Homeರಾಜಕೀಯನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾತ್ಮಾ ಗಾಂಧಿಯವರ ಭಾವಚಿತ್ರದೊಂದಿಗೆ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ನೋಟುಗಳಲ್ಲಿ ಮುದ್ರಿಸುವಂತೆ ಒಕ್ಕೂಟ ಸರ್ಕಾರಕ್ಕೆ ಬುಧವಾರ ಮನವಿ ಮಾಡಿದರು. ನೋಟಿಗಳ ಮೇಲೆ ದೇವರುಗಳ ಫೋಟೋಗಳನ್ನು ಮುದ್ರಿಸುವುದರಿಂದ ದೇಶದ ಜನರು ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನದಲ್ಲಿ ಆಶೀರ್ವದ ಪಡೆಯುತ್ತಾರೆ ಎಂದು ಅವರು ಹೇಳಿದರು.

“ಲಕ್ಷ್ಮಿ ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರಾಗಿದ್ದು, ಈ ದೇವರುಗಳ ಚಿತ್ರ ನೋಟುಗಳ ಮೇಲೆ ಇದ್ದರೆ, ಇಡೀ ದೇಶವು ಅವರ ಆಶೀರ್ವಾದವನ್ನು ಪಡೆಯುತ್ತದೆ” ಎಂದು ಕೇಜ್ರಿವಾಲ್ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು,“ಆರ್ಥಿಕತೆ ಸುಧಾರಿಸುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಆದರೆ, ನಾವು ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ, ಅದಕ್ಕಾಗಿ ನಮಗೆ ದೇವರ ಆಶೀರ್ವಾದ ಬೇಕು. ಉದ್ಯಮಿಗಳು ತಮ್ಮ ಕೆಲಸದ ಸ್ಥಳದಲ್ಲಿ ಗಣೇಶ ಮತ್ತು ಲಕ್ಷ್ಮಿ ವಿಗ್ರಹಗಳನ್ನು ಇಟ್ಟುಕೊಂಡು, ದಿನದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರತಿದಿನ ಪೂಜೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಅದೇ ರೀತಿ ಕರೆನ್ಸಿ ನೋಟುಗಳಲ್ಲಿ ದೇವರ ಫೋಟೋ ಹಾಕಿದರೆ ದೇಶದ ಆರ್ಥಿಕತೆ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನ ಫಲ ನೀಡುವುದು ಖಚಿತ.

ಪ್ರತಿ ತಿಂಗಳು ಮುದ್ರಿಸುವ ತಾಜಾ ಕರೆನ್ಸಿಗಳಿಗೆ ವಿಗ್ರಹಗಳ ಫೋಟೋಗಳನ್ನು ಸೇರಿಸಬಹುದು ಮತ್ತು ಪ್ರಸ್ತುತ ಇರುವ ಕರೆನ್ಸಿ ನೋಟುಗಳ ವಾಪಾಸಾತಿ ಅಗತ್ಯವಿಲ್ಲ ಎಂದು ಅವರು ಹೇಳಿದರು. ಇದು ಕ್ರಮೇಣ ಜನರ ನಡುವೆ ಹರಡುತ್ತದೆ ಎಂದರು.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಇಂಡೋನೇಷ್ಯಾದ ಉದಾಹರಣೆಯನ್ನು ತೆಗೆದುಕೊಂಡ ಕೇಜ್ರಿವಾಲ್, ಇಡೀ ಜನಸಂಖ್ಯೆಯ ಶೇಕಡಾ 2 ಕ್ಕಿಂತ ಕಡಿಮೆ ಹಿಂದೂ ಜನಸಂಖ್ಯೆಯನ್ನು ಹೊಂದಿದ್ದರೂ, ಅವರ ಕರೆನ್ಸಿ ನೋಟುಗಳಲ್ಲಿ ಗಣೇಶನನ್ನು ಮುದ್ರಿಸಲಾಗುತ್ತದೆ ಎಂದು ಹೇಳಿದರು. “ಇದು ಒಕ್ಕೂಟ ಸರ್ಕಾರ ತೆಗೆದುಕೊಳ್ಳಬೇಕಾದ ಮಹತ್ತರವಾದ ಹೆಜ್ಜೆ ಎಂದು ನಾನು ಭಾವಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.

ವಾಸ್ತವದಲ್ಲಿ ಭಾರತದ ಒಂದು ರುಪಾಯಿ ಅಂದರೆ ಇಂಡೋನೇಷ್ಯಾದಲ್ಲಿ 189.54 ಇಂಡೋನೇಷಿಯನ್ ರೂಪಿಯಾ ಆಗಿದೆ.

ಇದನ್ನೂ ಓದಿ: AAP ರಾಷ್ಟ್ರೀಯ ಪಕ್ಷವಾಗಲು ಇನ್ನೊಂದು ಹೆಜ್ಜೆ ಬಾಕಿ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...