Homeನಿಜವೋ ಸುಳ್ಳೋಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು...

ಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು ಸುದ್ದಿ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬವು ತಮ್ಮ ನಿವಾಸದಲ್ಲಿ ದೀಪ ಹಚ್ಚಿ ಕುಳಿತಿರುವ ಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಕೊಚ್ಚಿ ಆವೃತ್ತಿಯು ಇತ್ತೀಚೆಗೆ ತಮ್ಮ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ. COVID-19 ಸಾಂಕ್ರಾಮಿಕ ರೋಗವು ತಂದಿರುವ ಕತ್ತಲೆಯನ್ನು ಹೋಗಲಾಡಿಸಲು 2020 ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ ಲೈಟ್‌ ಆರಿಸಿ ದೀಪ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ನೀಡಿದ ಕರೆಗೆ ಪಿಣರಾಯಿ ವಿಜಯನ್ ಭಾಗವಹಿಸುತ್ತಿದ್ದಾರೆ ಎಂದು ಆ ಟ್ವೀಟ್‌ಗೆ  ಶೀರ್ಷಿಕೆ ನೀಡಲಾಗಿದೆ.

ಅದೇ ರೀತಿ ಭಾರತೀಯ ಜನತಾ ಪಕ್ಷದ ತಮಿಳುನಾಡಿನ ಯುವ ವಿಭಾಗದ ಉಪಾಧ್ಯಕ್ಷ ಎಸ್.ಜಿ.ಸೂರ್ಯ ಅವರು ಪಿಣರಾಯಿ ವಿಜಯನ್ ಮತ್ತು ಪುದುಚೇರಿ ಮುಖ್ಯಮಂತ್ರಿ ವೇಲು ನಾರಾಯಣಸಾಮಿಯವರ ದೀಪ ಹಿಡಿದಿರುವ ಚಿತ್ರಗಳನ್ನು ಕೊಲಾಜ್‌ ಮಾಡಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಕೇವಲ ಈ ಎರಡು ಚಿತ್ರಗಳು ಪ್ರಧಾನ ಮಂತ್ರಿ ನರೇಂದ್ರಮೋಡಿಯವರ 9 ನಿಮಿಷಗಳು ದೀಪ ಹಚ್ಚುವ ಕರೆಯ ಯಶಸ್ಸನ್ನು ತೋರಿಸುತ್ತವೆ. ಕಮ್ಯುನಿಸ್ಟ್‌ನ ಏಕೈಕ ಸಿಎಂ ಕೇರಳ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ತೀವ್ರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಪಾಂಡಿಚೆರಿ ಸಿಎಂ ನಾರಾಯಣಸಾಮಿ ಇಂದು ಪ್ರಧಾನಿ ಮೋದಿ ಅವರೊಂದಿಗೆ ನಿಂತಿದ್ದಾರೆ! ಇದಕ್ಕಿಂತ ಬೇರೆ ಯಾವುದೂ ನಿಮಗೆ ಉತ್ತಮ ಕಥೆಯನ್ನು ಹೇಳುವುದಿಲ್ಲ!” ಎಂದು ಚಿತ್ರದ ಜೊತೆ ಅವರು ಬರೆದಿದ್ದಾರೆ.

ಆದರೆ ಈ ಎರಡು ಸುದ್ದಿಗಳು ಸಹ ಸುಳ್ಳು ಸುದ್ದಿಗಳಾಗಿವೆ. ಪಿಣರಾಯಿ ವಿಜಯನ್‌ ಮತ್ತು ನಾರಾಯಣಸಾಮಿಯವರು ಏಪ್ರಿಲ್‌ 5ರಂದು ತಮ್ಮ ನಿವಾಸಗಳ ದೀಪ ಆರಿಸಿ ಕ್ಯಾಂಡಲ್‌ ಹಚ್ಚಿದ್ದು ಬೇರೆಲ್ಲಿಯೂ ವರದಿಯಾಗಿಲ್ಲ ಎಂದು ಬೂಮ್‌ ಲೈವ್‌ ಫ್ಯಾಕ್ಟ್‌ಚೆಕ್‌ ನಡೆಸಿ ತಿಳಿಸಿದೆ.

ಈ ವಿಚಾರದ ಕುರಿತು ಬಿಜೆಪಿಯ ಎಸ್‌.ಜಿ ಸೂರ್ಯರನ್ನು ನುರಾರು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸುವ ಮುನ್ನವೇ ಪರಿಶೀಲಿಸಬೇಕು ಎನ್ನುವ ಕಾಮನ್ ಸೆನ್ಸ್‌ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ನಾನು ಕೊಚ್ಚಿಯ ಟೈಮ್ಸ್‌ ಆಫ್‌ ಇಂಡಿಯಾದ ವರದಿಯನ್ನು ಟ್ವೀಟ್‌ ಮಾಡಿದ್ದೇನೆ. ಅದು ತಪ್ಪಾಗಿದ್ದರೆ ನೀವು ನನ್ನನ್ನು ದೂರಬೇಡಿ, ಟೈಮ್ಸ್‌ ಆಫ್‌ ಇಂಡಿಯಾವನ್ನು ದೂರಿ ಎಂದು ಜಾರಿಕೊಳ್ಳಲು ಪ್ರಯತ್ನಿಸಿದ್ದಾರೆ. ಇನ್ನೊಂದು ಕಡೆ ಟೈಮ್ಸ್‌ ಆಫ್‌ ಇಂಡಿಯಾ ಆ ಚಿತ್ರವನ್ನು ಡಿಲಿಟ್‌ ಮಾಡಿದೆ.

ಪಿಣರಾಯಿ ವಿಜಯನ್‌ರವರ ಫೋಟೊದ ಕೀವರ್ಡ್‌ ಆಧಾರದಲ್ಲಿ ರಿವರ್ಸ್‌ ಸರ್ಚ್‌ ಮಾಡಿದಾಗ ಅದು 2018ರ ಫೋಟೊ ಎಂದು ಕಂಡುಬಂದಿದೆ. ಕ್ಲಿಫ್ ಹೌಸ್ ಎಂದು ಕರೆಯಲ್ಪಡುವ ತನ್ನ ಅಧಿಕೃತ ನಿವಾಸದ ವರಾಂಡಾದಲ್ಲಿ ವಿಜಯನ್‌ರವರು ತನ್ನ ಹೆಂಡತಿ, ಮಗಳು ಮತ್ತು ಮೊಮ್ಮಗನೊಂದಿಗೆ ಕುಳಿತಿರುವ ಚಿತ್ರ ಇದಾಗಿದೆ.

2018ರಲ್ಲಿ ಅರ್ಥ್‌ ಅವರ್‌ ಎಂಬ ಕಾರ್ಯಕ್ರಮ ನಡೆದಾಗ ತೆಗೆದ ಚಿತ್ರ ಅದಾಗಿದ್ದು ಈ ಚಿತ್ರವನ್ನು ಮಾರ್ಚ್ 25, 2018 ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಕೇರಳ ಆವೃತ್ತಿಯು ಪ್ರಕಟಿಸಿದೆ. ಶೀರ್ಷಿಕೆಯು “ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪತ್ನಿ ಕಮಲಾ, ಮಗಳು ವೀಣಾ ಮತ್ತು ಮೊಮ್ಮಗ ಇಶಾನ್  ಅರ್ಥ್ ಅವರ್‌ ಪ್ರಯುಕ್ತ ಮೇಣದಬತ್ತಿಯ ಬೆಳಕಿನಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಬರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...