Homeನಿಜವೋ ಸುಳ್ಳೋಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು...

ಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು ಸುದ್ದಿ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬವು ತಮ್ಮ ನಿವಾಸದಲ್ಲಿ ದೀಪ ಹಚ್ಚಿ ಕುಳಿತಿರುವ ಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಕೊಚ್ಚಿ ಆವೃತ್ತಿಯು ಇತ್ತೀಚೆಗೆ ತಮ್ಮ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ. COVID-19 ಸಾಂಕ್ರಾಮಿಕ ರೋಗವು ತಂದಿರುವ ಕತ್ತಲೆಯನ್ನು ಹೋಗಲಾಡಿಸಲು 2020 ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ ಲೈಟ್‌ ಆರಿಸಿ ದೀಪ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ನೀಡಿದ ಕರೆಗೆ ಪಿಣರಾಯಿ ವಿಜಯನ್ ಭಾಗವಹಿಸುತ್ತಿದ್ದಾರೆ ಎಂದು ಆ ಟ್ವೀಟ್‌ಗೆ  ಶೀರ್ಷಿಕೆ ನೀಡಲಾಗಿದೆ.

ಅದೇ ರೀತಿ ಭಾರತೀಯ ಜನತಾ ಪಕ್ಷದ ತಮಿಳುನಾಡಿನ ಯುವ ವಿಭಾಗದ ಉಪಾಧ್ಯಕ್ಷ ಎಸ್.ಜಿ.ಸೂರ್ಯ ಅವರು ಪಿಣರಾಯಿ ವಿಜಯನ್ ಮತ್ತು ಪುದುಚೇರಿ ಮುಖ್ಯಮಂತ್ರಿ ವೇಲು ನಾರಾಯಣಸಾಮಿಯವರ ದೀಪ ಹಿಡಿದಿರುವ ಚಿತ್ರಗಳನ್ನು ಕೊಲಾಜ್‌ ಮಾಡಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಕೇವಲ ಈ ಎರಡು ಚಿತ್ರಗಳು ಪ್ರಧಾನ ಮಂತ್ರಿ ನರೇಂದ್ರಮೋಡಿಯವರ 9 ನಿಮಿಷಗಳು ದೀಪ ಹಚ್ಚುವ ಕರೆಯ ಯಶಸ್ಸನ್ನು ತೋರಿಸುತ್ತವೆ. ಕಮ್ಯುನಿಸ್ಟ್‌ನ ಏಕೈಕ ಸಿಎಂ ಕೇರಳ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ತೀವ್ರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಪಾಂಡಿಚೆರಿ ಸಿಎಂ ನಾರಾಯಣಸಾಮಿ ಇಂದು ಪ್ರಧಾನಿ ಮೋದಿ ಅವರೊಂದಿಗೆ ನಿಂತಿದ್ದಾರೆ! ಇದಕ್ಕಿಂತ ಬೇರೆ ಯಾವುದೂ ನಿಮಗೆ ಉತ್ತಮ ಕಥೆಯನ್ನು ಹೇಳುವುದಿಲ್ಲ!” ಎಂದು ಚಿತ್ರದ ಜೊತೆ ಅವರು ಬರೆದಿದ್ದಾರೆ.

ಆದರೆ ಈ ಎರಡು ಸುದ್ದಿಗಳು ಸಹ ಸುಳ್ಳು ಸುದ್ದಿಗಳಾಗಿವೆ. ಪಿಣರಾಯಿ ವಿಜಯನ್‌ ಮತ್ತು ನಾರಾಯಣಸಾಮಿಯವರು ಏಪ್ರಿಲ್‌ 5ರಂದು ತಮ್ಮ ನಿವಾಸಗಳ ದೀಪ ಆರಿಸಿ ಕ್ಯಾಂಡಲ್‌ ಹಚ್ಚಿದ್ದು ಬೇರೆಲ್ಲಿಯೂ ವರದಿಯಾಗಿಲ್ಲ ಎಂದು ಬೂಮ್‌ ಲೈವ್‌ ಫ್ಯಾಕ್ಟ್‌ಚೆಕ್‌ ನಡೆಸಿ ತಿಳಿಸಿದೆ.

ಈ ವಿಚಾರದ ಕುರಿತು ಬಿಜೆಪಿಯ ಎಸ್‌.ಜಿ ಸೂರ್ಯರನ್ನು ನುರಾರು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸುವ ಮುನ್ನವೇ ಪರಿಶೀಲಿಸಬೇಕು ಎನ್ನುವ ಕಾಮನ್ ಸೆನ್ಸ್‌ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ನಾನು ಕೊಚ್ಚಿಯ ಟೈಮ್ಸ್‌ ಆಫ್‌ ಇಂಡಿಯಾದ ವರದಿಯನ್ನು ಟ್ವೀಟ್‌ ಮಾಡಿದ್ದೇನೆ. ಅದು ತಪ್ಪಾಗಿದ್ದರೆ ನೀವು ನನ್ನನ್ನು ದೂರಬೇಡಿ, ಟೈಮ್ಸ್‌ ಆಫ್‌ ಇಂಡಿಯಾವನ್ನು ದೂರಿ ಎಂದು ಜಾರಿಕೊಳ್ಳಲು ಪ್ರಯತ್ನಿಸಿದ್ದಾರೆ. ಇನ್ನೊಂದು ಕಡೆ ಟೈಮ್ಸ್‌ ಆಫ್‌ ಇಂಡಿಯಾ ಆ ಚಿತ್ರವನ್ನು ಡಿಲಿಟ್‌ ಮಾಡಿದೆ.

ಪಿಣರಾಯಿ ವಿಜಯನ್‌ರವರ ಫೋಟೊದ ಕೀವರ್ಡ್‌ ಆಧಾರದಲ್ಲಿ ರಿವರ್ಸ್‌ ಸರ್ಚ್‌ ಮಾಡಿದಾಗ ಅದು 2018ರ ಫೋಟೊ ಎಂದು ಕಂಡುಬಂದಿದೆ. ಕ್ಲಿಫ್ ಹೌಸ್ ಎಂದು ಕರೆಯಲ್ಪಡುವ ತನ್ನ ಅಧಿಕೃತ ನಿವಾಸದ ವರಾಂಡಾದಲ್ಲಿ ವಿಜಯನ್‌ರವರು ತನ್ನ ಹೆಂಡತಿ, ಮಗಳು ಮತ್ತು ಮೊಮ್ಮಗನೊಂದಿಗೆ ಕುಳಿತಿರುವ ಚಿತ್ರ ಇದಾಗಿದೆ.

2018ರಲ್ಲಿ ಅರ್ಥ್‌ ಅವರ್‌ ಎಂಬ ಕಾರ್ಯಕ್ರಮ ನಡೆದಾಗ ತೆಗೆದ ಚಿತ್ರ ಅದಾಗಿದ್ದು ಈ ಚಿತ್ರವನ್ನು ಮಾರ್ಚ್ 25, 2018 ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಕೇರಳ ಆವೃತ್ತಿಯು ಪ್ರಕಟಿಸಿದೆ. ಶೀರ್ಷಿಕೆಯು “ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪತ್ನಿ ಕಮಲಾ, ಮಗಳು ವೀಣಾ ಮತ್ತು ಮೊಮ್ಮಗ ಇಶಾನ್  ಅರ್ಥ್ ಅವರ್‌ ಪ್ರಯುಕ್ತ ಮೇಣದಬತ್ತಿಯ ಬೆಳಕಿನಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಬರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...