Homeರಾಜಕೀಯನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾತ್ಮಾ ಗಾಂಧಿಯವರ ಭಾವಚಿತ್ರದೊಂದಿಗೆ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ನೋಟುಗಳಲ್ಲಿ ಮುದ್ರಿಸುವಂತೆ ಒಕ್ಕೂಟ ಸರ್ಕಾರಕ್ಕೆ ಬುಧವಾರ ಮನವಿ ಮಾಡಿದರು. ನೋಟಿಗಳ ಮೇಲೆ ದೇವರುಗಳ ಫೋಟೋಗಳನ್ನು ಮುದ್ರಿಸುವುದರಿಂದ ದೇಶದ ಜನರು ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನದಲ್ಲಿ ಆಶೀರ್ವದ ಪಡೆಯುತ್ತಾರೆ ಎಂದು ಅವರು ಹೇಳಿದರು.

“ಲಕ್ಷ್ಮಿ ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರಾಗಿದ್ದು, ಈ ದೇವರುಗಳ ಚಿತ್ರ ನೋಟುಗಳ ಮೇಲೆ ಇದ್ದರೆ, ಇಡೀ ದೇಶವು ಅವರ ಆಶೀರ್ವಾದವನ್ನು ಪಡೆಯುತ್ತದೆ” ಎಂದು ಕೇಜ್ರಿವಾಲ್ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು,“ಆರ್ಥಿಕತೆ ಸುಧಾರಿಸುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಆದರೆ, ನಾವು ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ, ಅದಕ್ಕಾಗಿ ನಮಗೆ ದೇವರ ಆಶೀರ್ವಾದ ಬೇಕು. ಉದ್ಯಮಿಗಳು ತಮ್ಮ ಕೆಲಸದ ಸ್ಥಳದಲ್ಲಿ ಗಣೇಶ ಮತ್ತು ಲಕ್ಷ್ಮಿ ವಿಗ್ರಹಗಳನ್ನು ಇಟ್ಟುಕೊಂಡು, ದಿನದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರತಿದಿನ ಪೂಜೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಅದೇ ರೀತಿ ಕರೆನ್ಸಿ ನೋಟುಗಳಲ್ಲಿ ದೇವರ ಫೋಟೋ ಹಾಕಿದರೆ ದೇಶದ ಆರ್ಥಿಕತೆ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನ ಫಲ ನೀಡುವುದು ಖಚಿತ.

ಪ್ರತಿ ತಿಂಗಳು ಮುದ್ರಿಸುವ ತಾಜಾ ಕರೆನ್ಸಿಗಳಿಗೆ ವಿಗ್ರಹಗಳ ಫೋಟೋಗಳನ್ನು ಸೇರಿಸಬಹುದು ಮತ್ತು ಪ್ರಸ್ತುತ ಇರುವ ಕರೆನ್ಸಿ ನೋಟುಗಳ ವಾಪಾಸಾತಿ ಅಗತ್ಯವಿಲ್ಲ ಎಂದು ಅವರು ಹೇಳಿದರು. ಇದು ಕ್ರಮೇಣ ಜನರ ನಡುವೆ ಹರಡುತ್ತದೆ ಎಂದರು.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಇಂಡೋನೇಷ್ಯಾದ ಉದಾಹರಣೆಯನ್ನು ತೆಗೆದುಕೊಂಡ ಕೇಜ್ರಿವಾಲ್, ಇಡೀ ಜನಸಂಖ್ಯೆಯ ಶೇಕಡಾ 2 ಕ್ಕಿಂತ ಕಡಿಮೆ ಹಿಂದೂ ಜನಸಂಖ್ಯೆಯನ್ನು ಹೊಂದಿದ್ದರೂ, ಅವರ ಕರೆನ್ಸಿ ನೋಟುಗಳಲ್ಲಿ ಗಣೇಶನನ್ನು ಮುದ್ರಿಸಲಾಗುತ್ತದೆ ಎಂದು ಹೇಳಿದರು. “ಇದು ಒಕ್ಕೂಟ ಸರ್ಕಾರ ತೆಗೆದುಕೊಳ್ಳಬೇಕಾದ ಮಹತ್ತರವಾದ ಹೆಜ್ಜೆ ಎಂದು ನಾನು ಭಾವಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.

ವಾಸ್ತವದಲ್ಲಿ ಭಾರತದ ಒಂದು ರುಪಾಯಿ ಅಂದರೆ ಇಂಡೋನೇಷ್ಯಾದಲ್ಲಿ 189.54 ಇಂಡೋನೇಷಿಯನ್ ರೂಪಿಯಾ ಆಗಿದೆ.

ಇದನ್ನೂ ಓದಿ: AAP ರಾಷ್ಟ್ರೀಯ ಪಕ್ಷವಾಗಲು ಇನ್ನೊಂದು ಹೆಜ್ಜೆ ಬಾಕಿ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...