Homeಮುಖಪುಟಮರಾಠರಿಗೆ ಮೀಸಲಾತಿ ನೀಡದಂತೆ ಸರಕಾರದ ಮೇಲೆ ಒತ್ತಡ ಹಾಕಲಾಗಿದೆ: ಮನೋಜ್ ಜಾರಂಗೆ

ಮರಾಠರಿಗೆ ಮೀಸಲಾತಿ ನೀಡದಂತೆ ಸರಕಾರದ ಮೇಲೆ ಒತ್ತಡ ಹಾಕಲಾಗಿದೆ: ಮನೋಜ್ ಜಾರಂಗೆ

- Advertisement -
- Advertisement -

ಮರಾಠ ನಾಯಕರು ಈ ಹಿಂದೆ ಸಮುದಾಯಕ್ಕೆ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಲಿಲ್ಲ ಮತ್ತು ಮರಾಠರಿಗೆ ಮೀಸಲಾತಿ ನೀಡದಂತೆ 30-40 ವರ್ಷಗಳಿಂದ ಒಬಿಸಿ ನಾಯಕರಿಂದ ಸರ್ಕಾರದ ಮೇಲೆ ಒತ್ತಡವಿದೆ ಎಂದು ಮರಾಠ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಹೇಳಿದ್ದಾರೆ.

ಡಿಸೆಂಬರ್ 24ರೊಳಗೆ ನಮಗೆ ಮೀಸಲಾತಿ ನೀಡದಿದ್ದರೆ, ನಾವು ಈ ನಾಯಕರ ಹೆಸರನ್ನು ಬಹಿರಂಗಪಡಿಸುತ್ತೇವೆ ಎಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೋಜ್‌ ಜಾರಂಗೆ ಅವರು ಹೇಳಿದ್ದಾರೆ.

ಮರಾಠ ಸಮುದಾಯದ ಸದಸ್ಯರಿಗೆ ಕುಂಬಿ ಪ್ರಮಾಣಪತ್ರ ನೀಡುವ ಕುರಿತು ಅಧ್ಯಯನ ಮಾಡಲು ನಿವೃತ್ತ ನ್ಯಾಯಮೂರ್ತಿ ಸಂದೀಪ್ ಶಿಂಧೆ ಸಮಿತಿಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿದೆ. ಮರಾಠರಿಗೆ ಕುಂಬಿ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ಇತರ ಹಿಂದುಳಿದ ವರ್ಗದಡಿಯಲ್ಲಿ ಮೀಸಲಾತಿ ಸಿಗಬಹುದು ಎಂಬುದು ಜಾರಂಗೆಯ ಲೆಕ್ಕಾಚಾರವಾಗಿದೆ.

ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಛಗನ್ ಭುಜಬಲ್ ಸೋಮವಾರ ಮರಾಠ ಸಮುದಾಯಕ್ಕೆ ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಕ್ಕೆ ವಿರೋಧಿಸಿದ್ದಾರೆ. ಈ ಕುರಿತ ಹಿಂಬಾಗಿಲ ಪ್ರಯತ್ನಗಳನ್ನು ವಿರೋಧಿಸಲಾಗುವುದು. ಹಿಂಸಾಚಾರ ಮತ್ತು ಒತ್ತಡದ ತಂತ್ರಗಳನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದರು.

ಮರಾಠ ನಾಯಕರು ನಮಗೆ ಬೆಂಬಲ ನೀಡಿಲ್ಲ, ಮೀಸಲಾತಿಯನ್ನೂ ನೀಡಿಲ್ಲ. ಅಲ್ಲದೆ 30-40 ವರ್ಷಗಳಿಂದ ಒಬಿಸಿ ಮುಖಂಡರಿಂದ ಸರಕಾರದ ಮೇಲೆ ಒತ್ತಡವಿತ್ತು. ಹೀಗಾಗಿ ನಮಗೆ ಮೀಸಲಾತಿ ಸಿಗುತ್ತಿಲ್ಲ. ಡಿ. 24ರೊಳಗೆ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಿಲ್ಲ ಎಂದಾದರೆ ನಂತರ ನಾವು ಅಂತಹ ನಾಯಕರ ಹೆಸರನ್ನು ಬಹಿರಂಗಪಡಿಸುತ್ತೇವೆ ಎಂದು ಮನೋಜ್‌ ಜಾರಂಗೆ ಹೇಳಿದ್ದಾರೆ.

ಒಬಿಸಿಗಳಿಗೆ ಸಿಗುವ ಸೌಲಭ್ಯಗಳನ್ನು ಮೀಸಲಾತಿ ವರ್ಗಕ್ಕೆ ಸೇರಿಸಿದ ನಂತರ ಮರಾಠ ಸಮುದಾಯಕ್ಕೂ ನೀಡಬೇಕು. ಒಬಿಸಿ ಕೋಟಾದಡಿ ಉದ್ಯೋಗಗಳನ್ನೂ ಕೂಡ ಸರ್ಕಾರ ನೀಡಬೇಕು. ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಇಂದು ಒಬಿಸಿ ವರ್ಗದವರಿಗೆ ಸಿಗುವ ಎಲ್ಲಾ ಸವಲತ್ತುಗಳು ನಮಗೂ ಸಿಗಬೇಕು ಎಂದು ಹೇಳಿದ್ದಾರೆ.

ಮರಾಠಾ ಮೀಸಲಾತಿಯನ್ನು ಏಕೆ ವಿರೋಧಿಸುತ್ತಾರೆ ಎಂಬುದನ್ನು ಒಬಿಸಿ ಮುಖಂಡರು ಸ್ಪಷ್ಟಪಡಿಸಬೇಕು  ಅವರು ವಿರೋಧಿಸಲು ಕಾರಣ ಏನು ಎಂದು ಹೇಳಬೇಕು. ಒಬಿಸಿಗಳು ಏನು ಪಡೆಯುತ್ತಿದ್ದಾರೆ. ಅದು ನಮಗೂ ಸಿಗಬೇಕು. ಮರಾಠಾ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಿ ಪ್ರಾಣತ್ಯಾಗ ಮಾಡಿಕೊಂಡವರ ಕುಟುಂಬಗಳಿಗೆ ನೆರವು ನೀಡಬೇಕು. ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ದೊರಕಿಸಿಕೊಡಬೇಕು ಎಂದು ಜಾರಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...