Homeಮುಖಪುಟ2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ...

2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಹೇಳಿಕೆ

- Advertisement -
- Advertisement -

ನರೇಂದ್ರ ಮೋದಿ ಅವರು ಆರ್ಥಿಕತೆಯನ್ನು ದಿಗ್ಭ್ರಮೆಗೊಳಿಸುವಷ್ಟು ಅಸಮರ್ಥರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೂ ಆಗಿರುವ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಎಂದು ಹೇಳಿದ್ದಾರೆ.

ಪ್ರಭಾಕರ್ ಅವರ ಹೊಸ ಪುಸ್ತಕ ‘ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ: ಎಸ್ಸೇಸ್ ಆನ್ ಎ ರಿಪಬ್ಲಿಕ್ ಇನ್ ಕ್ರೈಸಿಸ್’ಅನ್ನು (ಸ್ಪೀಕಿಂಗ್ ಟೈಗರ್ ಪ್ರಕಟಿಸಿದ) ಬೆಂಗಳೂರಿನಲ್ಲಿ ಭಾನುವಾರ ಔಪಚಾರಿಕವಾಗಿ ಬಿಡುಗಡೆ ಮಾಡಲಾಗಿದ್ದು, ಮೋದಿ ಸರ್ಕಾರದ ಸಮಸ್ಯೆಗಳು, ಆರ್ಥಿಕತೆ, ರಾಜಕೀಯ ಮತ್ತು ಇತರ ವಿಷಯಗಳ ಕುರಿತು ಪ್ರಬಂಧಗಳ ಸರಣಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ಆಡಳಿತವು ಅರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಾ ಭಾವನೆಗಳನ್ನು ಹೊರ ತರಲು ಇದು ಅತ್ಯಂತ ಸಮರ್ಥವಾಗಿದೆ ಎಂದು ಡಾ, ಪರಕಾಲ ಅವರು, ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಿಂದ ಪಿಎಚ್‌.ಡಿ ಪಡೆದಿರುವ ಡಾ.ಪ್ರಭಾಕರ್ ಅವರು ಹಣಕಾಸು ಸಚಿವೆ ನಿರ್ಮಲಾ ತಾರಾಮನ್ ಅವರ ಪತಿ.

”2014ರ ಚುನಾವಣೆಯಲ್ಲಿ ಗೆಲ್ಲಲು ಬಳಸಿದ ಅಭಿವೃದ್ಧಿಯ ಹಲಗೆಯ ಮೇಲೆ ಗೆದ್ದ ಬಿಜೆಪಿಯು ಹಿಂದುತ್ವವನ್ನು ಕುತಂತ್ರದಿಂದ ಹಳ್ಳ ಸಾಗಣೆ ಮಾಡಿದೆ ಎಂದು ಅವರು ಹೇಳಿದ್ದಾರೆ. 2024 ರಲ್ಲಿ ಮತ್ತೊಂದು ಬಾರಿ ಮೋದಿ ಸರ್ಕಾರ ಬಂದರೆ ಅದು ಆರ್ಥಿಕತೆಗೆ ಮಾತ್ರವಲ್ಲದೆ, ಒಟ್ಟಾರೆ ಇಡೀ ರಾಷ್ಟ್ರಕ್ಕೆ ಆಪತ್ತು ತರಲಿದೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದೆ

”ಹಿಂದುತ್ವದಿಂದ ಸೇರಿ ಸರಾಗ ಜನರನ್ನು ಒಟ್ಟುಗೂಡಿಸುವ ಮತ್ತು ಅವರ ಕೇಳು ಪ್ರವೃತ್ತಿಯನ್ನು ಉದ್ದೀಪಿಸುವ ಪ್ರಭಾವಿ ಮೋದಿ ಮತ್ತು ಬಿಜೆಪಿಯ ಸಾಮರ್ಥ್ಯದಿಂದಾಗಿ ಅವರು ಜನಪ್ರಿಯತೆ ಹೊಂದಿದ್ದಾರೆ” ಎಂದು ಡಾ. ಪ್ರಭಾಕರ್ ವಾದಿಸಿದ್ದಾರೆ.

”ಆದರೆ 2011 ರ ಚುನಾವಣೆಯ ಪೂರ್ವದಲ್ಲಿ ನಡೆದ ಹೋರಾಟವು ಹಿಂದೂ ಮತ್ತು ಮುಸ್ಲಿಮರ ನಡುವೆ ಆಗಿರಲಿಲ್ಲ ಎಂದು ಒತ್ತಿ ಹೇಳಿದ ಅವರು, ಆ ಹೋರಾಟವು, ಬಡತನ ಮತ್ತು ನಿರುದ್ಯೋಗದ ವಿರುದ್ಧ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ನಡೆಸಿದ ಹೋರಾಟವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

”2014ರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು, ಉತ್ತಮ ಆಡಳಿತ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮತ್ತು ‘ಅಭಿವೃದ್ಧಿ’ ಭರವಸೆ ನೀಡಿ ಮತ ಕೇಳಿದ್ದರು” ಎಂದು ಡಾ. ಪರಕಾಲ ಪ್ರಭಾಕರ್ ನೆನಪಿಸಿಕೊಂಡರು.

ಹಿಂದೂ ರಾಷ್ಟ್ರ ಮತ್ತು ಹಿಂದುತ್ವದ ನಿಜವಾದ ಉದ್ದೇಶವನ್ನು ಮುಂದಿಟ್ಟು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೇಶದ ಜನರ ವಿಶ್ವಾಸವನ್ನು ಗೆದ್ದಿರಲಿಲ್ಲ ಎಂದ ಅವರು, ಅಭಿವೃದ್ಧಿಯ ಹಸರಿನಲ್ಲಿ ಹಿಂದುತ್ವವನ್ನು ಕಳ್ಳಸಾಗಣೆ ಮಾಡಲಾಗಿದೆ. ಟ್ರೋಜನ್ ಕುದುರೆಯಂತೆ ಅಭಿವೃದ್ಧಿ ಯನ್ನು ಬಳಸಲಾಗಿದೆ” ಎಂದು ಅವರು ಹೇಳಿದ್ದಾರೆ.

”ನಾಯಕತ್ವದ ಗುರಿಯು ಬಿರುಕುಗಳನ್ನು ತೆಗೆದುಹಾಕುವುದು ಮತ್ತು ಸಾಮರಸ್ಯವನ್ನು ಉತ್ತೇರಿಸುವುದು, ಅದನ್ನು ಬಿಟ್ಟು, ಕೋಮು ಭಾವನೆಗಳಿಗೆ ದಕ್ಕೆ ತರುವುದು ನಾಯಕರ ಕೆಲಸವಲ್ಲ” ಎಂದು ಡಾ. ಪ್ರಭಾಕರ್ ಹೇಳಿದರು.

”ಬಿಜೆಪಿ ಮತ್ತು ಮೋದಿ ಅವರು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸಿದರೆ ಅದನ್ನು ಅವರು 2014 ರ ಚುನಾವಣೆಯಲ್ಲಿ ಸ್ಪರ್ಧಿಸುವಾಗಲೇ ಹೇಳಬೇಕಿತ್ತು” ಎಂದು ಪ್ರಭಾಕರ್ ಹೇಳಿದ್ದಾರೆ

ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದವು ಸ್ವೀಕಾರಾರ್ಹತೆಯನ್ನು ಕಂಡಿರಲಿಲ್ಲ ಎಂದು ಗಮನಸೆಳೆದ ಅವರು, ವಿಭಜನೆಯ ನಂತರ ಹಿಂದುತ್ನ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಭಾರತದಲ್ಲಿ ಹೆಚ್ಚಿನ ಸಾಧ್ಯತೆ ಇತ್ತು. ದೇಶ ವಿಭಜನೆ ವೇಳೆ ಎರಡೂ ಸಮುದಾಯಗಳ ಲಕ್ಷಾಂತರ ಜನರು ಸಾಮೂಹಿಕವಾಗಿ ವಲಸೆ ಹೋಗುತ್ತಿದ್ದರು. ಎರೆಡೂ ದೇಶಕ್ಕೂ ಸಾವಿರಾರು ಮೃತದೇಹಗಳು ಬರುತ್ತಿದ್ದವು. ಆ ಸಮಯದಲ್ಲಿ ಅಭದ್ರತೆ ಮತ್ತು ಭಯ ಹೆಚ್ಚಿತ್ತು, ಆಗ ಹಿಂದುತ್ವ ರಾಜಕಾರಣ ಬೆಳೆಯಲು ಅನುಕೂಲ ಸನ್ನಿವೇಶ ಇದ್ದರೂ ಆಗ ಬಹುಸಂಖ್ಯಾತವಾದಕ್ಕೆ ಭಾರತದಲ್ಲಿ ಮಾನ್ಯತೆ ಸಿಗಲಿಲ್ಲ” ಎನ್ನುವುದನ್ನು ಅವರು ಗಮನ ಸೆಳೆದರು.

”ಏಳು ದಶಕಗಳ ನಂತರ ಹಿಂದು ರಾಜಕಾರಣಕ್ಕೆ ಸ್ವೀಕಾರ ಸಿಗುತ್ತಿದೆ, ಬಹುಶಃ ವಿಭಜನೆಯ ಬಗ್ಗೆ ಯಾವುದೇ ಕಹಿ ನೆನಪಿಲ್ಲದ ಮತ್ತು ಅದರಿಂದ ಬಳಲದಿರುವ ಭಾರತೀಯರ ತಲೆಮಾರಿನಲ್ಲಿ ಅದಕ್ಕೆ ಮಾನ್ಯತೆ ಸಿಗುತ್ತಿದೆ” ಎಂದು ಪ್ರಭಾಸ‌ ಗಮನಿಸಿದರು.

”ಅರ್ಥಶಾಸ್ತ್ರದಲ್ಲಿ ಕೆಲವು ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ” ಎಂದು ಪ್ರಭಾಕರ್ ಹೇಳಿದ್ದಾರೆ. ”ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದ ಅವರು, ಈ ನಡೆಯು ಪ್ರಮಾದಗಳನ್ನು ಹೆಚ್ಚಿಸಿತು ಮತ್ತು ಬಿಕ್ಕಟ್ಟನ್ನು ಉಲ್ಬಣಗೊಳಿಸಿತು” ಎಂದು ಡಾ. ಪ್ರಭಾಕರ್ ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...