Homeಕರ್ನಾಟಕರಸ್ತೆಗಳಿಗೆ ಮುಸ್ಲಿಮರ ಹೆಸರಿಟ್ಟರೆ ಕೋಮು ಸಾಮರಸ್ಯ ಹಾಳಾಗುತ್ತದೆ: ಅನಂತಕುಮಾರ್ ಹೇಳಿಕೆಗೆ ಖಂಡನೆ

ರಸ್ತೆಗಳಿಗೆ ಮುಸ್ಲಿಮರ ಹೆಸರಿಟ್ಟರೆ ಕೋಮು ಸಾಮರಸ್ಯ ಹಾಳಾಗುತ್ತದೆ: ಅನಂತಕುಮಾರ್ ಹೇಳಿಕೆಗೆ ಖಂಡನೆ

ಪಾಲಿಕೆಯಂತೆಯೇ ಹಿಂದೂಗಳು ಬಹುಸಂಖ್ಯಾತರಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳೂ ಇದೇ ನಿರ್ಧಾರವನ್ನು ತೆಗೆದುಕೊಂಡರೆ ಪರಿಸ್ಥಿತಿಯನ್ನು ಊಹಿಸಲೂ ಅಸಾಧ್ಯ- ಅನಂತಕುಮಾರ್ ಹೆಗ್ಡೆ

- Advertisement -
- Advertisement -

ಬೆಂಗಳೂರಿನ ಪಾದರಾಯನಪುರದ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನಿಡುವ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೀರ್ಮಾನಕ್ಕೆ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ್‌ ಹೆಗ್ಡೆ ವಿರೋಧ ವ್ಯಕ್ತಪಡಿಸಿದ್ದಾರೆ. “ರಸ್ತೆಗಳಿಗೆ ಮುಸ್ಲಿಂ ಸಮಾಜ ಸೇವಕರ ಹೆಸರಿಟ್ಟರೆ ಕೋಮು ಸಾಮರಸ್ಯ ಹದಗೆಡುತ್ತದೆ” ಎಂದು ಪತ್ರ ಬರೆದಿದ್ದಾರೆ.

“ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಸಮಾಜ ಸೇವಕರ ಹೆಸರಿಡಬೇಕೆನ್ನುವ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಈಗ ಸಮಾಜ ಸೇವಕರ ಹೆಸರಿನಲ್ಲಿ ಮುಸ್ಲಿಮರ ಹೆಸರುಗಳನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಈ ಮೂಲಕ ಒಂದು ಕೋಮಿನ ತುಷ್ಠೀಕರಣಕ್ಕೆ ಮುಂದಾಗುವುದು ಸರಿಯಲ್ಲ. ಇದು ಸಮಾಜದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯುಂಟುಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಬಿರುಕು?

ಬಿಬಿಎಂಪಿ ನೀಡಿರುವ ಆದೇಶ:

“ಪಾಲಿಕೆಯಂತೆಯೇ ಹಿಂದೂಗಳು ಬಹುಸಂಖ್ಯಾತರಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳೂ ಇದೇ ನಿರ್ಧಾರವನ್ನು ತೆಗೆದುಕೊಂಡರೆ ಪರಿಸ್ಥಿತಿಯನ್ನು ಊಹಿಸಲೂ ಅಸಾಧ್ಯ. ಹಾಗೇನಾದರೂ ಹೆಸರಿಡುವ ಅನಿವಾರ್ಯತೆಯಿದ್ದರೆ, ಸ್ವಾತಂತ್ರ್ಯ ಹೋರಾಟಗಾರರು, ದೇಶಕ್ಕಾಗಿ ಹೋರಾಡಿದ ವೀರ ಸೈನಿಕರು, ರಾಷ್ಟ್ರದ ಮಹಾನ್ ವ್ಯಕ್ತಿಗಳ ಹೆಸರನ್ನು ಇಡಬಹುದು. ಆದರೆ ಮುಸಲ್ಮಾನರ ಹೆಸರುಗಳನ್ನು ಇಡಬಾರದು ಎಂದು ಈ ಮೂಲಕ ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

“ಬಿಬಿಎಂಪಿಯ ಈ ಬೇಜವಾಬ್ದಾರಿತನದ ಪರಮಾವಧಿಯ ನಿರ್ಧಾರವನ್ನು ಈ ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಅಗ್ರಹಿಸುತ್ತೇನೆ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗ

ಸಂಸದ ಅನಂತ ಕುಮಾರ್ ಹೆಗ್ಡೆ ಬರೆದಿರುವ ಪತ್ರ:

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೆಲ್ಫೇರ್‌ ಪಾರ್ಟಿಯ ಮುಖಂಡರಾದ ತಾಹೀರ್ ಹುಸೇನ್, “ಸಮಾಜ ಸೇವಕರು ಅಂದರೆ ಅವರು ಸಮಾಜ ಸೇವಕರು ಮಾತ್ರ. ಅವರಲ್ಲಿ ಜಾತಿ ಧರ್ಮ ಹುಡುಕುವುದು ಸರಿಯಲ್ಲ. ಅದಾಗ್ಯೂ ಬೇರೆ-ಬೇರೆ ಸಮುದಾಯದವರು ಇದ್ದರೂ ಒಳ್ಳೆಯದೇ. ಆದರೆ ಇದನ್ನೇ ನೆಪ ಮಾಡಿಕೊಂಡು ವಿರೋಧ ಮಾಡುವುದು ಸರಿಯಲ್ಲ. ಎಲ್ಲದಕ್ಕೂ ಕೋಮು ಬಣ್ಣ ಹಚ್ಚುವುದು ಸರಿಯಲ್ಲ” ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ರೈತಸಂಘದ ಉಪಾಧ್ಯಕ್ಷರಾದ ವೀರಸಂಗಯ್ಯ, “ಬಿಬಿಎಂಪಿಯ ಈ ನಿರ್ಧಾರದಿಂದ ಸಾಮರಸ್ಯ ಹೆಚ್ಚಾಗುತ್ತದೆಯೇ ಹೊರತು ಹಾಳಾಗುವುದಿಲ್ಲ. ಯಾವುದೇ ಆದರ್ಶ ವ್ಯಕ್ತಿಗಳನ್ನ ಸಾಧಕರನ್ನ ಅವರ ಜಾತಿ-ಧರ್ಮದ ಹಿನ್ನೆಲೆಯಲ್ಲಿ ನೋಡಬಾರದು. ಅವರನ್ನು ಮಹಾಮಾನವರನ್ನಾಗಿಯೇ ಸ್ವೀಕರಿಸಬೇಕು. ಹಾಗಾಗಿ ಅನಂತಕುಮಾರ್ ಹೆಗ್ಡೆ ಕೂಡ ಈ ಸೌಹಾರ್ದಯುತ ಭಾವನೆಗೆ ಒಳಪಡಬೇಕು ಎನ್ನುವುದು ನಮ್ಮ ಒತ್ತಾಯ” ಎಂದು ಹೇಳಿದರು.


ಇದನ್ನೂ ಓದಿ: ಶಾಹೀನ್ ಬಾಗ್ ಶೂಟರ್‌ನ ಪಕ್ಷಕ್ಕೆ ಸೇರಿಸಿ ಕೆಲವೇ ಗಂಟೆಗಳಲ್ಲಿ ಉಚ್ಛಾಟಿಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...