Homeನಿಜವೋ ಸುಳ್ಳೋಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು...

ಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು ಸುದ್ದಿ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬವು ತಮ್ಮ ನಿವಾಸದಲ್ಲಿ ದೀಪ ಹಚ್ಚಿ ಕುಳಿತಿರುವ ಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಕೊಚ್ಚಿ ಆವೃತ್ತಿಯು ಇತ್ತೀಚೆಗೆ ತಮ್ಮ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ. COVID-19 ಸಾಂಕ್ರಾಮಿಕ ರೋಗವು ತಂದಿರುವ ಕತ್ತಲೆಯನ್ನು ಹೋಗಲಾಡಿಸಲು 2020 ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ ಲೈಟ್‌ ಆರಿಸಿ ದೀಪ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ನೀಡಿದ ಕರೆಗೆ ಪಿಣರಾಯಿ ವಿಜಯನ್ ಭಾಗವಹಿಸುತ್ತಿದ್ದಾರೆ ಎಂದು ಆ ಟ್ವೀಟ್‌ಗೆ  ಶೀರ್ಷಿಕೆ ನೀಡಲಾಗಿದೆ.

ಅದೇ ರೀತಿ ಭಾರತೀಯ ಜನತಾ ಪಕ್ಷದ ತಮಿಳುನಾಡಿನ ಯುವ ವಿಭಾಗದ ಉಪಾಧ್ಯಕ್ಷ ಎಸ್.ಜಿ.ಸೂರ್ಯ ಅವರು ಪಿಣರಾಯಿ ವಿಜಯನ್ ಮತ್ತು ಪುದುಚೇರಿ ಮುಖ್ಯಮಂತ್ರಿ ವೇಲು ನಾರಾಯಣಸಾಮಿಯವರ ದೀಪ ಹಿಡಿದಿರುವ ಚಿತ್ರಗಳನ್ನು ಕೊಲಾಜ್‌ ಮಾಡಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಕೇವಲ ಈ ಎರಡು ಚಿತ್ರಗಳು ಪ್ರಧಾನ ಮಂತ್ರಿ ನರೇಂದ್ರಮೋಡಿಯವರ 9 ನಿಮಿಷಗಳು ದೀಪ ಹಚ್ಚುವ ಕರೆಯ ಯಶಸ್ಸನ್ನು ತೋರಿಸುತ್ತವೆ. ಕಮ್ಯುನಿಸ್ಟ್‌ನ ಏಕೈಕ ಸಿಎಂ ಕೇರಳ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ತೀವ್ರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಪಾಂಡಿಚೆರಿ ಸಿಎಂ ನಾರಾಯಣಸಾಮಿ ಇಂದು ಪ್ರಧಾನಿ ಮೋದಿ ಅವರೊಂದಿಗೆ ನಿಂತಿದ್ದಾರೆ! ಇದಕ್ಕಿಂತ ಬೇರೆ ಯಾವುದೂ ನಿಮಗೆ ಉತ್ತಮ ಕಥೆಯನ್ನು ಹೇಳುವುದಿಲ್ಲ!” ಎಂದು ಚಿತ್ರದ ಜೊತೆ ಅವರು ಬರೆದಿದ್ದಾರೆ.

ಆದರೆ ಈ ಎರಡು ಸುದ್ದಿಗಳು ಸಹ ಸುಳ್ಳು ಸುದ್ದಿಗಳಾಗಿವೆ. ಪಿಣರಾಯಿ ವಿಜಯನ್‌ ಮತ್ತು ನಾರಾಯಣಸಾಮಿಯವರು ಏಪ್ರಿಲ್‌ 5ರಂದು ತಮ್ಮ ನಿವಾಸಗಳ ದೀಪ ಆರಿಸಿ ಕ್ಯಾಂಡಲ್‌ ಹಚ್ಚಿದ್ದು ಬೇರೆಲ್ಲಿಯೂ ವರದಿಯಾಗಿಲ್ಲ ಎಂದು ಬೂಮ್‌ ಲೈವ್‌ ಫ್ಯಾಕ್ಟ್‌ಚೆಕ್‌ ನಡೆಸಿ ತಿಳಿಸಿದೆ.

ಈ ವಿಚಾರದ ಕುರಿತು ಬಿಜೆಪಿಯ ಎಸ್‌.ಜಿ ಸೂರ್ಯರನ್ನು ನುರಾರು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸುವ ಮುನ್ನವೇ ಪರಿಶೀಲಿಸಬೇಕು ಎನ್ನುವ ಕಾಮನ್ ಸೆನ್ಸ್‌ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ನಾನು ಕೊಚ್ಚಿಯ ಟೈಮ್ಸ್‌ ಆಫ್‌ ಇಂಡಿಯಾದ ವರದಿಯನ್ನು ಟ್ವೀಟ್‌ ಮಾಡಿದ್ದೇನೆ. ಅದು ತಪ್ಪಾಗಿದ್ದರೆ ನೀವು ನನ್ನನ್ನು ದೂರಬೇಡಿ, ಟೈಮ್ಸ್‌ ಆಫ್‌ ಇಂಡಿಯಾವನ್ನು ದೂರಿ ಎಂದು ಜಾರಿಕೊಳ್ಳಲು ಪ್ರಯತ್ನಿಸಿದ್ದಾರೆ. ಇನ್ನೊಂದು ಕಡೆ ಟೈಮ್ಸ್‌ ಆಫ್‌ ಇಂಡಿಯಾ ಆ ಚಿತ್ರವನ್ನು ಡಿಲಿಟ್‌ ಮಾಡಿದೆ.

ಪಿಣರಾಯಿ ವಿಜಯನ್‌ರವರ ಫೋಟೊದ ಕೀವರ್ಡ್‌ ಆಧಾರದಲ್ಲಿ ರಿವರ್ಸ್‌ ಸರ್ಚ್‌ ಮಾಡಿದಾಗ ಅದು 2018ರ ಫೋಟೊ ಎಂದು ಕಂಡುಬಂದಿದೆ. ಕ್ಲಿಫ್ ಹೌಸ್ ಎಂದು ಕರೆಯಲ್ಪಡುವ ತನ್ನ ಅಧಿಕೃತ ನಿವಾಸದ ವರಾಂಡಾದಲ್ಲಿ ವಿಜಯನ್‌ರವರು ತನ್ನ ಹೆಂಡತಿ, ಮಗಳು ಮತ್ತು ಮೊಮ್ಮಗನೊಂದಿಗೆ ಕುಳಿತಿರುವ ಚಿತ್ರ ಇದಾಗಿದೆ.

2018ರಲ್ಲಿ ಅರ್ಥ್‌ ಅವರ್‌ ಎಂಬ ಕಾರ್ಯಕ್ರಮ ನಡೆದಾಗ ತೆಗೆದ ಚಿತ್ರ ಅದಾಗಿದ್ದು ಈ ಚಿತ್ರವನ್ನು ಮಾರ್ಚ್ 25, 2018 ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಕೇರಳ ಆವೃತ್ತಿಯು ಪ್ರಕಟಿಸಿದೆ. ಶೀರ್ಷಿಕೆಯು “ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪತ್ನಿ ಕಮಲಾ, ಮಗಳು ವೀಣಾ ಮತ್ತು ಮೊಮ್ಮಗ ಇಶಾನ್  ಅರ್ಥ್ ಅವರ್‌ ಪ್ರಯುಕ್ತ ಮೇಣದಬತ್ತಿಯ ಬೆಳಕಿನಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಬರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...