Homeಕರ್ನಾಟಕ2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ...

2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಹೇಳಿಕೆ

- Advertisement -
- Advertisement -

ನರೇಂದ್ರ ಮೋದಿ ಅವರು ಆರ್ಥಿಕತೆಯನ್ನು ದಿಗ್ಭ್ರಮೆಗೊಳಿಸುವಷ್ಟು ಅಸಮರ್ಥರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೂ ಆಗಿರುವ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಎಂದು ಹೇಳಿದ್ದಾರೆ.

ಪ್ರಭಾಕರ್ ಅವರ ಹೊಸ ಪುಸ್ತಕ ‘ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ: ಎಸ್ಸೇಸ್ ಆನ್ ಎ ರಿಪಬ್ಲಿಕ್ ಇನ್ ಕ್ರೈಸಿಸ್’ಅನ್ನು (ಸ್ಪೀಕಿಂಗ್ ಟೈಗರ್ ಪ್ರಕಟಿಸಿದ) ಬೆಂಗಳೂರಿನಲ್ಲಿ ಭಾನುವಾರ ಔಪಚಾರಿಕವಾಗಿ ಬಿಡುಗಡೆ ಮಾಡಲಾಗಿದ್ದು, ಮೋದಿ ಸರ್ಕಾರದ ಸಮಸ್ಯೆಗಳು, ಆರ್ಥಿಕತೆ, ರಾಜಕೀಯ ಮತ್ತು ಇತರ ವಿಷಯಗಳ ಕುರಿತು ಪ್ರಬಂಧಗಳ ಸರಣಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ಆಡಳಿತವು ಅರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಾ ಭಾವನೆಗಳನ್ನು ಹೊರ ತರಲು ಇದು ಅತ್ಯಂತ ಸಮರ್ಥವಾಗಿದೆ ಎಂದು ಡಾ, ಪರಕಾಲ ಅವರು, ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಿಂದ ಪಿಎಚ್‌.ಡಿ ಪಡೆದಿರುವ ಡಾ.ಪ್ರಭಾಕರ್ ಅವರು ಹಣಕಾಸು ಸಚಿವೆ ನಿರ್ಮಲಾ ತಾರಾಮನ್ ಅವರ ಪತಿ.

”2014ರ ಚುನಾವಣೆಯಲ್ಲಿ ಗೆಲ್ಲಲು ಬಳಸಿದ ಅಭಿವೃದ್ಧಿಯ ಹಲಗೆಯ ಮೇಲೆ ಗೆದ್ದ ಬಿಜೆಪಿಯು ಹಿಂದುತ್ವವನ್ನು ಕುತಂತ್ರದಿಂದ ಹಳ್ಳ ಸಾಗಣೆ ಮಾಡಿದೆ ಎಂದು ಅವರು ಹೇಳಿದ್ದಾರೆ. 2024 ರಲ್ಲಿ ಮತ್ತೊಂದು ಬಾರಿ ಮೋದಿ ಸರ್ಕಾರ ಬಂದರೆ ಅದು ಆರ್ಥಿಕತೆಗೆ ಮಾತ್ರವಲ್ಲದೆ, ಒಟ್ಟಾರೆ ಇಡೀ ರಾಷ್ಟ್ರಕ್ಕೆ ಆಪತ್ತು ತರಲಿದೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದೆ

”ಹಿಂದುತ್ವದಿಂದ ಸೇರಿ ಸರಾಗ ಜನರನ್ನು ಒಟ್ಟುಗೂಡಿಸುವ ಮತ್ತು ಅವರ ಕೇಳು ಪ್ರವೃತ್ತಿಯನ್ನು ಉದ್ದೀಪಿಸುವ ಪ್ರಭಾವಿ ಮೋದಿ ಮತ್ತು ಬಿಜೆಪಿಯ ಸಾಮರ್ಥ್ಯದಿಂದಾಗಿ ಅವರು ಜನಪ್ರಿಯತೆ ಹೊಂದಿದ್ದಾರೆ” ಎಂದು ಡಾ. ಪ್ರಭಾಕರ್ ವಾದಿಸಿದ್ದಾರೆ.

”ಆದರೆ 2011 ರ ಚುನಾವಣೆಯ ಪೂರ್ವದಲ್ಲಿ ನಡೆದ ಹೋರಾಟವು ಹಿಂದೂ ಮತ್ತು ಮುಸ್ಲಿಮರ ನಡುವೆ ಆಗಿರಲಿಲ್ಲ ಎಂದು ಒತ್ತಿ ಹೇಳಿದ ಅವರು, ಆ ಹೋರಾಟವು, ಬಡತನ ಮತ್ತು ನಿರುದ್ಯೋಗದ ವಿರುದ್ಧ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ನಡೆಸಿದ ಹೋರಾಟವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

”2014ರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು, ಉತ್ತಮ ಆಡಳಿತ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮತ್ತು ‘ಅಭಿವೃದ್ಧಿ’ ಭರವಸೆ ನೀಡಿ ಮತ ಕೇಳಿದ್ದರು” ಎಂದು ಡಾ. ಪರಕಾಲ ಪ್ರಭಾಕರ್ ನೆನಪಿಸಿಕೊಂಡರು.

ಹಿಂದೂ ರಾಷ್ಟ್ರ ಮತ್ತು ಹಿಂದುತ್ವದ ನಿಜವಾದ ಉದ್ದೇಶವನ್ನು ಮುಂದಿಟ್ಟು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೇಶದ ಜನರ ವಿಶ್ವಾಸವನ್ನು ಗೆದ್ದಿರಲಿಲ್ಲ ಎಂದ ಅವರು, ಅಭಿವೃದ್ಧಿಯ ಹಸರಿನಲ್ಲಿ ಹಿಂದುತ್ವವನ್ನು ಕಳ್ಳಸಾಗಣೆ ಮಾಡಲಾಗಿದೆ. ಟ್ರೋಜನ್ ಕುದುರೆಯಂತೆ ಅಭಿವೃದ್ಧಿ ಯನ್ನು ಬಳಸಲಾಗಿದೆ” ಎಂದು ಅವರು ಹೇಳಿದ್ದಾರೆ.

”ನಾಯಕತ್ವದ ಗುರಿಯು ಬಿರುಕುಗಳನ್ನು ತೆಗೆದುಹಾಕುವುದು ಮತ್ತು ಸಾಮರಸ್ಯವನ್ನು ಉತ್ತೇರಿಸುವುದು, ಅದನ್ನು ಬಿಟ್ಟು, ಕೋಮು ಭಾವನೆಗಳಿಗೆ ದಕ್ಕೆ ತರುವುದು ನಾಯಕರ ಕೆಲಸವಲ್ಲ” ಎಂದು ಡಾ. ಪ್ರಭಾಕರ್ ಹೇಳಿದರು.

”ಬಿಜೆಪಿ ಮತ್ತು ಮೋದಿ ಅವರು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸಿದರೆ ಅದನ್ನು ಅವರು 2014 ರ ಚುನಾವಣೆಯಲ್ಲಿ ಸ್ಪರ್ಧಿಸುವಾಗಲೇ ಹೇಳಬೇಕಿತ್ತು” ಎಂದು ಪ್ರಭಾಕರ್ ಹೇಳಿದ್ದಾರೆ

ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದವು ಸ್ವೀಕಾರಾರ್ಹತೆಯನ್ನು ಕಂಡಿರಲಿಲ್ಲ ಎಂದು ಗಮನಸೆಳೆದ ಅವರು, ವಿಭಜನೆಯ ನಂತರ ಹಿಂದುತ್ನ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಭಾರತದಲ್ಲಿ ಹೆಚ್ಚಿನ ಸಾಧ್ಯತೆ ಇತ್ತು. ದೇಶ ವಿಭಜನೆ ವೇಳೆ ಎರಡೂ ಸಮುದಾಯಗಳ ಲಕ್ಷಾಂತರ ಜನರು ಸಾಮೂಹಿಕವಾಗಿ ವಲಸೆ ಹೋಗುತ್ತಿದ್ದರು. ಎರೆಡೂ ದೇಶಕ್ಕೂ ಸಾವಿರಾರು ಮೃತದೇಹಗಳು ಬರುತ್ತಿದ್ದವು. ಆ ಸಮಯದಲ್ಲಿ ಅಭದ್ರತೆ ಮತ್ತು ಭಯ ಹೆಚ್ಚಿತ್ತು, ಆಗ ಹಿಂದುತ್ವ ರಾಜಕಾರಣ ಬೆಳೆಯಲು ಅನುಕೂಲ ಸನ್ನಿವೇಶ ಇದ್ದರೂ ಆಗ ಬಹುಸಂಖ್ಯಾತವಾದಕ್ಕೆ ಭಾರತದಲ್ಲಿ ಮಾನ್ಯತೆ ಸಿಗಲಿಲ್ಲ” ಎನ್ನುವುದನ್ನು ಅವರು ಗಮನ ಸೆಳೆದರು.

”ಏಳು ದಶಕಗಳ ನಂತರ ಹಿಂದು ರಾಜಕಾರಣಕ್ಕೆ ಸ್ವೀಕಾರ ಸಿಗುತ್ತಿದೆ, ಬಹುಶಃ ವಿಭಜನೆಯ ಬಗ್ಗೆ ಯಾವುದೇ ಕಹಿ ನೆನಪಿಲ್ಲದ ಮತ್ತು ಅದರಿಂದ ಬಳಲದಿರುವ ಭಾರತೀಯರ ತಲೆಮಾರಿನಲ್ಲಿ ಅದಕ್ಕೆ ಮಾನ್ಯತೆ ಸಿಗುತ್ತಿದೆ” ಎಂದು ಪ್ರಭಾಸ‌ ಗಮನಿಸಿದರು.

”ಅರ್ಥಶಾಸ್ತ್ರದಲ್ಲಿ ಕೆಲವು ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ” ಎಂದು ಪ್ರಭಾಕರ್ ಹೇಳಿದ್ದಾರೆ. ”ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದ ಅವರು, ಈ ನಡೆಯು ಪ್ರಮಾದಗಳನ್ನು ಹೆಚ್ಚಿಸಿತು ಮತ್ತು ಬಿಕ್ಕಟ್ಟನ್ನು ಉಲ್ಬಣಗೊಳಿಸಿತು” ಎಂದು ಡಾ. ಪ್ರಭಾಕರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...