Homeಕರ್ನಾಟಕ2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ...

2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಹೇಳಿಕೆ

- Advertisement -
- Advertisement -

ನರೇಂದ್ರ ಮೋದಿ ಅವರು ಆರ್ಥಿಕತೆಯನ್ನು ದಿಗ್ಭ್ರಮೆಗೊಳಿಸುವಷ್ಟು ಅಸಮರ್ಥರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೂ ಆಗಿರುವ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಎಂದು ಹೇಳಿದ್ದಾರೆ.

ಪ್ರಭಾಕರ್ ಅವರ ಹೊಸ ಪುಸ್ತಕ ‘ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ: ಎಸ್ಸೇಸ್ ಆನ್ ಎ ರಿಪಬ್ಲಿಕ್ ಇನ್ ಕ್ರೈಸಿಸ್’ಅನ್ನು (ಸ್ಪೀಕಿಂಗ್ ಟೈಗರ್ ಪ್ರಕಟಿಸಿದ) ಬೆಂಗಳೂರಿನಲ್ಲಿ ಭಾನುವಾರ ಔಪಚಾರಿಕವಾಗಿ ಬಿಡುಗಡೆ ಮಾಡಲಾಗಿದ್ದು, ಮೋದಿ ಸರ್ಕಾರದ ಸಮಸ್ಯೆಗಳು, ಆರ್ಥಿಕತೆ, ರಾಜಕೀಯ ಮತ್ತು ಇತರ ವಿಷಯಗಳ ಕುರಿತು ಪ್ರಬಂಧಗಳ ಸರಣಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ಆಡಳಿತವು ಅರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಾ ಭಾವನೆಗಳನ್ನು ಹೊರ ತರಲು ಇದು ಅತ್ಯಂತ ಸಮರ್ಥವಾಗಿದೆ ಎಂದು ಡಾ, ಪರಕಾಲ ಅವರು, ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಿಂದ ಪಿಎಚ್‌.ಡಿ ಪಡೆದಿರುವ ಡಾ.ಪ್ರಭಾಕರ್ ಅವರು ಹಣಕಾಸು ಸಚಿವೆ ನಿರ್ಮಲಾ ತಾರಾಮನ್ ಅವರ ಪತಿ.

”2014ರ ಚುನಾವಣೆಯಲ್ಲಿ ಗೆಲ್ಲಲು ಬಳಸಿದ ಅಭಿವೃದ್ಧಿಯ ಹಲಗೆಯ ಮೇಲೆ ಗೆದ್ದ ಬಿಜೆಪಿಯು ಹಿಂದುತ್ವವನ್ನು ಕುತಂತ್ರದಿಂದ ಹಳ್ಳ ಸಾಗಣೆ ಮಾಡಿದೆ ಎಂದು ಅವರು ಹೇಳಿದ್ದಾರೆ. 2024 ರಲ್ಲಿ ಮತ್ತೊಂದು ಬಾರಿ ಮೋದಿ ಸರ್ಕಾರ ಬಂದರೆ ಅದು ಆರ್ಥಿಕತೆಗೆ ಮಾತ್ರವಲ್ಲದೆ, ಒಟ್ಟಾರೆ ಇಡೀ ರಾಷ್ಟ್ರಕ್ಕೆ ಆಪತ್ತು ತರಲಿದೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದೆ

”ಹಿಂದುತ್ವದಿಂದ ಸೇರಿ ಸರಾಗ ಜನರನ್ನು ಒಟ್ಟುಗೂಡಿಸುವ ಮತ್ತು ಅವರ ಕೇಳು ಪ್ರವೃತ್ತಿಯನ್ನು ಉದ್ದೀಪಿಸುವ ಪ್ರಭಾವಿ ಮೋದಿ ಮತ್ತು ಬಿಜೆಪಿಯ ಸಾಮರ್ಥ್ಯದಿಂದಾಗಿ ಅವರು ಜನಪ್ರಿಯತೆ ಹೊಂದಿದ್ದಾರೆ” ಎಂದು ಡಾ. ಪ್ರಭಾಕರ್ ವಾದಿಸಿದ್ದಾರೆ.

”ಆದರೆ 2011 ರ ಚುನಾವಣೆಯ ಪೂರ್ವದಲ್ಲಿ ನಡೆದ ಹೋರಾಟವು ಹಿಂದೂ ಮತ್ತು ಮುಸ್ಲಿಮರ ನಡುವೆ ಆಗಿರಲಿಲ್ಲ ಎಂದು ಒತ್ತಿ ಹೇಳಿದ ಅವರು, ಆ ಹೋರಾಟವು, ಬಡತನ ಮತ್ತು ನಿರುದ್ಯೋಗದ ವಿರುದ್ಧ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ನಡೆಸಿದ ಹೋರಾಟವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

”2014ರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು, ಉತ್ತಮ ಆಡಳಿತ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮತ್ತು ‘ಅಭಿವೃದ್ಧಿ’ ಭರವಸೆ ನೀಡಿ ಮತ ಕೇಳಿದ್ದರು” ಎಂದು ಡಾ. ಪರಕಾಲ ಪ್ರಭಾಕರ್ ನೆನಪಿಸಿಕೊಂಡರು.

ಹಿಂದೂ ರಾಷ್ಟ್ರ ಮತ್ತು ಹಿಂದುತ್ವದ ನಿಜವಾದ ಉದ್ದೇಶವನ್ನು ಮುಂದಿಟ್ಟು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೇಶದ ಜನರ ವಿಶ್ವಾಸವನ್ನು ಗೆದ್ದಿರಲಿಲ್ಲ ಎಂದ ಅವರು, ಅಭಿವೃದ್ಧಿಯ ಹಸರಿನಲ್ಲಿ ಹಿಂದುತ್ವವನ್ನು ಕಳ್ಳಸಾಗಣೆ ಮಾಡಲಾಗಿದೆ. ಟ್ರೋಜನ್ ಕುದುರೆಯಂತೆ ಅಭಿವೃದ್ಧಿ ಯನ್ನು ಬಳಸಲಾಗಿದೆ” ಎಂದು ಅವರು ಹೇಳಿದ್ದಾರೆ.

”ನಾಯಕತ್ವದ ಗುರಿಯು ಬಿರುಕುಗಳನ್ನು ತೆಗೆದುಹಾಕುವುದು ಮತ್ತು ಸಾಮರಸ್ಯವನ್ನು ಉತ್ತೇರಿಸುವುದು, ಅದನ್ನು ಬಿಟ್ಟು, ಕೋಮು ಭಾವನೆಗಳಿಗೆ ದಕ್ಕೆ ತರುವುದು ನಾಯಕರ ಕೆಲಸವಲ್ಲ” ಎಂದು ಡಾ. ಪ್ರಭಾಕರ್ ಹೇಳಿದರು.

”ಬಿಜೆಪಿ ಮತ್ತು ಮೋದಿ ಅವರು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸಿದರೆ ಅದನ್ನು ಅವರು 2014 ರ ಚುನಾವಣೆಯಲ್ಲಿ ಸ್ಪರ್ಧಿಸುವಾಗಲೇ ಹೇಳಬೇಕಿತ್ತು” ಎಂದು ಪ್ರಭಾಕರ್ ಹೇಳಿದ್ದಾರೆ

ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದವು ಸ್ವೀಕಾರಾರ್ಹತೆಯನ್ನು ಕಂಡಿರಲಿಲ್ಲ ಎಂದು ಗಮನಸೆಳೆದ ಅವರು, ವಿಭಜನೆಯ ನಂತರ ಹಿಂದುತ್ನ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಭಾರತದಲ್ಲಿ ಹೆಚ್ಚಿನ ಸಾಧ್ಯತೆ ಇತ್ತು. ದೇಶ ವಿಭಜನೆ ವೇಳೆ ಎರಡೂ ಸಮುದಾಯಗಳ ಲಕ್ಷಾಂತರ ಜನರು ಸಾಮೂಹಿಕವಾಗಿ ವಲಸೆ ಹೋಗುತ್ತಿದ್ದರು. ಎರೆಡೂ ದೇಶಕ್ಕೂ ಸಾವಿರಾರು ಮೃತದೇಹಗಳು ಬರುತ್ತಿದ್ದವು. ಆ ಸಮಯದಲ್ಲಿ ಅಭದ್ರತೆ ಮತ್ತು ಭಯ ಹೆಚ್ಚಿತ್ತು, ಆಗ ಹಿಂದುತ್ವ ರಾಜಕಾರಣ ಬೆಳೆಯಲು ಅನುಕೂಲ ಸನ್ನಿವೇಶ ಇದ್ದರೂ ಆಗ ಬಹುಸಂಖ್ಯಾತವಾದಕ್ಕೆ ಭಾರತದಲ್ಲಿ ಮಾನ್ಯತೆ ಸಿಗಲಿಲ್ಲ” ಎನ್ನುವುದನ್ನು ಅವರು ಗಮನ ಸೆಳೆದರು.

”ಏಳು ದಶಕಗಳ ನಂತರ ಹಿಂದು ರಾಜಕಾರಣಕ್ಕೆ ಸ್ವೀಕಾರ ಸಿಗುತ್ತಿದೆ, ಬಹುಶಃ ವಿಭಜನೆಯ ಬಗ್ಗೆ ಯಾವುದೇ ಕಹಿ ನೆನಪಿಲ್ಲದ ಮತ್ತು ಅದರಿಂದ ಬಳಲದಿರುವ ಭಾರತೀಯರ ತಲೆಮಾರಿನಲ್ಲಿ ಅದಕ್ಕೆ ಮಾನ್ಯತೆ ಸಿಗುತ್ತಿದೆ” ಎಂದು ಪ್ರಭಾಸ‌ ಗಮನಿಸಿದರು.

”ಅರ್ಥಶಾಸ್ತ್ರದಲ್ಲಿ ಕೆಲವು ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ” ಎಂದು ಪ್ರಭಾಕರ್ ಹೇಳಿದ್ದಾರೆ. ”ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದ ಅವರು, ಈ ನಡೆಯು ಪ್ರಮಾದಗಳನ್ನು ಹೆಚ್ಚಿಸಿತು ಮತ್ತು ಬಿಕ್ಕಟ್ಟನ್ನು ಉಲ್ಬಣಗೊಳಿಸಿತು” ಎಂದು ಡಾ. ಪ್ರಭಾಕರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...