Homeರಾಜಕೀಯನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾತ್ಮಾ ಗಾಂಧಿಯವರ ಭಾವಚಿತ್ರದೊಂದಿಗೆ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ನೋಟುಗಳಲ್ಲಿ ಮುದ್ರಿಸುವಂತೆ ಒಕ್ಕೂಟ ಸರ್ಕಾರಕ್ಕೆ ಬುಧವಾರ ಮನವಿ ಮಾಡಿದರು. ನೋಟಿಗಳ ಮೇಲೆ ದೇವರುಗಳ ಫೋಟೋಗಳನ್ನು ಮುದ್ರಿಸುವುದರಿಂದ ದೇಶದ ಜನರು ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನದಲ್ಲಿ ಆಶೀರ್ವದ ಪಡೆಯುತ್ತಾರೆ ಎಂದು ಅವರು ಹೇಳಿದರು.

“ಲಕ್ಷ್ಮಿ ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರಾಗಿದ್ದು, ಈ ದೇವರುಗಳ ಚಿತ್ರ ನೋಟುಗಳ ಮೇಲೆ ಇದ್ದರೆ, ಇಡೀ ದೇಶವು ಅವರ ಆಶೀರ್ವಾದವನ್ನು ಪಡೆಯುತ್ತದೆ” ಎಂದು ಕೇಜ್ರಿವಾಲ್ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು,“ಆರ್ಥಿಕತೆ ಸುಧಾರಿಸುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಆದರೆ, ನಾವು ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ, ಅದಕ್ಕಾಗಿ ನಮಗೆ ದೇವರ ಆಶೀರ್ವಾದ ಬೇಕು. ಉದ್ಯಮಿಗಳು ತಮ್ಮ ಕೆಲಸದ ಸ್ಥಳದಲ್ಲಿ ಗಣೇಶ ಮತ್ತು ಲಕ್ಷ್ಮಿ ವಿಗ್ರಹಗಳನ್ನು ಇಟ್ಟುಕೊಂಡು, ದಿನದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರತಿದಿನ ಪೂಜೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಅದೇ ರೀತಿ ಕರೆನ್ಸಿ ನೋಟುಗಳಲ್ಲಿ ದೇವರ ಫೋಟೋ ಹಾಕಿದರೆ ದೇಶದ ಆರ್ಥಿಕತೆ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನ ಫಲ ನೀಡುವುದು ಖಚಿತ.

ಪ್ರತಿ ತಿಂಗಳು ಮುದ್ರಿಸುವ ತಾಜಾ ಕರೆನ್ಸಿಗಳಿಗೆ ವಿಗ್ರಹಗಳ ಫೋಟೋಗಳನ್ನು ಸೇರಿಸಬಹುದು ಮತ್ತು ಪ್ರಸ್ತುತ ಇರುವ ಕರೆನ್ಸಿ ನೋಟುಗಳ ವಾಪಾಸಾತಿ ಅಗತ್ಯವಿಲ್ಲ ಎಂದು ಅವರು ಹೇಳಿದರು. ಇದು ಕ್ರಮೇಣ ಜನರ ನಡುವೆ ಹರಡುತ್ತದೆ ಎಂದರು.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಇಂಡೋನೇಷ್ಯಾದ ಉದಾಹರಣೆಯನ್ನು ತೆಗೆದುಕೊಂಡ ಕೇಜ್ರಿವಾಲ್, ಇಡೀ ಜನಸಂಖ್ಯೆಯ ಶೇಕಡಾ 2 ಕ್ಕಿಂತ ಕಡಿಮೆ ಹಿಂದೂ ಜನಸಂಖ್ಯೆಯನ್ನು ಹೊಂದಿದ್ದರೂ, ಅವರ ಕರೆನ್ಸಿ ನೋಟುಗಳಲ್ಲಿ ಗಣೇಶನನ್ನು ಮುದ್ರಿಸಲಾಗುತ್ತದೆ ಎಂದು ಹೇಳಿದರು. “ಇದು ಒಕ್ಕೂಟ ಸರ್ಕಾರ ತೆಗೆದುಕೊಳ್ಳಬೇಕಾದ ಮಹತ್ತರವಾದ ಹೆಜ್ಜೆ ಎಂದು ನಾನು ಭಾವಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.

ವಾಸ್ತವದಲ್ಲಿ ಭಾರತದ ಒಂದು ರುಪಾಯಿ ಅಂದರೆ ಇಂಡೋನೇಷ್ಯಾದಲ್ಲಿ 189.54 ಇಂಡೋನೇಷಿಯನ್ ರೂಪಿಯಾ ಆಗಿದೆ.

ಇದನ್ನೂ ಓದಿ: AAP ರಾಷ್ಟ್ರೀಯ ಪಕ್ಷವಾಗಲು ಇನ್ನೊಂದು ಹೆಜ್ಜೆ ಬಾಕಿ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...