Homeಕರ್ನಾಟಕಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್...

ಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್ ಎಚ್ಚರಿಕೆ

ಡಿಸೆಂಬರ್‌ 18 ರಿಂದ ಕರವೇ #ಕನ್ನಡವಿವಿಉಳಿಸಿ ಅಭಿಯಾನ ನಡೆಸುತ್ತಿದೆ.

- Advertisement -
- Advertisement -

ಕಳೆದ ಎರಡು ವಾರದಿಂದ #ಕನ್ನಡವಿವಿಉಳಿಸಿ ಅಭಿಯಾನದ ಮೂಲಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿ ಚಳವಳಿಯನ್ನು ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇದೀಗ ತನ್ನ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದೆ. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿರುವುದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಸರ್ಕಾರವು ಐದು ದಿನಗಳೊಳಗೆ ಆಗ್ರಹಕ್ಕೆ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್‌ 18 ರಂದು ಕರವೇ #ಕನ್ನಡವಿವಿಉಳಿಸಿ ಟ್ವಿಟ್ಟರ್‌ ಅಭಿಯಾನ ಪ್ರಾರಂಭಿಸಿತ್ತು. ಇದರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು.‌ ಅದರ ನಂತರ ಕರವೇ ತನ್ನ ಅಭಿಯಾನದ ಹಕ್ಕೊತ್ತಾಯಗಳನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿಯು ಆಗಿರುವ ಅಶ್ವತ್ಥ್ ನಾರಾಯಣ್ ಅವರಿಗೆ ಸಲ್ಲಿಸಿತ್ತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿಯೆ ಪ್ರತಿಕ್ರಿಯಸಿದ್ದರು.

ಇದನ್ನೂ ಓದಿ: #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಸೋಮವಾರ ತನ್ನ ಫೇಸ್‌ಬುಕ್ ಖಾತೆಯಲ್ಲಿ ರಾಜ್ಯ ಸರ್ಕಾರದ ಧೋರಣೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿ.ಎ. ನಾರಾಯಣ ಗೌಡ, “ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ಚಳವಳಿಯನ್ನು ತೀವ್ರಗೊಳಿಸಲಾಗುವುದು. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿದೆ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ತನ್ನದೇ ಆದ ವಿಧಾನದಲ್ಲಿ ಪ್ರತಿಭಟನೆ ನಡೆಸಲಿದೆ. ಇನ್ನು ಐದು ದಿನಗಳೊಳಗೆ ರಾಜ್ಯ ಸರ್ಕಾರ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವುದರ ಜತೆಗೆ ಅದರ ಪ್ರತ್ಯೇಕ ಅಸ್ತಿತ್ವವನ್ನು ಹಾಗೇ ಉಳಿಸಿಕೊಳ್ಳುವ ಘೋಷಣೆಯನ್ನು ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪದೇ ಪದೇ ಚಳವಳಿ‌ ಮಾಡಬೇಡಿ, ಮಾತುಕತೆಗೆ ಬನ್ನಿ, ಚಳವಳಿಗಳಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ ಎನ್ನುತ್ತಾರೆ. ಆದರೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಮೇಲೂ ಮೌನವಾಗಿದ್ದಾರೆ. ಉನ್ನತ ಶಿಕ್ಷಣ ಸಚಿವರು ನೀಡಿದ ಭರವಸೆ ಹುಸಿಯಾಗಿದೆ. ರಾಜ್ಯ ಸರ್ಕಾರ ಸಂವೇದನಾಶೀಲತೆಯನ್ನು ಕಳೆದುಕೊಂಡಿದೆ. ದಪ್ಪಚರ್ಮದ ರಾಜಕಾರಣಿಗಳು, ಅಧಿಕಾರಿಗಳು ರಾಜ್ಯದ ಜನರ ಕೂಗಿಗೆ ಬೆಲೆಕೊಡುತ್ತಿಲ್ಲ. ಹೀಗಾದಲ್ಲಿ ಸಾಮಾನ್ಯ ಜನರ ಸಿಟ್ಟು ಕಟ್ಟೆಯೊಡೆದು, ಅದರ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

“ಕರವೇ ನಿಯೋಗದ ಆಗ್ರಹಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿ,‌ ಕೂಡಲೇ ಹಂಪಿ ಕನ್ನಡ ವಿವಿಗೆ ಅನುದಾನ‌ ಬಿಡುಗಡೆ‌ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಸರ್ಕಾರ ತನ್ನ ಮಾತು ನಡೆಸಿಕೊಳ್ಳಲಿಲ್ಲ” ಎಂದು ಅವರು ಹೇಳಿದ್ದಾರೆ.

“ಅಲ್ಲದೆ ಕರವೇ ನಾಡಿನ ವಿದ್ವಜ್ಜನರ ಹೇಳಿಕೆಗಳನ್ನು ಪಡೆದು ಸಾಮಾಜಿಕ‌ ಜಾಲತಾಣಗಳಲ್ಲಿ ‘ಭಿತ್ತಿಪತ್ರ ಚಳವಳಿ’ ನಡೆಸುತ್ತಿದೆ. ಇಷ್ಟಾದರೂ ಸರ್ಕಾರ ಬೇಜವಾಬ್ದಾರಿ ಮತ್ತು ಉದಾಸೀನ‌ ಪ್ರವೃತ್ತಿಯನ್ನು ಮುಂದುವರೆಸಿದೆ. ಇಂಥ ಸಮಯದಲ್ಲಿ‌ ನಮಗೆ ತೀವ್ರ ಸ್ವರೂಪದ‌ ಚಳವಳಿ ನಡೆಸದೇ ಬೇರೆ ದಾರಿ‌ ಉಳಿದಿಲ್ಲ. ಐದು ದಿನಗಳೊಳಗೆ ಸರ್ಕಾರ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳಿಗೆ ಸರ್ಕಾರವೇ ಹೊಣೆ ಹೊರಬೇಕು” ಎಂದು ಟಿ.ಎ. ನಾರಾಯಣ ಗೌಡರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...