕ್ಷಣ ಸಚಿವರು ನೀಡಿದ ಭರವಸೆ ಹುಸಿಯಾಗಿದೆ. ರಾಜ್ಯ ಸರ್ಕಾರ ಸಂವೇದನಾಶೀಲತೆಯನ್ನು ಕಳೆದುಕೊಂಡಿದೆ. ದಪ್ಪಚರ್ಮದ ರಾಜಕಾರಣಿಗಳು, ಅಧಿಕಾರಿಗಳು ರಾಜ್ಯದ ಜನರ ಕೂಗಿಗೆ ಬೆಲೆಕೊಡುತ್ತಿಲ್ಲ. ಹೀಗಾದಲ್ಲಿ ಸಾಮಾನ್ಯ ಜನರ ಸಿಟ್ಟು ಕಟ್ಟೆಯೊಡೆದು, ಅದರ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

“ಕರವೇ ನಿಯೋಗದ ಆಗ್ರಹಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿ,‌ ಕೂಡಲೇ ಹಂಪಿ ಕನ್ನಡ ವಿವಿಗೆ ಅನುದಾನ‌ ಬಿಡುಗಡೆ‌ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಸರ್ಕಾರ ತನ್ನ ಮಾತು ನಡೆಸಿಕೊಳ್ಳಲಿಲ್ಲ” ಎಂದು ಅವರು ಹೇಳಿದ್ದಾರೆ.

“ಅಲ್ಲದೆ ಕರವೇ ನಾಡಿನ ವಿದ್ವಜ್ಜನರ ಹೇಳಿಕೆಗಳನ್ನು ಪಡೆದು ಸಾಮಾಜಿಕ‌ ಜಾಲತಾಣಗಳಲ್ಲಿ ‘ಭಿತ್ತಿಪತ್ರ ಚಳವಳಿ’ ನಡೆಸುತ್ತಿದೆ. ಇಷ್ಟಾದರೂ ಸರ್ಕಾರ ಬೇಜವಾಬ್ದಾರಿ ಮತ್ತು ಉದಾಸೀನ‌ ಪ್ರವೃತ್ತಿಯನ್ನು ಮುಂದುವರೆಸಿದೆ. ಇಂಥ ಸಮಯದಲ್ಲಿ‌ ನಮಗೆ ತೀವ್ರ ಸ್ವರೂಪದ‌ ಚಳವಳಿ ನಡೆಸದೇ ಬೇರೆ ದಾರಿ‌ ಉಳಿದಿಲ್ಲ. ಐದು ದಿನಗಳೊಳಗೆ ಸರ್ಕಾರ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳಿಗೆ ಸರ್ಕಾರವೇ ಹೊಣೆ ಹೊರಬೇಕು” ಎಂದು ಟಿ.ಎ. ನಾರಾಯಣ ಗೌಡರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...