Homeಮುಖಪುಟ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಸೋಮವಾರ ಸಂವಿಧಾನ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಅಗತ್ಯ ಬಿದ್ದರೆ ಕಳೆದ ವರ್ಷ ಫೆಬ್ರವರಿ 23 ರಂದು ತಾವು ಮಾಡಿದ್ದನ್ನು “ಮತ್ತೆ” ಮಾಡುವುದಾಗಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆಜ್ ಏಕ್ ಸಾಲ್ ಹೋ ಗಯಾ ಹೈ, ಇಸ್ಲಿಯೆ ಯೆ ಬಾತ್ ದೋಬಾರಾ ಬೊಲ್ನಾ ಚಾಹತಾ ಹೂ- ಫೆಬ್ರವರಿ 23 ಪಿಚ್ಲ್ ಸಾಲ್ ಜೋ ಕಿಯಾ, ಅಗರ್ ಜರೂರತ್ ಪಡೆ ತೋಹ್ ದೋಬಾರಾ ಕರ್ ಲುಂಗಾ (ಈಗ ಒಂದು ವರ್ಷವಾಯಿತು. ಅದಕ್ಕೆ ನಾನು ಈ ಮಾತನ್ನು ಮತ್ತೆ ಹೇಳಲು ಬಯಸುತ್ತೇನೆ. ಫೆಬ್ರವರಿ 23 ರಂದು ನಾನು ಮಾಡಿದ್ದನ್ನು ಮತ್ತೆ ಮಾಡುವ ಅವಶ್ಯಕತೆ ಬಿದ್ದರೆ, ನಾನು ಅದನ್ನು ಮತ್ತೆ ಮಾಡುತ್ತೇನೆ) ” ಎಂದು ಅವರು ಹೇಳಿದ್ದಾರೆ.

‘ದೆಹಲಿ ರಾಯಿಟ್ಸ್: ದಿ ಅನ್ಟೋಲ್ಡ್ ಸ್ಟೋರಿ’ ಪುಸ್ತಕದ ಲೇಖಕರೊಂದಿಗೆ ವೇದಿಕೆ ಹಂಚಿಕೊಂಡು ಮೇಲಿನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೇಬಲ್ ರತನ್ ಲಾಲ್ ಅವರನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಸರಿಯಾಗಿ ಒಂದು ವರ್ಷದ ಹಿಂದೆ ಫೆಬ್ರುವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ರ‍್ಯಾಲಿಯ ನೇತೃತ್ವ ವಹಿಸಿದ್ದರು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಈ ಪ್ರದೇಶದಿಂದ ತೆರವುಗೊಳಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು, ವಿಫಲವಾದರೆ ತಾವು ಬೀದಿಗೀಳಿಯ ಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲೇ ಪೊಲೀಸರಿಗೆ ವಾರ್ನಿಂಗ್ ಮಾಡಿದ್ದರು.

ಕಳೆದ ವರ್ಷ ಫೆಬ್ರವರಿ 23 ರಂದು ಅವರು ಟ್ವೀಟ್ ಮಾಡಿದ ವೀಡಿಯೊದಲ್ಲಿ, ಅವರು ಮೌಜ್ಪುರ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರವಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಅವರು ಪೊಲೀಸರಿಗೆ ಎಚ್ಚರಿಕೆ ನೀಡಿದಾಗ ಡಿಸಿಪಿ (ಈಶಾನ್ಯ) ವೇದ ಪ್ರಕಾಶ್ ಸೂರ್ಯ ಅವರ ಪಕ್ಕದಲ್ಲೆ ನಿಂತಿದ್ದಾರೆ.

ಮರುದಿನ ಆ ಜಿಲ್ಲೆಯಲ್ಲಿ ಗಲಭೆ-ಹಿಂಸಾಚಾರ ಆರಂಭವಾಗಿ 53 ಮಂದಿ ಸಾವನ್ನಪ್ಪಿದ್ದರು.
“ಜಿಹಾದಿ ಪಡೆಗಳು ದೆಹಲಿಯಲ್ಲಿ ಗಲಭೆಗಳನ್ನು ರೂಪಿಸಿ ಒಂದು ವರ್ಷವಾಗಿದೆ. ಗಣರಾಜ್ಯೋತ್ಸವದಂದು ಏನಾಯಿತು ಎಂಬುದರಂತೆಯೇ ಈಗಲೂ ಅದೇ ಮಾದರಿಯನ್ನು ನೋಡಲಾಗುತ್ತಿದೆ. ವಿಧ್ವಂಸಕರು ಎಂದು ಕರೆಯಲ್ಪಡುವವರು ರಾಜಧಾನಿಯಲ್ಲಿ ಶಾಂತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ, ಭಾರತದ ವಿರೋಧಿ ಪಡೆಗಳ ನೆರವು ಮತ್ತು ಧನಸಹಾಯವನ್ನು ದೇಶದ ಒಳಗೆ ಮತ್ತು ಹೊರಗಿನಿಂದ ಪಡೆಯುತ್ತಿದ್ದಾರೆ. ಮತ್ತು ‘ಪ್ರದರ್ಶನ್ ಸೆ ದಂಗಾ ತಕ್ (ಪ್ರತಿಭಟನೆಯಿಂದ ಗಲಭೆಗಳವರೆಗೆ)’ ಈ ಮಾದರಿ ತುಂಬಾ ಸ್ಪಷ್ಟವಾಗಿದೆ” ಎಂದು ಅವರು ಪರೋಕ್ಷವಾಗಿ ರೈತ ಪ್ರತಿಭಟನೆಯ ಮೇಲೆ ಆರೋಪ ಮಾಡಿದ್ದಾರೆ.

“ನಾವು ಗಲಭೆಯ ಹಿಂದೂ ಸಂತ್ರಸ್ತರಿಗೆ ಪ್ರತ್ಯೇಕವಾಗಿ ಸಹಾಯ ಮಾಡಿದ್ದೇವೆ. ತದನಂತರ ನಾವು ಇನ್ನೊಂದು ಬದಿಗೆ ಏಕೆ ಸಹಾಯ ಮಾಡುವುದಿಲ್ಲ ಎಂದು ಪ್ರಶ್ನಿಸಲಾಗಿತು. ವಕ್ಫ್ ಮಂಡಳಿ, ಇಡೀ ದೆಹಲಿ ಸರ್ಕಾರ ಅವರ ಹಿಂದೆ ನಿಂತಿದೆ. ಮಾಧ್ಯಮ, ಎನ್‌ಜಿಒಗಳು ಎಲ್ಲರೂ ಅವರೊಂದಿಗೆ ಇವೆ. ನಾವೇಕೆ ಸಹಾಯ ಮಾಡಬೇಕು ”ಎಂದು ಮಿಶ್ರಾ ಹೇಳಿದ್ದಾರೆ.

“ಈ ಪುಸ್ತಕವು ಗಲಭೆಯ ಸಂಚುಕೋರರ ಬಗ್ಗೆ ಬಹಳಷ್ಟು ಹೊಂದಿದೆ. ಆದ್ದರಿಂದ ನೀವು ನನ್ನ ಬಗ್ಗೆ ಪುಸ್ತಕದಲ್ಲಿ ಹೆಚ್ಚು ಕಾಣುವುದಿಲ್ಲ” ಎಂದು ಅವರು ನಗುತ್ತಾ ಹೇಳಿದರು.

ಈ ಪುಸ್ತಕವನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಮೋನಿಕಾ ಅರೋರಾ ಇತರ ಕೆಲವರೊಂದಿಗೆ ಸೇರಿ ಬರೆದಿದ್ದಾರೆ. ಕಳೆದ ವರ್ಷ ಬ್ಲೂಮ್ಸ್‌ಬರಿ ಪ್ರಕಟಣೆಯಿಂದ ಹೊರ ಹೋದ ನಂತರ ಇದನ್ನು ಗರುಡ ಪ್ರಕಾಶನ ಪ್ರಕಟಿಸಿದೆ.


ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...