Homeಕರ್ನಾಟಕ2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ...

2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಹೇಳಿಕೆ

- Advertisement -
- Advertisement -

ನರೇಂದ್ರ ಮೋದಿ ಅವರು ಆರ್ಥಿಕತೆಯನ್ನು ದಿಗ್ಭ್ರಮೆಗೊಳಿಸುವಷ್ಟು ಅಸಮರ್ಥರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೂ ಆಗಿರುವ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಎಂದು ಹೇಳಿದ್ದಾರೆ.

ಪ್ರಭಾಕರ್ ಅವರ ಹೊಸ ಪುಸ್ತಕ ‘ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ: ಎಸ್ಸೇಸ್ ಆನ್ ಎ ರಿಪಬ್ಲಿಕ್ ಇನ್ ಕ್ರೈಸಿಸ್’ಅನ್ನು (ಸ್ಪೀಕಿಂಗ್ ಟೈಗರ್ ಪ್ರಕಟಿಸಿದ) ಬೆಂಗಳೂರಿನಲ್ಲಿ ಭಾನುವಾರ ಔಪಚಾರಿಕವಾಗಿ ಬಿಡುಗಡೆ ಮಾಡಲಾಗಿದ್ದು, ಮೋದಿ ಸರ್ಕಾರದ ಸಮಸ್ಯೆಗಳು, ಆರ್ಥಿಕತೆ, ರಾಜಕೀಯ ಮತ್ತು ಇತರ ವಿಷಯಗಳ ಕುರಿತು ಪ್ರಬಂಧಗಳ ಸರಣಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ಆಡಳಿತವು ಅರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಾ ಭಾವನೆಗಳನ್ನು ಹೊರ ತರಲು ಇದು ಅತ್ಯಂತ ಸಮರ್ಥವಾಗಿದೆ ಎಂದು ಡಾ, ಪರಕಾಲ ಅವರು, ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಿಂದ ಪಿಎಚ್‌.ಡಿ ಪಡೆದಿರುವ ಡಾ.ಪ್ರಭಾಕರ್ ಅವರು ಹಣಕಾಸು ಸಚಿವೆ ನಿರ್ಮಲಾ ತಾರಾಮನ್ ಅವರ ಪತಿ.

”2014ರ ಚುನಾವಣೆಯಲ್ಲಿ ಗೆಲ್ಲಲು ಬಳಸಿದ ಅಭಿವೃದ್ಧಿಯ ಹಲಗೆಯ ಮೇಲೆ ಗೆದ್ದ ಬಿಜೆಪಿಯು ಹಿಂದುತ್ವವನ್ನು ಕುತಂತ್ರದಿಂದ ಹಳ್ಳ ಸಾಗಣೆ ಮಾಡಿದೆ ಎಂದು ಅವರು ಹೇಳಿದ್ದಾರೆ. 2024 ರಲ್ಲಿ ಮತ್ತೊಂದು ಬಾರಿ ಮೋದಿ ಸರ್ಕಾರ ಬಂದರೆ ಅದು ಆರ್ಥಿಕತೆಗೆ ಮಾತ್ರವಲ್ಲದೆ, ಒಟ್ಟಾರೆ ಇಡೀ ರಾಷ್ಟ್ರಕ್ಕೆ ಆಪತ್ತು ತರಲಿದೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದೆ

”ಹಿಂದುತ್ವದಿಂದ ಸೇರಿ ಸರಾಗ ಜನರನ್ನು ಒಟ್ಟುಗೂಡಿಸುವ ಮತ್ತು ಅವರ ಕೇಳು ಪ್ರವೃತ್ತಿಯನ್ನು ಉದ್ದೀಪಿಸುವ ಪ್ರಭಾವಿ ಮೋದಿ ಮತ್ತು ಬಿಜೆಪಿಯ ಸಾಮರ್ಥ್ಯದಿಂದಾಗಿ ಅವರು ಜನಪ್ರಿಯತೆ ಹೊಂದಿದ್ದಾರೆ” ಎಂದು ಡಾ. ಪ್ರಭಾಕರ್ ವಾದಿಸಿದ್ದಾರೆ.

”ಆದರೆ 2011 ರ ಚುನಾವಣೆಯ ಪೂರ್ವದಲ್ಲಿ ನಡೆದ ಹೋರಾಟವು ಹಿಂದೂ ಮತ್ತು ಮುಸ್ಲಿಮರ ನಡುವೆ ಆಗಿರಲಿಲ್ಲ ಎಂದು ಒತ್ತಿ ಹೇಳಿದ ಅವರು, ಆ ಹೋರಾಟವು, ಬಡತನ ಮತ್ತು ನಿರುದ್ಯೋಗದ ವಿರುದ್ಧ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ನಡೆಸಿದ ಹೋರಾಟವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

”2014ರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು, ಉತ್ತಮ ಆಡಳಿತ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮತ್ತು ‘ಅಭಿವೃದ್ಧಿ’ ಭರವಸೆ ನೀಡಿ ಮತ ಕೇಳಿದ್ದರು” ಎಂದು ಡಾ. ಪರಕಾಲ ಪ್ರಭಾಕರ್ ನೆನಪಿಸಿಕೊಂಡರು.

ಹಿಂದೂ ರಾಷ್ಟ್ರ ಮತ್ತು ಹಿಂದುತ್ವದ ನಿಜವಾದ ಉದ್ದೇಶವನ್ನು ಮುಂದಿಟ್ಟು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೇಶದ ಜನರ ವಿಶ್ವಾಸವನ್ನು ಗೆದ್ದಿರಲಿಲ್ಲ ಎಂದ ಅವರು, ಅಭಿವೃದ್ಧಿಯ ಹಸರಿನಲ್ಲಿ ಹಿಂದುತ್ವವನ್ನು ಕಳ್ಳಸಾಗಣೆ ಮಾಡಲಾಗಿದೆ. ಟ್ರೋಜನ್ ಕುದುರೆಯಂತೆ ಅಭಿವೃದ್ಧಿ ಯನ್ನು ಬಳಸಲಾಗಿದೆ” ಎಂದು ಅವರು ಹೇಳಿದ್ದಾರೆ.

”ನಾಯಕತ್ವದ ಗುರಿಯು ಬಿರುಕುಗಳನ್ನು ತೆಗೆದುಹಾಕುವುದು ಮತ್ತು ಸಾಮರಸ್ಯವನ್ನು ಉತ್ತೇರಿಸುವುದು, ಅದನ್ನು ಬಿಟ್ಟು, ಕೋಮು ಭಾವನೆಗಳಿಗೆ ದಕ್ಕೆ ತರುವುದು ನಾಯಕರ ಕೆಲಸವಲ್ಲ” ಎಂದು ಡಾ. ಪ್ರಭಾಕರ್ ಹೇಳಿದರು.

”ಬಿಜೆಪಿ ಮತ್ತು ಮೋದಿ ಅವರು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸಿದರೆ ಅದನ್ನು ಅವರು 2014 ರ ಚುನಾವಣೆಯಲ್ಲಿ ಸ್ಪರ್ಧಿಸುವಾಗಲೇ ಹೇಳಬೇಕಿತ್ತು” ಎಂದು ಪ್ರಭಾಕರ್ ಹೇಳಿದ್ದಾರೆ

ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದವು ಸ್ವೀಕಾರಾರ್ಹತೆಯನ್ನು ಕಂಡಿರಲಿಲ್ಲ ಎಂದು ಗಮನಸೆಳೆದ ಅವರು, ವಿಭಜನೆಯ ನಂತರ ಹಿಂದುತ್ನ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಭಾರತದಲ್ಲಿ ಹೆಚ್ಚಿನ ಸಾಧ್ಯತೆ ಇತ್ತು. ದೇಶ ವಿಭಜನೆ ವೇಳೆ ಎರಡೂ ಸಮುದಾಯಗಳ ಲಕ್ಷಾಂತರ ಜನರು ಸಾಮೂಹಿಕವಾಗಿ ವಲಸೆ ಹೋಗುತ್ತಿದ್ದರು. ಎರೆಡೂ ದೇಶಕ್ಕೂ ಸಾವಿರಾರು ಮೃತದೇಹಗಳು ಬರುತ್ತಿದ್ದವು. ಆ ಸಮಯದಲ್ಲಿ ಅಭದ್ರತೆ ಮತ್ತು ಭಯ ಹೆಚ್ಚಿತ್ತು, ಆಗ ಹಿಂದುತ್ವ ರಾಜಕಾರಣ ಬೆಳೆಯಲು ಅನುಕೂಲ ಸನ್ನಿವೇಶ ಇದ್ದರೂ ಆಗ ಬಹುಸಂಖ್ಯಾತವಾದಕ್ಕೆ ಭಾರತದಲ್ಲಿ ಮಾನ್ಯತೆ ಸಿಗಲಿಲ್ಲ” ಎನ್ನುವುದನ್ನು ಅವರು ಗಮನ ಸೆಳೆದರು.

”ಏಳು ದಶಕಗಳ ನಂತರ ಹಿಂದು ರಾಜಕಾರಣಕ್ಕೆ ಸ್ವೀಕಾರ ಸಿಗುತ್ತಿದೆ, ಬಹುಶಃ ವಿಭಜನೆಯ ಬಗ್ಗೆ ಯಾವುದೇ ಕಹಿ ನೆನಪಿಲ್ಲದ ಮತ್ತು ಅದರಿಂದ ಬಳಲದಿರುವ ಭಾರತೀಯರ ತಲೆಮಾರಿನಲ್ಲಿ ಅದಕ್ಕೆ ಮಾನ್ಯತೆ ಸಿಗುತ್ತಿದೆ” ಎಂದು ಪ್ರಭಾಸ‌ ಗಮನಿಸಿದರು.

”ಅರ್ಥಶಾಸ್ತ್ರದಲ್ಲಿ ಕೆಲವು ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ” ಎಂದು ಪ್ರಭಾಕರ್ ಹೇಳಿದ್ದಾರೆ. ”ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದ ಅವರು, ಈ ನಡೆಯು ಪ್ರಮಾದಗಳನ್ನು ಹೆಚ್ಚಿಸಿತು ಮತ್ತು ಬಿಕ್ಕಟ್ಟನ್ನು ಉಲ್ಬಣಗೊಳಿಸಿತು” ಎಂದು ಡಾ. ಪ್ರಭಾಕರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...