Homeಕರ್ನಾಟಕ2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ...

2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಹೇಳಿಕೆ

- Advertisement -
- Advertisement -

ನರೇಂದ್ರ ಮೋದಿ ಅವರು ಆರ್ಥಿಕತೆಯನ್ನು ದಿಗ್ಭ್ರಮೆಗೊಳಿಸುವಷ್ಟು ಅಸಮರ್ಥರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೂ ಆಗಿರುವ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಎಂದು ಹೇಳಿದ್ದಾರೆ.

ಪ್ರಭಾಕರ್ ಅವರ ಹೊಸ ಪುಸ್ತಕ ‘ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ: ಎಸ್ಸೇಸ್ ಆನ್ ಎ ರಿಪಬ್ಲಿಕ್ ಇನ್ ಕ್ರೈಸಿಸ್’ಅನ್ನು (ಸ್ಪೀಕಿಂಗ್ ಟೈಗರ್ ಪ್ರಕಟಿಸಿದ) ಬೆಂಗಳೂರಿನಲ್ಲಿ ಭಾನುವಾರ ಔಪಚಾರಿಕವಾಗಿ ಬಿಡುಗಡೆ ಮಾಡಲಾಗಿದ್ದು, ಮೋದಿ ಸರ್ಕಾರದ ಸಮಸ್ಯೆಗಳು, ಆರ್ಥಿಕತೆ, ರಾಜಕೀಯ ಮತ್ತು ಇತರ ವಿಷಯಗಳ ಕುರಿತು ಪ್ರಬಂಧಗಳ ಸರಣಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ಆಡಳಿತವು ಅರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಾ ಭಾವನೆಗಳನ್ನು ಹೊರ ತರಲು ಇದು ಅತ್ಯಂತ ಸಮರ್ಥವಾಗಿದೆ ಎಂದು ಡಾ, ಪರಕಾಲ ಅವರು, ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಿಂದ ಪಿಎಚ್‌.ಡಿ ಪಡೆದಿರುವ ಡಾ.ಪ್ರಭಾಕರ್ ಅವರು ಹಣಕಾಸು ಸಚಿವೆ ನಿರ್ಮಲಾ ತಾರಾಮನ್ ಅವರ ಪತಿ.

”2014ರ ಚುನಾವಣೆಯಲ್ಲಿ ಗೆಲ್ಲಲು ಬಳಸಿದ ಅಭಿವೃದ್ಧಿಯ ಹಲಗೆಯ ಮೇಲೆ ಗೆದ್ದ ಬಿಜೆಪಿಯು ಹಿಂದುತ್ವವನ್ನು ಕುತಂತ್ರದಿಂದ ಹಳ್ಳ ಸಾಗಣೆ ಮಾಡಿದೆ ಎಂದು ಅವರು ಹೇಳಿದ್ದಾರೆ. 2024 ರಲ್ಲಿ ಮತ್ತೊಂದು ಬಾರಿ ಮೋದಿ ಸರ್ಕಾರ ಬಂದರೆ ಅದು ಆರ್ಥಿಕತೆಗೆ ಮಾತ್ರವಲ್ಲದೆ, ಒಟ್ಟಾರೆ ಇಡೀ ರಾಷ್ಟ್ರಕ್ಕೆ ಆಪತ್ತು ತರಲಿದೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದೆ

”ಹಿಂದುತ್ವದಿಂದ ಸೇರಿ ಸರಾಗ ಜನರನ್ನು ಒಟ್ಟುಗೂಡಿಸುವ ಮತ್ತು ಅವರ ಕೇಳು ಪ್ರವೃತ್ತಿಯನ್ನು ಉದ್ದೀಪಿಸುವ ಪ್ರಭಾವಿ ಮೋದಿ ಮತ್ತು ಬಿಜೆಪಿಯ ಸಾಮರ್ಥ್ಯದಿಂದಾಗಿ ಅವರು ಜನಪ್ರಿಯತೆ ಹೊಂದಿದ್ದಾರೆ” ಎಂದು ಡಾ. ಪ್ರಭಾಕರ್ ವಾದಿಸಿದ್ದಾರೆ.

”ಆದರೆ 2011 ರ ಚುನಾವಣೆಯ ಪೂರ್ವದಲ್ಲಿ ನಡೆದ ಹೋರಾಟವು ಹಿಂದೂ ಮತ್ತು ಮುಸ್ಲಿಮರ ನಡುವೆ ಆಗಿರಲಿಲ್ಲ ಎಂದು ಒತ್ತಿ ಹೇಳಿದ ಅವರು, ಆ ಹೋರಾಟವು, ಬಡತನ ಮತ್ತು ನಿರುದ್ಯೋಗದ ವಿರುದ್ಧ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ನಡೆಸಿದ ಹೋರಾಟವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

”2014ರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು, ಉತ್ತಮ ಆಡಳಿತ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮತ್ತು ‘ಅಭಿವೃದ್ಧಿ’ ಭರವಸೆ ನೀಡಿ ಮತ ಕೇಳಿದ್ದರು” ಎಂದು ಡಾ. ಪರಕಾಲ ಪ್ರಭಾಕರ್ ನೆನಪಿಸಿಕೊಂಡರು.

ಹಿಂದೂ ರಾಷ್ಟ್ರ ಮತ್ತು ಹಿಂದುತ್ವದ ನಿಜವಾದ ಉದ್ದೇಶವನ್ನು ಮುಂದಿಟ್ಟು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೇಶದ ಜನರ ವಿಶ್ವಾಸವನ್ನು ಗೆದ್ದಿರಲಿಲ್ಲ ಎಂದ ಅವರು, ಅಭಿವೃದ್ಧಿಯ ಹಸರಿನಲ್ಲಿ ಹಿಂದುತ್ವವನ್ನು ಕಳ್ಳಸಾಗಣೆ ಮಾಡಲಾಗಿದೆ. ಟ್ರೋಜನ್ ಕುದುರೆಯಂತೆ ಅಭಿವೃದ್ಧಿ ಯನ್ನು ಬಳಸಲಾಗಿದೆ” ಎಂದು ಅವರು ಹೇಳಿದ್ದಾರೆ.

”ನಾಯಕತ್ವದ ಗುರಿಯು ಬಿರುಕುಗಳನ್ನು ತೆಗೆದುಹಾಕುವುದು ಮತ್ತು ಸಾಮರಸ್ಯವನ್ನು ಉತ್ತೇರಿಸುವುದು, ಅದನ್ನು ಬಿಟ್ಟು, ಕೋಮು ಭಾವನೆಗಳಿಗೆ ದಕ್ಕೆ ತರುವುದು ನಾಯಕರ ಕೆಲಸವಲ್ಲ” ಎಂದು ಡಾ. ಪ್ರಭಾಕರ್ ಹೇಳಿದರು.

”ಬಿಜೆಪಿ ಮತ್ತು ಮೋದಿ ಅವರು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸಿದರೆ ಅದನ್ನು ಅವರು 2014 ರ ಚುನಾವಣೆಯಲ್ಲಿ ಸ್ಪರ್ಧಿಸುವಾಗಲೇ ಹೇಳಬೇಕಿತ್ತು” ಎಂದು ಪ್ರಭಾಕರ್ ಹೇಳಿದ್ದಾರೆ

ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದವು ಸ್ವೀಕಾರಾರ್ಹತೆಯನ್ನು ಕಂಡಿರಲಿಲ್ಲ ಎಂದು ಗಮನಸೆಳೆದ ಅವರು, ವಿಭಜನೆಯ ನಂತರ ಹಿಂದುತ್ನ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಭಾರತದಲ್ಲಿ ಹೆಚ್ಚಿನ ಸಾಧ್ಯತೆ ಇತ್ತು. ದೇಶ ವಿಭಜನೆ ವೇಳೆ ಎರಡೂ ಸಮುದಾಯಗಳ ಲಕ್ಷಾಂತರ ಜನರು ಸಾಮೂಹಿಕವಾಗಿ ವಲಸೆ ಹೋಗುತ್ತಿದ್ದರು. ಎರೆಡೂ ದೇಶಕ್ಕೂ ಸಾವಿರಾರು ಮೃತದೇಹಗಳು ಬರುತ್ತಿದ್ದವು. ಆ ಸಮಯದಲ್ಲಿ ಅಭದ್ರತೆ ಮತ್ತು ಭಯ ಹೆಚ್ಚಿತ್ತು, ಆಗ ಹಿಂದುತ್ವ ರಾಜಕಾರಣ ಬೆಳೆಯಲು ಅನುಕೂಲ ಸನ್ನಿವೇಶ ಇದ್ದರೂ ಆಗ ಬಹುಸಂಖ್ಯಾತವಾದಕ್ಕೆ ಭಾರತದಲ್ಲಿ ಮಾನ್ಯತೆ ಸಿಗಲಿಲ್ಲ” ಎನ್ನುವುದನ್ನು ಅವರು ಗಮನ ಸೆಳೆದರು.

”ಏಳು ದಶಕಗಳ ನಂತರ ಹಿಂದು ರಾಜಕಾರಣಕ್ಕೆ ಸ್ವೀಕಾರ ಸಿಗುತ್ತಿದೆ, ಬಹುಶಃ ವಿಭಜನೆಯ ಬಗ್ಗೆ ಯಾವುದೇ ಕಹಿ ನೆನಪಿಲ್ಲದ ಮತ್ತು ಅದರಿಂದ ಬಳಲದಿರುವ ಭಾರತೀಯರ ತಲೆಮಾರಿನಲ್ಲಿ ಅದಕ್ಕೆ ಮಾನ್ಯತೆ ಸಿಗುತ್ತಿದೆ” ಎಂದು ಪ್ರಭಾಸ‌ ಗಮನಿಸಿದರು.

”ಅರ್ಥಶಾಸ್ತ್ರದಲ್ಲಿ ಕೆಲವು ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ” ಎಂದು ಪ್ರಭಾಕರ್ ಹೇಳಿದ್ದಾರೆ. ”ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದ ಅವರು, ಈ ನಡೆಯು ಪ್ರಮಾದಗಳನ್ನು ಹೆಚ್ಚಿಸಿತು ಮತ್ತು ಬಿಕ್ಕಟ್ಟನ್ನು ಉಲ್ಬಣಗೊಳಿಸಿತು” ಎಂದು ಡಾ. ಪ್ರಭಾಕರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...