Homeಕರ್ನಾಟಕನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

- Advertisement -
- Advertisement -

”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಏ. 7ರ ರಾತ್ರಿ, ತಮ್ಮ ಆಪ್ತರೊಡನೆ ಎಚ್.ಡಿ. ರೇವಣ್ಣನವರು ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದಾರೆ” ಎಂದು ಹೇಳಲಾಗುತ್ತಿದೆ.

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ಯಶವಂತಪುರದಲ್ಲಿ ಶನಿವಾರ ನಡೆದ ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ”ಯಾರು ಏನೇ ಹೇಳಿದರೂ ಹಾಸನದಲ್ಲಿ ಕಾರ್ಯಕರ್ತರ ಆಶಯದಂತೆ ಜೆಡಿಎಸ್ ಯುವ ನಾಯಕ ಸ್ವರೂಪ್ ಪ್ರಕಾಶ್ ಅವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

”ಪಂಚರತ್ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಸ್ವರೂಪ್ ಅವರಿಗೇ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ಕುಮಾರಸ್ವಾಮಿ, ನೀವು ಹೇಳಿದವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ”ಬ್ಲಾಕ್ ಮೇಲ್ ಮಾಡುವುದು ದೇವೇಗೌಡರ ಹತ್ತಿರ ನಡೆಯಬಹುದು. ಆದರೆ, ನನ್ನ ಹತ್ರ ನಡೆಯಲ್ಲ. ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದಿದ್ದಾರೆ.

ಸಂಧಾನ ಸಭೆಯಲ್ಲೂ ಷರತ್ತು ಹಾಕಿದ್ದ ರೇವಣ್ಣ

ಈ ಹಿಂದೆ ಹಾಸನ ಟಿಕೆಟ್ ವಿಚಾರವಾಗಿ, ದೇವೇಗೌಡರ ಮನೆಯಲ್ಲೇ ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಸಂಧಾನ ಸಭೆ ನಡೆಸಲಾಗಿತ್ತು. ಆ ಸಮಯದಲ್ಲಿ, ರೇವಣ್ಣನವರು ಭವಾನಿಯವರಿಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದರು. ಅತ್ತ, ಕುಮಾರಸ್ವಾಮಿಯವರು ಸ್ವರೂಪ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ದೇವೇಗೌಡರು ನಡೆಸಿದ ಸಂಧಾನ ಸಭೆ ವಿಫಲಾವಾಗಿತ್ತು.

ಇದೀಗ ಹೊಸ ಅಸ್ತ್ರ ಪ್ರಯೋಗಿಸಿರುವ ರೇವಣ್ಣ, ”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...