Homeಕರ್ನಾಟಕನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

- Advertisement -
- Advertisement -

”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಏ. 7ರ ರಾತ್ರಿ, ತಮ್ಮ ಆಪ್ತರೊಡನೆ ಎಚ್.ಡಿ. ರೇವಣ್ಣನವರು ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದಾರೆ” ಎಂದು ಹೇಳಲಾಗುತ್ತಿದೆ.

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ಯಶವಂತಪುರದಲ್ಲಿ ಶನಿವಾರ ನಡೆದ ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ”ಯಾರು ಏನೇ ಹೇಳಿದರೂ ಹಾಸನದಲ್ಲಿ ಕಾರ್ಯಕರ್ತರ ಆಶಯದಂತೆ ಜೆಡಿಎಸ್ ಯುವ ನಾಯಕ ಸ್ವರೂಪ್ ಪ್ರಕಾಶ್ ಅವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

”ಪಂಚರತ್ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಸ್ವರೂಪ್ ಅವರಿಗೇ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ಕುಮಾರಸ್ವಾಮಿ, ನೀವು ಹೇಳಿದವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ”ಬ್ಲಾಕ್ ಮೇಲ್ ಮಾಡುವುದು ದೇವೇಗೌಡರ ಹತ್ತಿರ ನಡೆಯಬಹುದು. ಆದರೆ, ನನ್ನ ಹತ್ರ ನಡೆಯಲ್ಲ. ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದಿದ್ದಾರೆ.

ಸಂಧಾನ ಸಭೆಯಲ್ಲೂ ಷರತ್ತು ಹಾಕಿದ್ದ ರೇವಣ್ಣ

ಈ ಹಿಂದೆ ಹಾಸನ ಟಿಕೆಟ್ ವಿಚಾರವಾಗಿ, ದೇವೇಗೌಡರ ಮನೆಯಲ್ಲೇ ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಸಂಧಾನ ಸಭೆ ನಡೆಸಲಾಗಿತ್ತು. ಆ ಸಮಯದಲ್ಲಿ, ರೇವಣ್ಣನವರು ಭವಾನಿಯವರಿಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದರು. ಅತ್ತ, ಕುಮಾರಸ್ವಾಮಿಯವರು ಸ್ವರೂಪ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ದೇವೇಗೌಡರು ನಡೆಸಿದ ಸಂಧಾನ ಸಭೆ ವಿಫಲಾವಾಗಿತ್ತು.

ಇದೀಗ ಹೊಸ ಅಸ್ತ್ರ ಪ್ರಯೋಗಿಸಿರುವ ರೇವಣ್ಣ, ”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...