Homeಕರ್ನಾಟಕನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

- Advertisement -
- Advertisement -

”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಏ. 7ರ ರಾತ್ರಿ, ತಮ್ಮ ಆಪ್ತರೊಡನೆ ಎಚ್.ಡಿ. ರೇವಣ್ಣನವರು ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದಾರೆ” ಎಂದು ಹೇಳಲಾಗುತ್ತಿದೆ.

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ಯಶವಂತಪುರದಲ್ಲಿ ಶನಿವಾರ ನಡೆದ ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ”ಯಾರು ಏನೇ ಹೇಳಿದರೂ ಹಾಸನದಲ್ಲಿ ಕಾರ್ಯಕರ್ತರ ಆಶಯದಂತೆ ಜೆಡಿಎಸ್ ಯುವ ನಾಯಕ ಸ್ವರೂಪ್ ಪ್ರಕಾಶ್ ಅವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

”ಪಂಚರತ್ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಸ್ವರೂಪ್ ಅವರಿಗೇ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ಕುಮಾರಸ್ವಾಮಿ, ನೀವು ಹೇಳಿದವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ”ಬ್ಲಾಕ್ ಮೇಲ್ ಮಾಡುವುದು ದೇವೇಗೌಡರ ಹತ್ತಿರ ನಡೆಯಬಹುದು. ಆದರೆ, ನನ್ನ ಹತ್ರ ನಡೆಯಲ್ಲ. ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದಿದ್ದಾರೆ.

ಸಂಧಾನ ಸಭೆಯಲ್ಲೂ ಷರತ್ತು ಹಾಕಿದ್ದ ರೇವಣ್ಣ

ಈ ಹಿಂದೆ ಹಾಸನ ಟಿಕೆಟ್ ವಿಚಾರವಾಗಿ, ದೇವೇಗೌಡರ ಮನೆಯಲ್ಲೇ ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಸಂಧಾನ ಸಭೆ ನಡೆಸಲಾಗಿತ್ತು. ಆ ಸಮಯದಲ್ಲಿ, ರೇವಣ್ಣನವರು ಭವಾನಿಯವರಿಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದರು. ಅತ್ತ, ಕುಮಾರಸ್ವಾಮಿಯವರು ಸ್ವರೂಪ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ದೇವೇಗೌಡರು ನಡೆಸಿದ ಸಂಧಾನ ಸಭೆ ವಿಫಲಾವಾಗಿತ್ತು.

ಇದೀಗ ಹೊಸ ಅಸ್ತ್ರ ಪ್ರಯೋಗಿಸಿರುವ ರೇವಣ್ಣ, ”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...