Homeನಿಜವೋ ಸುಳ್ಳೋಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು...

ಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು ಸುದ್ದಿ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬವು ತಮ್ಮ ನಿವಾಸದಲ್ಲಿ ದೀಪ ಹಚ್ಚಿ ಕುಳಿತಿರುವ ಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಕೊಚ್ಚಿ ಆವೃತ್ತಿಯು ಇತ್ತೀಚೆಗೆ ತಮ್ಮ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ. COVID-19 ಸಾಂಕ್ರಾಮಿಕ ರೋಗವು ತಂದಿರುವ ಕತ್ತಲೆಯನ್ನು ಹೋಗಲಾಡಿಸಲು 2020 ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ ಲೈಟ್‌ ಆರಿಸಿ ದೀಪ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ನೀಡಿದ ಕರೆಗೆ ಪಿಣರಾಯಿ ವಿಜಯನ್ ಭಾಗವಹಿಸುತ್ತಿದ್ದಾರೆ ಎಂದು ಆ ಟ್ವೀಟ್‌ಗೆ  ಶೀರ್ಷಿಕೆ ನೀಡಲಾಗಿದೆ.

ಅದೇ ರೀತಿ ಭಾರತೀಯ ಜನತಾ ಪಕ್ಷದ ತಮಿಳುನಾಡಿನ ಯುವ ವಿಭಾಗದ ಉಪಾಧ್ಯಕ್ಷ ಎಸ್.ಜಿ.ಸೂರ್ಯ ಅವರು ಪಿಣರಾಯಿ ವಿಜಯನ್ ಮತ್ತು ಪುದುಚೇರಿ ಮುಖ್ಯಮಂತ್ರಿ ವೇಲು ನಾರಾಯಣಸಾಮಿಯವರ ದೀಪ ಹಿಡಿದಿರುವ ಚಿತ್ರಗಳನ್ನು ಕೊಲಾಜ್‌ ಮಾಡಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಕೇವಲ ಈ ಎರಡು ಚಿತ್ರಗಳು ಪ್ರಧಾನ ಮಂತ್ರಿ ನರೇಂದ್ರಮೋಡಿಯವರ 9 ನಿಮಿಷಗಳು ದೀಪ ಹಚ್ಚುವ ಕರೆಯ ಯಶಸ್ಸನ್ನು ತೋರಿಸುತ್ತವೆ. ಕಮ್ಯುನಿಸ್ಟ್‌ನ ಏಕೈಕ ಸಿಎಂ ಕೇರಳ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ತೀವ್ರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಪಾಂಡಿಚೆರಿ ಸಿಎಂ ನಾರಾಯಣಸಾಮಿ ಇಂದು ಪ್ರಧಾನಿ ಮೋದಿ ಅವರೊಂದಿಗೆ ನಿಂತಿದ್ದಾರೆ! ಇದಕ್ಕಿಂತ ಬೇರೆ ಯಾವುದೂ ನಿಮಗೆ ಉತ್ತಮ ಕಥೆಯನ್ನು ಹೇಳುವುದಿಲ್ಲ!” ಎಂದು ಚಿತ್ರದ ಜೊತೆ ಅವರು ಬರೆದಿದ್ದಾರೆ.

ಆದರೆ ಈ ಎರಡು ಸುದ್ದಿಗಳು ಸಹ ಸುಳ್ಳು ಸುದ್ದಿಗಳಾಗಿವೆ. ಪಿಣರಾಯಿ ವಿಜಯನ್‌ ಮತ್ತು ನಾರಾಯಣಸಾಮಿಯವರು ಏಪ್ರಿಲ್‌ 5ರಂದು ತಮ್ಮ ನಿವಾಸಗಳ ದೀಪ ಆರಿಸಿ ಕ್ಯಾಂಡಲ್‌ ಹಚ್ಚಿದ್ದು ಬೇರೆಲ್ಲಿಯೂ ವರದಿಯಾಗಿಲ್ಲ ಎಂದು ಬೂಮ್‌ ಲೈವ್‌ ಫ್ಯಾಕ್ಟ್‌ಚೆಕ್‌ ನಡೆಸಿ ತಿಳಿಸಿದೆ.

ಈ ವಿಚಾರದ ಕುರಿತು ಬಿಜೆಪಿಯ ಎಸ್‌.ಜಿ ಸೂರ್ಯರನ್ನು ನುರಾರು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸುವ ಮುನ್ನವೇ ಪರಿಶೀಲಿಸಬೇಕು ಎನ್ನುವ ಕಾಮನ್ ಸೆನ್ಸ್‌ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ನಾನು ಕೊಚ್ಚಿಯ ಟೈಮ್ಸ್‌ ಆಫ್‌ ಇಂಡಿಯಾದ ವರದಿಯನ್ನು ಟ್ವೀಟ್‌ ಮಾಡಿದ್ದೇನೆ. ಅದು ತಪ್ಪಾಗಿದ್ದರೆ ನೀವು ನನ್ನನ್ನು ದೂರಬೇಡಿ, ಟೈಮ್ಸ್‌ ಆಫ್‌ ಇಂಡಿಯಾವನ್ನು ದೂರಿ ಎಂದು ಜಾರಿಕೊಳ್ಳಲು ಪ್ರಯತ್ನಿಸಿದ್ದಾರೆ. ಇನ್ನೊಂದು ಕಡೆ ಟೈಮ್ಸ್‌ ಆಫ್‌ ಇಂಡಿಯಾ ಆ ಚಿತ್ರವನ್ನು ಡಿಲಿಟ್‌ ಮಾಡಿದೆ.

ಪಿಣರಾಯಿ ವಿಜಯನ್‌ರವರ ಫೋಟೊದ ಕೀವರ್ಡ್‌ ಆಧಾರದಲ್ಲಿ ರಿವರ್ಸ್‌ ಸರ್ಚ್‌ ಮಾಡಿದಾಗ ಅದು 2018ರ ಫೋಟೊ ಎಂದು ಕಂಡುಬಂದಿದೆ. ಕ್ಲಿಫ್ ಹೌಸ್ ಎಂದು ಕರೆಯಲ್ಪಡುವ ತನ್ನ ಅಧಿಕೃತ ನಿವಾಸದ ವರಾಂಡಾದಲ್ಲಿ ವಿಜಯನ್‌ರವರು ತನ್ನ ಹೆಂಡತಿ, ಮಗಳು ಮತ್ತು ಮೊಮ್ಮಗನೊಂದಿಗೆ ಕುಳಿತಿರುವ ಚಿತ್ರ ಇದಾಗಿದೆ.

2018ರಲ್ಲಿ ಅರ್ಥ್‌ ಅವರ್‌ ಎಂಬ ಕಾರ್ಯಕ್ರಮ ನಡೆದಾಗ ತೆಗೆದ ಚಿತ್ರ ಅದಾಗಿದ್ದು ಈ ಚಿತ್ರವನ್ನು ಮಾರ್ಚ್ 25, 2018 ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಕೇರಳ ಆವೃತ್ತಿಯು ಪ್ರಕಟಿಸಿದೆ. ಶೀರ್ಷಿಕೆಯು “ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪತ್ನಿ ಕಮಲಾ, ಮಗಳು ವೀಣಾ ಮತ್ತು ಮೊಮ್ಮಗ ಇಶಾನ್  ಅರ್ಥ್ ಅವರ್‌ ಪ್ರಯುಕ್ತ ಮೇಣದಬತ್ತಿಯ ಬೆಳಕಿನಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಬರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...