Homeಮುಖಪುಟಮರಾಠರಿಗೆ ಮೀಸಲಾತಿ ನೀಡದಂತೆ ಸರಕಾರದ ಮೇಲೆ ಒತ್ತಡ ಹಾಕಲಾಗಿದೆ: ಮನೋಜ್ ಜಾರಂಗೆ

ಮರಾಠರಿಗೆ ಮೀಸಲಾತಿ ನೀಡದಂತೆ ಸರಕಾರದ ಮೇಲೆ ಒತ್ತಡ ಹಾಕಲಾಗಿದೆ: ಮನೋಜ್ ಜಾರಂಗೆ

- Advertisement -
- Advertisement -

ಮರಾಠ ನಾಯಕರು ಈ ಹಿಂದೆ ಸಮುದಾಯಕ್ಕೆ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಲಿಲ್ಲ ಮತ್ತು ಮರಾಠರಿಗೆ ಮೀಸಲಾತಿ ನೀಡದಂತೆ 30-40 ವರ್ಷಗಳಿಂದ ಒಬಿಸಿ ನಾಯಕರಿಂದ ಸರ್ಕಾರದ ಮೇಲೆ ಒತ್ತಡವಿದೆ ಎಂದು ಮರಾಠ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಹೇಳಿದ್ದಾರೆ.

ಡಿಸೆಂಬರ್ 24ರೊಳಗೆ ನಮಗೆ ಮೀಸಲಾತಿ ನೀಡದಿದ್ದರೆ, ನಾವು ಈ ನಾಯಕರ ಹೆಸರನ್ನು ಬಹಿರಂಗಪಡಿಸುತ್ತೇವೆ ಎಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೋಜ್‌ ಜಾರಂಗೆ ಅವರು ಹೇಳಿದ್ದಾರೆ.

ಮರಾಠ ಸಮುದಾಯದ ಸದಸ್ಯರಿಗೆ ಕುಂಬಿ ಪ್ರಮಾಣಪತ್ರ ನೀಡುವ ಕುರಿತು ಅಧ್ಯಯನ ಮಾಡಲು ನಿವೃತ್ತ ನ್ಯಾಯಮೂರ್ತಿ ಸಂದೀಪ್ ಶಿಂಧೆ ಸಮಿತಿಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿದೆ. ಮರಾಠರಿಗೆ ಕುಂಬಿ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ಇತರ ಹಿಂದುಳಿದ ವರ್ಗದಡಿಯಲ್ಲಿ ಮೀಸಲಾತಿ ಸಿಗಬಹುದು ಎಂಬುದು ಜಾರಂಗೆಯ ಲೆಕ್ಕಾಚಾರವಾಗಿದೆ.

ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಛಗನ್ ಭುಜಬಲ್ ಸೋಮವಾರ ಮರಾಠ ಸಮುದಾಯಕ್ಕೆ ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಕ್ಕೆ ವಿರೋಧಿಸಿದ್ದಾರೆ. ಈ ಕುರಿತ ಹಿಂಬಾಗಿಲ ಪ್ರಯತ್ನಗಳನ್ನು ವಿರೋಧಿಸಲಾಗುವುದು. ಹಿಂಸಾಚಾರ ಮತ್ತು ಒತ್ತಡದ ತಂತ್ರಗಳನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದರು.

ಮರಾಠ ನಾಯಕರು ನಮಗೆ ಬೆಂಬಲ ನೀಡಿಲ್ಲ, ಮೀಸಲಾತಿಯನ್ನೂ ನೀಡಿಲ್ಲ. ಅಲ್ಲದೆ 30-40 ವರ್ಷಗಳಿಂದ ಒಬಿಸಿ ಮುಖಂಡರಿಂದ ಸರಕಾರದ ಮೇಲೆ ಒತ್ತಡವಿತ್ತು. ಹೀಗಾಗಿ ನಮಗೆ ಮೀಸಲಾತಿ ಸಿಗುತ್ತಿಲ್ಲ. ಡಿ. 24ರೊಳಗೆ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಿಲ್ಲ ಎಂದಾದರೆ ನಂತರ ನಾವು ಅಂತಹ ನಾಯಕರ ಹೆಸರನ್ನು ಬಹಿರಂಗಪಡಿಸುತ್ತೇವೆ ಎಂದು ಮನೋಜ್‌ ಜಾರಂಗೆ ಹೇಳಿದ್ದಾರೆ.

ಒಬಿಸಿಗಳಿಗೆ ಸಿಗುವ ಸೌಲಭ್ಯಗಳನ್ನು ಮೀಸಲಾತಿ ವರ್ಗಕ್ಕೆ ಸೇರಿಸಿದ ನಂತರ ಮರಾಠ ಸಮುದಾಯಕ್ಕೂ ನೀಡಬೇಕು. ಒಬಿಸಿ ಕೋಟಾದಡಿ ಉದ್ಯೋಗಗಳನ್ನೂ ಕೂಡ ಸರ್ಕಾರ ನೀಡಬೇಕು. ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಇಂದು ಒಬಿಸಿ ವರ್ಗದವರಿಗೆ ಸಿಗುವ ಎಲ್ಲಾ ಸವಲತ್ತುಗಳು ನಮಗೂ ಸಿಗಬೇಕು ಎಂದು ಹೇಳಿದ್ದಾರೆ.

ಮರಾಠಾ ಮೀಸಲಾತಿಯನ್ನು ಏಕೆ ವಿರೋಧಿಸುತ್ತಾರೆ ಎಂಬುದನ್ನು ಒಬಿಸಿ ಮುಖಂಡರು ಸ್ಪಷ್ಟಪಡಿಸಬೇಕು  ಅವರು ವಿರೋಧಿಸಲು ಕಾರಣ ಏನು ಎಂದು ಹೇಳಬೇಕು. ಒಬಿಸಿಗಳು ಏನು ಪಡೆಯುತ್ತಿದ್ದಾರೆ. ಅದು ನಮಗೂ ಸಿಗಬೇಕು. ಮರಾಠಾ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಿ ಪ್ರಾಣತ್ಯಾಗ ಮಾಡಿಕೊಂಡವರ ಕುಟುಂಬಗಳಿಗೆ ನೆರವು ನೀಡಬೇಕು. ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ದೊರಕಿಸಿಕೊಡಬೇಕು ಎಂದು ಜಾರಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...