Homeಕರ್ನಾಟಕ2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ...

2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಹೇಳಿಕೆ

- Advertisement -
- Advertisement -

ನರೇಂದ್ರ ಮೋದಿ ಅವರು ಆರ್ಥಿಕತೆಯನ್ನು ದಿಗ್ಭ್ರಮೆಗೊಳಿಸುವಷ್ಟು ಅಸಮರ್ಥರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೂ ಆಗಿರುವ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಎಂದು ಹೇಳಿದ್ದಾರೆ.

ಪ್ರಭಾಕರ್ ಅವರ ಹೊಸ ಪುಸ್ತಕ ‘ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ: ಎಸ್ಸೇಸ್ ಆನ್ ಎ ರಿಪಬ್ಲಿಕ್ ಇನ್ ಕ್ರೈಸಿಸ್’ಅನ್ನು (ಸ್ಪೀಕಿಂಗ್ ಟೈಗರ್ ಪ್ರಕಟಿಸಿದ) ಬೆಂಗಳೂರಿನಲ್ಲಿ ಭಾನುವಾರ ಔಪಚಾರಿಕವಾಗಿ ಬಿಡುಗಡೆ ಮಾಡಲಾಗಿದ್ದು, ಮೋದಿ ಸರ್ಕಾರದ ಸಮಸ್ಯೆಗಳು, ಆರ್ಥಿಕತೆ, ರಾಜಕೀಯ ಮತ್ತು ಇತರ ವಿಷಯಗಳ ಕುರಿತು ಪ್ರಬಂಧಗಳ ಸರಣಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ಆಡಳಿತವು ಅರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಾ ಭಾವನೆಗಳನ್ನು ಹೊರ ತರಲು ಇದು ಅತ್ಯಂತ ಸಮರ್ಥವಾಗಿದೆ ಎಂದು ಡಾ, ಪರಕಾಲ ಅವರು, ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಿಂದ ಪಿಎಚ್‌.ಡಿ ಪಡೆದಿರುವ ಡಾ.ಪ್ರಭಾಕರ್ ಅವರು ಹಣಕಾಸು ಸಚಿವೆ ನಿರ್ಮಲಾ ತಾರಾಮನ್ ಅವರ ಪತಿ.

”2014ರ ಚುನಾವಣೆಯಲ್ಲಿ ಗೆಲ್ಲಲು ಬಳಸಿದ ಅಭಿವೃದ್ಧಿಯ ಹಲಗೆಯ ಮೇಲೆ ಗೆದ್ದ ಬಿಜೆಪಿಯು ಹಿಂದುತ್ವವನ್ನು ಕುತಂತ್ರದಿಂದ ಹಳ್ಳ ಸಾಗಣೆ ಮಾಡಿದೆ ಎಂದು ಅವರು ಹೇಳಿದ್ದಾರೆ. 2024 ರಲ್ಲಿ ಮತ್ತೊಂದು ಬಾರಿ ಮೋದಿ ಸರ್ಕಾರ ಬಂದರೆ ಅದು ಆರ್ಥಿಕತೆಗೆ ಮಾತ್ರವಲ್ಲದೆ, ಒಟ್ಟಾರೆ ಇಡೀ ರಾಷ್ಟ್ರಕ್ಕೆ ಆಪತ್ತು ತರಲಿದೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದೆ

”ಹಿಂದುತ್ವದಿಂದ ಸೇರಿ ಸರಾಗ ಜನರನ್ನು ಒಟ್ಟುಗೂಡಿಸುವ ಮತ್ತು ಅವರ ಕೇಳು ಪ್ರವೃತ್ತಿಯನ್ನು ಉದ್ದೀಪಿಸುವ ಪ್ರಭಾವಿ ಮೋದಿ ಮತ್ತು ಬಿಜೆಪಿಯ ಸಾಮರ್ಥ್ಯದಿಂದಾಗಿ ಅವರು ಜನಪ್ರಿಯತೆ ಹೊಂದಿದ್ದಾರೆ” ಎಂದು ಡಾ. ಪ್ರಭಾಕರ್ ವಾದಿಸಿದ್ದಾರೆ.

”ಆದರೆ 2011 ರ ಚುನಾವಣೆಯ ಪೂರ್ವದಲ್ಲಿ ನಡೆದ ಹೋರಾಟವು ಹಿಂದೂ ಮತ್ತು ಮುಸ್ಲಿಮರ ನಡುವೆ ಆಗಿರಲಿಲ್ಲ ಎಂದು ಒತ್ತಿ ಹೇಳಿದ ಅವರು, ಆ ಹೋರಾಟವು, ಬಡತನ ಮತ್ತು ನಿರುದ್ಯೋಗದ ವಿರುದ್ಧ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ನಡೆಸಿದ ಹೋರಾಟವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

”2014ರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು, ಉತ್ತಮ ಆಡಳಿತ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮತ್ತು ‘ಅಭಿವೃದ್ಧಿ’ ಭರವಸೆ ನೀಡಿ ಮತ ಕೇಳಿದ್ದರು” ಎಂದು ಡಾ. ಪರಕಾಲ ಪ್ರಭಾಕರ್ ನೆನಪಿಸಿಕೊಂಡರು.

ಹಿಂದೂ ರಾಷ್ಟ್ರ ಮತ್ತು ಹಿಂದುತ್ವದ ನಿಜವಾದ ಉದ್ದೇಶವನ್ನು ಮುಂದಿಟ್ಟು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೇಶದ ಜನರ ವಿಶ್ವಾಸವನ್ನು ಗೆದ್ದಿರಲಿಲ್ಲ ಎಂದ ಅವರು, ಅಭಿವೃದ್ಧಿಯ ಹಸರಿನಲ್ಲಿ ಹಿಂದುತ್ವವನ್ನು ಕಳ್ಳಸಾಗಣೆ ಮಾಡಲಾಗಿದೆ. ಟ್ರೋಜನ್ ಕುದುರೆಯಂತೆ ಅಭಿವೃದ್ಧಿ ಯನ್ನು ಬಳಸಲಾಗಿದೆ” ಎಂದು ಅವರು ಹೇಳಿದ್ದಾರೆ.

”ನಾಯಕತ್ವದ ಗುರಿಯು ಬಿರುಕುಗಳನ್ನು ತೆಗೆದುಹಾಕುವುದು ಮತ್ತು ಸಾಮರಸ್ಯವನ್ನು ಉತ್ತೇರಿಸುವುದು, ಅದನ್ನು ಬಿಟ್ಟು, ಕೋಮು ಭಾವನೆಗಳಿಗೆ ದಕ್ಕೆ ತರುವುದು ನಾಯಕರ ಕೆಲಸವಲ್ಲ” ಎಂದು ಡಾ. ಪ್ರಭಾಕರ್ ಹೇಳಿದರು.

”ಬಿಜೆಪಿ ಮತ್ತು ಮೋದಿ ಅವರು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸಿದರೆ ಅದನ್ನು ಅವರು 2014 ರ ಚುನಾವಣೆಯಲ್ಲಿ ಸ್ಪರ್ಧಿಸುವಾಗಲೇ ಹೇಳಬೇಕಿತ್ತು” ಎಂದು ಪ್ರಭಾಕರ್ ಹೇಳಿದ್ದಾರೆ

ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದವು ಸ್ವೀಕಾರಾರ್ಹತೆಯನ್ನು ಕಂಡಿರಲಿಲ್ಲ ಎಂದು ಗಮನಸೆಳೆದ ಅವರು, ವಿಭಜನೆಯ ನಂತರ ಹಿಂದುತ್ನ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಭಾರತದಲ್ಲಿ ಹೆಚ್ಚಿನ ಸಾಧ್ಯತೆ ಇತ್ತು. ದೇಶ ವಿಭಜನೆ ವೇಳೆ ಎರಡೂ ಸಮುದಾಯಗಳ ಲಕ್ಷಾಂತರ ಜನರು ಸಾಮೂಹಿಕವಾಗಿ ವಲಸೆ ಹೋಗುತ್ತಿದ್ದರು. ಎರೆಡೂ ದೇಶಕ್ಕೂ ಸಾವಿರಾರು ಮೃತದೇಹಗಳು ಬರುತ್ತಿದ್ದವು. ಆ ಸಮಯದಲ್ಲಿ ಅಭದ್ರತೆ ಮತ್ತು ಭಯ ಹೆಚ್ಚಿತ್ತು, ಆಗ ಹಿಂದುತ್ವ ರಾಜಕಾರಣ ಬೆಳೆಯಲು ಅನುಕೂಲ ಸನ್ನಿವೇಶ ಇದ್ದರೂ ಆಗ ಬಹುಸಂಖ್ಯಾತವಾದಕ್ಕೆ ಭಾರತದಲ್ಲಿ ಮಾನ್ಯತೆ ಸಿಗಲಿಲ್ಲ” ಎನ್ನುವುದನ್ನು ಅವರು ಗಮನ ಸೆಳೆದರು.

”ಏಳು ದಶಕಗಳ ನಂತರ ಹಿಂದು ರಾಜಕಾರಣಕ್ಕೆ ಸ್ವೀಕಾರ ಸಿಗುತ್ತಿದೆ, ಬಹುಶಃ ವಿಭಜನೆಯ ಬಗ್ಗೆ ಯಾವುದೇ ಕಹಿ ನೆನಪಿಲ್ಲದ ಮತ್ತು ಅದರಿಂದ ಬಳಲದಿರುವ ಭಾರತೀಯರ ತಲೆಮಾರಿನಲ್ಲಿ ಅದಕ್ಕೆ ಮಾನ್ಯತೆ ಸಿಗುತ್ತಿದೆ” ಎಂದು ಪ್ರಭಾಸ‌ ಗಮನಿಸಿದರು.

”ಅರ್ಥಶಾಸ್ತ್ರದಲ್ಲಿ ಕೆಲವು ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ” ಎಂದು ಪ್ರಭಾಕರ್ ಹೇಳಿದ್ದಾರೆ. ”ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದ ಅವರು, ಈ ನಡೆಯು ಪ್ರಮಾದಗಳನ್ನು ಹೆಚ್ಚಿಸಿತು ಮತ್ತು ಬಿಕ್ಕಟ್ಟನ್ನು ಉಲ್ಬಣಗೊಳಿಸಿತು” ಎಂದು ಡಾ. ಪ್ರಭಾಕರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...