ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಸೇರಿದರೆ, ಒಂದೇ ದಿನದಲ್ಲಿ ಅವರನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಹೇಳಿದ್ದಾರೆ.
ಎಎಪಿ ರಾಷ್ಟ್ರೀಯ ಸಂಚಾಲಕರು ಆಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಮದ್ಯನೀತಿ ಹಗರಣಕ್ಕೆ ಸಂಬಂಧಿಸಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ದಿಬ್ರುಗಢ ಸಂಸದೀಯ ಕ್ಷೇತ್ರದ ದುಲಿಯಾಜನ್ನಲ್ಲಿ ಎಎಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕೇಜ್ರಿವಾಲ್, ಕೇಜ್ರಿವಾಲ್ ಎಂದಿಗೂ ತಲೆಬಾಗುವುದಿಲ್ಲ. ಅವರು ಜೈಲಿನ ಒಳಗಿರಲಿ ಅಥವಾ ಹೊರಗಿರಲಿ ದೇಶಾದ್ಯಂತ ಸಾಮಾನ್ಯ ಜನರ ಹಕ್ಕುಗಳಿಗಾಗಿ ಹೋರಾಡುತ್ತಲೇ ಇರುತ್ತಾರೆ ಎಂದು ಹೇಳಿದ್ದಾರೆ.
ಕೇಜ್ರಿವಾಲ್ ಅವರು (ಅಸ್ಸಾಂ ಮುಖ್ಯಮಂತ್ರಿ) ಹಿಮಂತ ಬಿಸ್ವಾ ಶರ್ಮಾ ಅವರಂತೆ ಬಿಜೆಪಿಗೆ ಸೇರಿದರೆ, ಅವರು ಒಂದೇ ದಿನದಲ್ಲಿ ಬಿಡುಗಡೆಯಾಗುತ್ತಾರೆ. ಕೇಜ್ರಿವಾಲ್ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವುದರಿಂದ ಬಿಜೆಪಿಗೆ ಭಯವಿದೆ ಎಂದು ದೆಹಲಿ ಶಿಕ್ಷಣ ಸಚಿವರು ಹೇಳಿದ್ದಾರೆ. ಅವರು ಉತ್ತಮ ಶಾಲೆಗಳನ್ನು ನಿರ್ಮಿಸುತ್ತಾರೆ, ಅತ್ಯುತ್ತಮ ಆಸ್ಪತ್ರೆಗಳನ್ನು ನಿರ್ಮಿಸುತ್ತಾರೆ ಮತ್ತು ಬಡ ಕುಟುಂಬದ ಮಕ್ಕಳನ್ನು ಐಐಟಿಗೆ ಸೇರಿಸಲು ಸಮರ್ಥರಾಗುತ್ತಾರೆ ಎಂದು ಬಿಜೆಪಿ ಅವರನ್ನು ಕಂಬಿ ಹಿಂದೆ ಹಾಕಿದೆ ಎಂದು ಅತಿಶಿ ಹೇಳಿದರು.
ಎಷ್ಟೇ ದುಬಾರಿಯಾದರೂ ಪ್ರತಿಯೊಬ್ಬ ಬಡವರಿಗೂ ಕೇಜ್ರಿವಾಲ್ ಉಚಿತ ಚಿಕಿತ್ಸೆ ನೀಡುತ್ತಾರೆ, ಬಿಜೆಪಿಯು ಚುನಾವಣೆಯ ಸಮಯದಲ್ಲಿ ಸುಳ್ಳುಗಳನ್ನು ಹೇಳುತ್ತದೆ ಮತ್ತು ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವರು ಸರ್ಕಾರ ರಚನೆಯ ನಂತರ ಅವರು ನೀಡಿದ ಎಲ್ಲಾ ಭರವಸೆಗಳನ್ನು ಮರೆತುಬಿಡುತ್ತಾರೆ ಎಂದು ಅತಿಶಿ ಹೇಳಿದರು.
ಕೇಜ್ರಿವಾಲ್ ಈಗ ದಿಬ್ರುಗಢದ ಜನರಿಗೆ ತಮ್ಮ ಭರವಸೆಗಳನ್ನು ತಂದಿದ್ದಾರೆ, ಪ್ರಾಮಾಣಿಕತೆಯ ರಾಜಕೀಯವನ್ನು ಆರಿಸಿಕೊಂಡರೆ ಉತ್ತಮ ಶಾಲೆಗಳು ಮತ್ತು ಅತ್ಯುತ್ತಮ ಆಸ್ಪತ್ರೆಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.
ಚಹಾ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ದಿನಕ್ಕೆ 450 ರೂಪಾಯಿಗಳನ್ನು ಪಡೆಯುತ್ತಾರೆ ಮತ್ತು ಅವರ ಮನೆಗಳನ್ನು ಗುತ್ತಿಗೆಗೆ ಪಡೆಯುತ್ತಾರೆ, ಜೊತೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಪಡೆಯುತ್ತಾರೆ ಎಂದು ಅತಿಶಿ ಹೇಳಿದ್ದು, ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದಿಂದ ಮಾತ್ರ ಇದನ್ನು ಮಾಡಲು ಸಾಧ್ಯ ಎಂದು ಹೇಳಿದ್ದಾರೆ.
ಈ ಬಾರಿ ಎಎಪಿ ಅಭ್ಯರ್ಥಿ ಮನೋಜ್ ಧನೋವರ್ ಅವರಿಗೆ ಮತ ಹಾಕುವ ಮೂಲಕ ಅವರನ್ನು ಸಂಸತ್ತಿಗೆ ಕಳುಹಿಸುವಂತೆ ದಿಬ್ರುಗಢದ ಜನತೆಗೆ ಅತಿಶಿ ಮನವಿ ಮಾಡಿದ್ದು, ಅಸ್ಸಾಂನ ಜನರು ಯಾವಾಗಲೂ ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ಗೆ ಹೆಚ್ಚಿನ ಪ್ರೀತಿ ಮತ್ತು ಆಶೀರ್ವಾದವನ್ನು ನೀಡಿದ್ದಾರೆ. ಆಮ್ ಆದ್ಮಿ ಪಕ್ಷವು ಗುವಾಹಟಿ ಅಥವಾ ಟಿನ್ಸುಕಿಯಾದಲ್ಲಿ ಮುನ್ಸಿಪಲ್ ಚುನಾವಣೆಯಲ್ಲಿ ಸ್ಥಾನ ಪಡೆಯುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ಅತಿಶಿ ಹೇಳಿದ್ದಾರೆ.


