Homeನಿಜವೋ ಸುಳ್ಳೋಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು...

ಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು ಸುದ್ದಿ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬವು ತಮ್ಮ ನಿವಾಸದಲ್ಲಿ ದೀಪ ಹಚ್ಚಿ ಕುಳಿತಿರುವ ಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಕೊಚ್ಚಿ ಆವೃತ್ತಿಯು ಇತ್ತೀಚೆಗೆ ತಮ್ಮ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ. COVID-19 ಸಾಂಕ್ರಾಮಿಕ ರೋಗವು ತಂದಿರುವ ಕತ್ತಲೆಯನ್ನು ಹೋಗಲಾಡಿಸಲು 2020 ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ ಲೈಟ್‌ ಆರಿಸಿ ದೀಪ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ನೀಡಿದ ಕರೆಗೆ ಪಿಣರಾಯಿ ವಿಜಯನ್ ಭಾಗವಹಿಸುತ್ತಿದ್ದಾರೆ ಎಂದು ಆ ಟ್ವೀಟ್‌ಗೆ  ಶೀರ್ಷಿಕೆ ನೀಡಲಾಗಿದೆ.

ಅದೇ ರೀತಿ ಭಾರತೀಯ ಜನತಾ ಪಕ್ಷದ ತಮಿಳುನಾಡಿನ ಯುವ ವಿಭಾಗದ ಉಪಾಧ್ಯಕ್ಷ ಎಸ್.ಜಿ.ಸೂರ್ಯ ಅವರು ಪಿಣರಾಯಿ ವಿಜಯನ್ ಮತ್ತು ಪುದುಚೇರಿ ಮುಖ್ಯಮಂತ್ರಿ ವೇಲು ನಾರಾಯಣಸಾಮಿಯವರ ದೀಪ ಹಿಡಿದಿರುವ ಚಿತ್ರಗಳನ್ನು ಕೊಲಾಜ್‌ ಮಾಡಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಕೇವಲ ಈ ಎರಡು ಚಿತ್ರಗಳು ಪ್ರಧಾನ ಮಂತ್ರಿ ನರೇಂದ್ರಮೋಡಿಯವರ 9 ನಿಮಿಷಗಳು ದೀಪ ಹಚ್ಚುವ ಕರೆಯ ಯಶಸ್ಸನ್ನು ತೋರಿಸುತ್ತವೆ. ಕಮ್ಯುನಿಸ್ಟ್‌ನ ಏಕೈಕ ಸಿಎಂ ಕೇರಳ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ತೀವ್ರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಪಾಂಡಿಚೆರಿ ಸಿಎಂ ನಾರಾಯಣಸಾಮಿ ಇಂದು ಪ್ರಧಾನಿ ಮೋದಿ ಅವರೊಂದಿಗೆ ನಿಂತಿದ್ದಾರೆ! ಇದಕ್ಕಿಂತ ಬೇರೆ ಯಾವುದೂ ನಿಮಗೆ ಉತ್ತಮ ಕಥೆಯನ್ನು ಹೇಳುವುದಿಲ್ಲ!” ಎಂದು ಚಿತ್ರದ ಜೊತೆ ಅವರು ಬರೆದಿದ್ದಾರೆ.

ಆದರೆ ಈ ಎರಡು ಸುದ್ದಿಗಳು ಸಹ ಸುಳ್ಳು ಸುದ್ದಿಗಳಾಗಿವೆ. ಪಿಣರಾಯಿ ವಿಜಯನ್‌ ಮತ್ತು ನಾರಾಯಣಸಾಮಿಯವರು ಏಪ್ರಿಲ್‌ 5ರಂದು ತಮ್ಮ ನಿವಾಸಗಳ ದೀಪ ಆರಿಸಿ ಕ್ಯಾಂಡಲ್‌ ಹಚ್ಚಿದ್ದು ಬೇರೆಲ್ಲಿಯೂ ವರದಿಯಾಗಿಲ್ಲ ಎಂದು ಬೂಮ್‌ ಲೈವ್‌ ಫ್ಯಾಕ್ಟ್‌ಚೆಕ್‌ ನಡೆಸಿ ತಿಳಿಸಿದೆ.

ಈ ವಿಚಾರದ ಕುರಿತು ಬಿಜೆಪಿಯ ಎಸ್‌.ಜಿ ಸೂರ್ಯರನ್ನು ನುರಾರು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸುವ ಮುನ್ನವೇ ಪರಿಶೀಲಿಸಬೇಕು ಎನ್ನುವ ಕಾಮನ್ ಸೆನ್ಸ್‌ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ನಾನು ಕೊಚ್ಚಿಯ ಟೈಮ್ಸ್‌ ಆಫ್‌ ಇಂಡಿಯಾದ ವರದಿಯನ್ನು ಟ್ವೀಟ್‌ ಮಾಡಿದ್ದೇನೆ. ಅದು ತಪ್ಪಾಗಿದ್ದರೆ ನೀವು ನನ್ನನ್ನು ದೂರಬೇಡಿ, ಟೈಮ್ಸ್‌ ಆಫ್‌ ಇಂಡಿಯಾವನ್ನು ದೂರಿ ಎಂದು ಜಾರಿಕೊಳ್ಳಲು ಪ್ರಯತ್ನಿಸಿದ್ದಾರೆ. ಇನ್ನೊಂದು ಕಡೆ ಟೈಮ್ಸ್‌ ಆಫ್‌ ಇಂಡಿಯಾ ಆ ಚಿತ್ರವನ್ನು ಡಿಲಿಟ್‌ ಮಾಡಿದೆ.

ಪಿಣರಾಯಿ ವಿಜಯನ್‌ರವರ ಫೋಟೊದ ಕೀವರ್ಡ್‌ ಆಧಾರದಲ್ಲಿ ರಿವರ್ಸ್‌ ಸರ್ಚ್‌ ಮಾಡಿದಾಗ ಅದು 2018ರ ಫೋಟೊ ಎಂದು ಕಂಡುಬಂದಿದೆ. ಕ್ಲಿಫ್ ಹೌಸ್ ಎಂದು ಕರೆಯಲ್ಪಡುವ ತನ್ನ ಅಧಿಕೃತ ನಿವಾಸದ ವರಾಂಡಾದಲ್ಲಿ ವಿಜಯನ್‌ರವರು ತನ್ನ ಹೆಂಡತಿ, ಮಗಳು ಮತ್ತು ಮೊಮ್ಮಗನೊಂದಿಗೆ ಕುಳಿತಿರುವ ಚಿತ್ರ ಇದಾಗಿದೆ.

2018ರಲ್ಲಿ ಅರ್ಥ್‌ ಅವರ್‌ ಎಂಬ ಕಾರ್ಯಕ್ರಮ ನಡೆದಾಗ ತೆಗೆದ ಚಿತ್ರ ಅದಾಗಿದ್ದು ಈ ಚಿತ್ರವನ್ನು ಮಾರ್ಚ್ 25, 2018 ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಕೇರಳ ಆವೃತ್ತಿಯು ಪ್ರಕಟಿಸಿದೆ. ಶೀರ್ಷಿಕೆಯು “ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪತ್ನಿ ಕಮಲಾ, ಮಗಳು ವೀಣಾ ಮತ್ತು ಮೊಮ್ಮಗ ಇಶಾನ್  ಅರ್ಥ್ ಅವರ್‌ ಪ್ರಯುಕ್ತ ಮೇಣದಬತ್ತಿಯ ಬೆಳಕಿನಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಬರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...