Homeಮುಖಪುಟಮರಾಠರಿಗೆ ಮೀಸಲಾತಿ ನೀಡದಂತೆ ಸರಕಾರದ ಮೇಲೆ ಒತ್ತಡ ಹಾಕಲಾಗಿದೆ: ಮನೋಜ್ ಜಾರಂಗೆ

ಮರಾಠರಿಗೆ ಮೀಸಲಾತಿ ನೀಡದಂತೆ ಸರಕಾರದ ಮೇಲೆ ಒತ್ತಡ ಹಾಕಲಾಗಿದೆ: ಮನೋಜ್ ಜಾರಂಗೆ

- Advertisement -
- Advertisement -

ಮರಾಠ ನಾಯಕರು ಈ ಹಿಂದೆ ಸಮುದಾಯಕ್ಕೆ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಲಿಲ್ಲ ಮತ್ತು ಮರಾಠರಿಗೆ ಮೀಸಲಾತಿ ನೀಡದಂತೆ 30-40 ವರ್ಷಗಳಿಂದ ಒಬಿಸಿ ನಾಯಕರಿಂದ ಸರ್ಕಾರದ ಮೇಲೆ ಒತ್ತಡವಿದೆ ಎಂದು ಮರಾಠ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಹೇಳಿದ್ದಾರೆ.

ಡಿಸೆಂಬರ್ 24ರೊಳಗೆ ನಮಗೆ ಮೀಸಲಾತಿ ನೀಡದಿದ್ದರೆ, ನಾವು ಈ ನಾಯಕರ ಹೆಸರನ್ನು ಬಹಿರಂಗಪಡಿಸುತ್ತೇವೆ ಎಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೋಜ್‌ ಜಾರಂಗೆ ಅವರು ಹೇಳಿದ್ದಾರೆ.

ಮರಾಠ ಸಮುದಾಯದ ಸದಸ್ಯರಿಗೆ ಕುಂಬಿ ಪ್ರಮಾಣಪತ್ರ ನೀಡುವ ಕುರಿತು ಅಧ್ಯಯನ ಮಾಡಲು ನಿವೃತ್ತ ನ್ಯಾಯಮೂರ್ತಿ ಸಂದೀಪ್ ಶಿಂಧೆ ಸಮಿತಿಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿದೆ. ಮರಾಠರಿಗೆ ಕುಂಬಿ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ಇತರ ಹಿಂದುಳಿದ ವರ್ಗದಡಿಯಲ್ಲಿ ಮೀಸಲಾತಿ ಸಿಗಬಹುದು ಎಂಬುದು ಜಾರಂಗೆಯ ಲೆಕ್ಕಾಚಾರವಾಗಿದೆ.

ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಛಗನ್ ಭುಜಬಲ್ ಸೋಮವಾರ ಮರಾಠ ಸಮುದಾಯಕ್ಕೆ ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಕ್ಕೆ ವಿರೋಧಿಸಿದ್ದಾರೆ. ಈ ಕುರಿತ ಹಿಂಬಾಗಿಲ ಪ್ರಯತ್ನಗಳನ್ನು ವಿರೋಧಿಸಲಾಗುವುದು. ಹಿಂಸಾಚಾರ ಮತ್ತು ಒತ್ತಡದ ತಂತ್ರಗಳನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದರು.

ಮರಾಠ ನಾಯಕರು ನಮಗೆ ಬೆಂಬಲ ನೀಡಿಲ್ಲ, ಮೀಸಲಾತಿಯನ್ನೂ ನೀಡಿಲ್ಲ. ಅಲ್ಲದೆ 30-40 ವರ್ಷಗಳಿಂದ ಒಬಿಸಿ ಮುಖಂಡರಿಂದ ಸರಕಾರದ ಮೇಲೆ ಒತ್ತಡವಿತ್ತು. ಹೀಗಾಗಿ ನಮಗೆ ಮೀಸಲಾತಿ ಸಿಗುತ್ತಿಲ್ಲ. ಡಿ. 24ರೊಳಗೆ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಿಲ್ಲ ಎಂದಾದರೆ ನಂತರ ನಾವು ಅಂತಹ ನಾಯಕರ ಹೆಸರನ್ನು ಬಹಿರಂಗಪಡಿಸುತ್ತೇವೆ ಎಂದು ಮನೋಜ್‌ ಜಾರಂಗೆ ಹೇಳಿದ್ದಾರೆ.

ಒಬಿಸಿಗಳಿಗೆ ಸಿಗುವ ಸೌಲಭ್ಯಗಳನ್ನು ಮೀಸಲಾತಿ ವರ್ಗಕ್ಕೆ ಸೇರಿಸಿದ ನಂತರ ಮರಾಠ ಸಮುದಾಯಕ್ಕೂ ನೀಡಬೇಕು. ಒಬಿಸಿ ಕೋಟಾದಡಿ ಉದ್ಯೋಗಗಳನ್ನೂ ಕೂಡ ಸರ್ಕಾರ ನೀಡಬೇಕು. ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಇಂದು ಒಬಿಸಿ ವರ್ಗದವರಿಗೆ ಸಿಗುವ ಎಲ್ಲಾ ಸವಲತ್ತುಗಳು ನಮಗೂ ಸಿಗಬೇಕು ಎಂದು ಹೇಳಿದ್ದಾರೆ.

ಮರಾಠಾ ಮೀಸಲಾತಿಯನ್ನು ಏಕೆ ವಿರೋಧಿಸುತ್ತಾರೆ ಎಂಬುದನ್ನು ಒಬಿಸಿ ಮುಖಂಡರು ಸ್ಪಷ್ಟಪಡಿಸಬೇಕು  ಅವರು ವಿರೋಧಿಸಲು ಕಾರಣ ಏನು ಎಂದು ಹೇಳಬೇಕು. ಒಬಿಸಿಗಳು ಏನು ಪಡೆಯುತ್ತಿದ್ದಾರೆ. ಅದು ನಮಗೂ ಸಿಗಬೇಕು. ಮರಾಠಾ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಿ ಪ್ರಾಣತ್ಯಾಗ ಮಾಡಿಕೊಂಡವರ ಕುಟುಂಬಗಳಿಗೆ ನೆರವು ನೀಡಬೇಕು. ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ದೊರಕಿಸಿಕೊಡಬೇಕು ಎಂದು ಜಾರಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...