Homeಮುಖಪುಟಕೇಜ್ರಿವಾಲ್ ಬಿಜೆಪಿ ಸೇರಿದರೆ, ಒಂದೇ ದಿನದಲ್ಲಿ ಜೈಲಿನಿಂದ ಬಿಡುಗಡೆ ಆಗ್ತಾರೆ: ಅತಿಶಿ

ಕೇಜ್ರಿವಾಲ್ ಬಿಜೆಪಿ ಸೇರಿದರೆ, ಒಂದೇ ದಿನದಲ್ಲಿ ಜೈಲಿನಿಂದ ಬಿಡುಗಡೆ ಆಗ್ತಾರೆ: ಅತಿಶಿ

- Advertisement -
- Advertisement -

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಸೇರಿದರೆ, ಒಂದೇ ದಿನದಲ್ಲಿ ಅವರನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಹೇಳಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕರು ಆಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಮದ್ಯನೀತಿ ಹಗರಣಕ್ಕೆ ಸಂಬಂಧಿಸಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ದಿಬ್ರುಗಢ ಸಂಸದೀಯ ಕ್ಷೇತ್ರದ ದುಲಿಯಾಜನ್‌ನಲ್ಲಿ ಎಎಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕೇಜ್ರಿವಾಲ್‌, ಕೇಜ್ರಿವಾಲ್ ಎಂದಿಗೂ ತಲೆಬಾಗುವುದಿಲ್ಲ. ಅವರು ಜೈಲಿನ ಒಳಗಿರಲಿ ಅಥವಾ ಹೊರಗಿರಲಿ ದೇಶಾದ್ಯಂತ ಸಾಮಾನ್ಯ ಜನರ ಹಕ್ಕುಗಳಿಗಾಗಿ ಹೋರಾಡುತ್ತಲೇ ಇರುತ್ತಾರೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಅವರು (ಅಸ್ಸಾಂ ಮುಖ್ಯಮಂತ್ರಿ) ಹಿಮಂತ ಬಿಸ್ವಾ ಶರ್ಮಾ ಅವರಂತೆ ಬಿಜೆಪಿಗೆ ಸೇರಿದರೆ, ಅವರು ಒಂದೇ ದಿನದಲ್ಲಿ ಬಿಡುಗಡೆಯಾಗುತ್ತಾರೆ. ಕೇಜ್ರಿವಾಲ್ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವುದರಿಂದ ಬಿಜೆಪಿಗೆ ಭಯವಿದೆ ಎಂದು ದೆಹಲಿ ಶಿಕ್ಷಣ ಸಚಿವರು ಹೇಳಿದ್ದಾರೆ. ಅವರು ಉತ್ತಮ ಶಾಲೆಗಳನ್ನು ನಿರ್ಮಿಸುತ್ತಾರೆ, ಅತ್ಯುತ್ತಮ ಆಸ್ಪತ್ರೆಗಳನ್ನು ನಿರ್ಮಿಸುತ್ತಾರೆ ಮತ್ತು ಬಡ ಕುಟುಂಬದ ಮಕ್ಕಳನ್ನು ಐಐಟಿಗೆ ಸೇರಿಸಲು ಸಮರ್ಥರಾಗುತ್ತಾರೆ ಎಂದು ಬಿಜೆಪಿ ಅವರನ್ನು ಕಂಬಿ ಹಿಂದೆ ಹಾಕಿದೆ ಎಂದು ಅತಿಶಿ ಹೇಳಿದರು.

ಎಷ್ಟೇ ದುಬಾರಿಯಾದರೂ ಪ್ರತಿಯೊಬ್ಬ ಬಡವರಿಗೂ  ಕೇಜ್ರಿವಾಲ್‌ ಉಚಿತ ಚಿಕಿತ್ಸೆ ನೀಡುತ್ತಾರೆ, ಬಿಜೆಪಿಯು ಚುನಾವಣೆಯ ಸಮಯದಲ್ಲಿ ಸುಳ್ಳುಗಳನ್ನು ಹೇಳುತ್ತದೆ ಮತ್ತು ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವರು ಸರ್ಕಾರ ರಚನೆಯ ನಂತರ ಅವರು ನೀಡಿದ ಎಲ್ಲಾ ಭರವಸೆಗಳನ್ನು ಮರೆತುಬಿಡುತ್ತಾರೆ ಎಂದು ಅತಿಶಿ ಹೇಳಿದರು.

ಕೇಜ್ರಿವಾಲ್ ಈಗ ದಿಬ್ರುಗಢದ ಜನರಿಗೆ ತಮ್ಮ ಭರವಸೆಗಳನ್ನು ತಂದಿದ್ದಾರೆ, ಪ್ರಾಮಾಣಿಕತೆಯ ರಾಜಕೀಯವನ್ನು ಆರಿಸಿಕೊಂಡರೆ ಉತ್ತಮ ಶಾಲೆಗಳು ಮತ್ತು ಅತ್ಯುತ್ತಮ ಆಸ್ಪತ್ರೆಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಚಹಾ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ದಿನಕ್ಕೆ 450 ರೂಪಾಯಿಗಳನ್ನು ಪಡೆಯುತ್ತಾರೆ ಮತ್ತು ಅವರ ಮನೆಗಳನ್ನು ಗುತ್ತಿಗೆಗೆ ಪಡೆಯುತ್ತಾರೆ, ಜೊತೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಪಡೆಯುತ್ತಾರೆ ಎಂದು ಅತಿಶಿ ಹೇಳಿದ್ದು, ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದಿಂದ ಮಾತ್ರ ಇದನ್ನು ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಈ ಬಾರಿ ಎಎಪಿ ಅಭ್ಯರ್ಥಿ ಮನೋಜ್ ಧನೋವರ್ ಅವರಿಗೆ ಮತ ಹಾಕುವ ಮೂಲಕ ಅವರನ್ನು ಸಂಸತ್ತಿಗೆ ಕಳುಹಿಸುವಂತೆ ದಿಬ್ರುಗಢದ ಜನತೆಗೆ ಅತಿಶಿ ಮನವಿ ಮಾಡಿದ್ದು, ಅಸ್ಸಾಂನ ಜನರು ಯಾವಾಗಲೂ ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್‌ಗೆ ಹೆಚ್ಚಿನ ಪ್ರೀತಿ ಮತ್ತು ಆಶೀರ್ವಾದವನ್ನು ನೀಡಿದ್ದಾರೆ. ಆಮ್ ಆದ್ಮಿ ಪಕ್ಷವು ಗುವಾಹಟಿ ಅಥವಾ ಟಿನ್ಸುಕಿಯಾದಲ್ಲಿ ಮುನ್ಸಿಪಲ್ ಚುನಾವಣೆಯಲ್ಲಿ ಸ್ಥಾನ ಪಡೆಯುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ಅತಿಶಿ ಹೇಳಿದ್ದಾರೆ.

ಇದನ್ನು ಓದಿ: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ,ಎಸ್ಟಿ,ಹಿಂದುಳಿದ ವರ್ಗದ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ಜಮೆ: ರಾಹುಲ್‌ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...