Homeಕರ್ನಾಟಕನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

- Advertisement -
- Advertisement -

”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಏ. 7ರ ರಾತ್ರಿ, ತಮ್ಮ ಆಪ್ತರೊಡನೆ ಎಚ್.ಡಿ. ರೇವಣ್ಣನವರು ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದಾರೆ” ಎಂದು ಹೇಳಲಾಗುತ್ತಿದೆ.

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ಯಶವಂತಪುರದಲ್ಲಿ ಶನಿವಾರ ನಡೆದ ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ”ಯಾರು ಏನೇ ಹೇಳಿದರೂ ಹಾಸನದಲ್ಲಿ ಕಾರ್ಯಕರ್ತರ ಆಶಯದಂತೆ ಜೆಡಿಎಸ್ ಯುವ ನಾಯಕ ಸ್ವರೂಪ್ ಪ್ರಕಾಶ್ ಅವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

”ಪಂಚರತ್ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಸ್ವರೂಪ್ ಅವರಿಗೇ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ಕುಮಾರಸ್ವಾಮಿ, ನೀವು ಹೇಳಿದವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ”ಬ್ಲಾಕ್ ಮೇಲ್ ಮಾಡುವುದು ದೇವೇಗೌಡರ ಹತ್ತಿರ ನಡೆಯಬಹುದು. ಆದರೆ, ನನ್ನ ಹತ್ರ ನಡೆಯಲ್ಲ. ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದಿದ್ದಾರೆ.

ಸಂಧಾನ ಸಭೆಯಲ್ಲೂ ಷರತ್ತು ಹಾಕಿದ್ದ ರೇವಣ್ಣ

ಈ ಹಿಂದೆ ಹಾಸನ ಟಿಕೆಟ್ ವಿಚಾರವಾಗಿ, ದೇವೇಗೌಡರ ಮನೆಯಲ್ಲೇ ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಸಂಧಾನ ಸಭೆ ನಡೆಸಲಾಗಿತ್ತು. ಆ ಸಮಯದಲ್ಲಿ, ರೇವಣ್ಣನವರು ಭವಾನಿಯವರಿಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದರು. ಅತ್ತ, ಕುಮಾರಸ್ವಾಮಿಯವರು ಸ್ವರೂಪ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ದೇವೇಗೌಡರು ನಡೆಸಿದ ಸಂಧಾನ ಸಭೆ ವಿಫಲಾವಾಗಿತ್ತು.

ಇದೀಗ ಹೊಸ ಅಸ್ತ್ರ ಪ್ರಯೋಗಿಸಿರುವ ರೇವಣ್ಣ, ”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...