Homeರಾಜಕೀಯನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾತ್ಮಾ ಗಾಂಧಿಯವರ ಭಾವಚಿತ್ರದೊಂದಿಗೆ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ನೋಟುಗಳಲ್ಲಿ ಮುದ್ರಿಸುವಂತೆ ಒಕ್ಕೂಟ ಸರ್ಕಾರಕ್ಕೆ ಬುಧವಾರ ಮನವಿ ಮಾಡಿದರು. ನೋಟಿಗಳ ಮೇಲೆ ದೇವರುಗಳ ಫೋಟೋಗಳನ್ನು ಮುದ್ರಿಸುವುದರಿಂದ ದೇಶದ ಜನರು ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನದಲ್ಲಿ ಆಶೀರ್ವದ ಪಡೆಯುತ್ತಾರೆ ಎಂದು ಅವರು ಹೇಳಿದರು.

“ಲಕ್ಷ್ಮಿ ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರಾಗಿದ್ದು, ಈ ದೇವರುಗಳ ಚಿತ್ರ ನೋಟುಗಳ ಮೇಲೆ ಇದ್ದರೆ, ಇಡೀ ದೇಶವು ಅವರ ಆಶೀರ್ವಾದವನ್ನು ಪಡೆಯುತ್ತದೆ” ಎಂದು ಕೇಜ್ರಿವಾಲ್ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು,“ಆರ್ಥಿಕತೆ ಸುಧಾರಿಸುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಆದರೆ, ನಾವು ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ, ಅದಕ್ಕಾಗಿ ನಮಗೆ ದೇವರ ಆಶೀರ್ವಾದ ಬೇಕು. ಉದ್ಯಮಿಗಳು ತಮ್ಮ ಕೆಲಸದ ಸ್ಥಳದಲ್ಲಿ ಗಣೇಶ ಮತ್ತು ಲಕ್ಷ್ಮಿ ವಿಗ್ರಹಗಳನ್ನು ಇಟ್ಟುಕೊಂಡು, ದಿನದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರತಿದಿನ ಪೂಜೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಅದೇ ರೀತಿ ಕರೆನ್ಸಿ ನೋಟುಗಳಲ್ಲಿ ದೇವರ ಫೋಟೋ ಹಾಕಿದರೆ ದೇಶದ ಆರ್ಥಿಕತೆ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನ ಫಲ ನೀಡುವುದು ಖಚಿತ.

ಪ್ರತಿ ತಿಂಗಳು ಮುದ್ರಿಸುವ ತಾಜಾ ಕರೆನ್ಸಿಗಳಿಗೆ ವಿಗ್ರಹಗಳ ಫೋಟೋಗಳನ್ನು ಸೇರಿಸಬಹುದು ಮತ್ತು ಪ್ರಸ್ತುತ ಇರುವ ಕರೆನ್ಸಿ ನೋಟುಗಳ ವಾಪಾಸಾತಿ ಅಗತ್ಯವಿಲ್ಲ ಎಂದು ಅವರು ಹೇಳಿದರು. ಇದು ಕ್ರಮೇಣ ಜನರ ನಡುವೆ ಹರಡುತ್ತದೆ ಎಂದರು.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಇಂಡೋನೇಷ್ಯಾದ ಉದಾಹರಣೆಯನ್ನು ತೆಗೆದುಕೊಂಡ ಕೇಜ್ರಿವಾಲ್, ಇಡೀ ಜನಸಂಖ್ಯೆಯ ಶೇಕಡಾ 2 ಕ್ಕಿಂತ ಕಡಿಮೆ ಹಿಂದೂ ಜನಸಂಖ್ಯೆಯನ್ನು ಹೊಂದಿದ್ದರೂ, ಅವರ ಕರೆನ್ಸಿ ನೋಟುಗಳಲ್ಲಿ ಗಣೇಶನನ್ನು ಮುದ್ರಿಸಲಾಗುತ್ತದೆ ಎಂದು ಹೇಳಿದರು. “ಇದು ಒಕ್ಕೂಟ ಸರ್ಕಾರ ತೆಗೆದುಕೊಳ್ಳಬೇಕಾದ ಮಹತ್ತರವಾದ ಹೆಜ್ಜೆ ಎಂದು ನಾನು ಭಾವಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.

ವಾಸ್ತವದಲ್ಲಿ ಭಾರತದ ಒಂದು ರುಪಾಯಿ ಅಂದರೆ ಇಂಡೋನೇಷ್ಯಾದಲ್ಲಿ 189.54 ಇಂಡೋನೇಷಿಯನ್ ರೂಪಿಯಾ ಆಗಿದೆ.

ಇದನ್ನೂ ಓದಿ: AAP ರಾಷ್ಟ್ರೀಯ ಪಕ್ಷವಾಗಲು ಇನ್ನೊಂದು ಹೆಜ್ಜೆ ಬಾಕಿ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....