Homeಮುಖಪುಟ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಸೋಮವಾರ ಸಂವಿಧಾನ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಅಗತ್ಯ ಬಿದ್ದರೆ ಕಳೆದ ವರ್ಷ ಫೆಬ್ರವರಿ 23 ರಂದು ತಾವು ಮಾಡಿದ್ದನ್ನು “ಮತ್ತೆ” ಮಾಡುವುದಾಗಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆಜ್ ಏಕ್ ಸಾಲ್ ಹೋ ಗಯಾ ಹೈ, ಇಸ್ಲಿಯೆ ಯೆ ಬಾತ್ ದೋಬಾರಾ ಬೊಲ್ನಾ ಚಾಹತಾ ಹೂ- ಫೆಬ್ರವರಿ 23 ಪಿಚ್ಲ್ ಸಾಲ್ ಜೋ ಕಿಯಾ, ಅಗರ್ ಜರೂರತ್ ಪಡೆ ತೋಹ್ ದೋಬಾರಾ ಕರ್ ಲುಂಗಾ (ಈಗ ಒಂದು ವರ್ಷವಾಯಿತು. ಅದಕ್ಕೆ ನಾನು ಈ ಮಾತನ್ನು ಮತ್ತೆ ಹೇಳಲು ಬಯಸುತ್ತೇನೆ. ಫೆಬ್ರವರಿ 23 ರಂದು ನಾನು ಮಾಡಿದ್ದನ್ನು ಮತ್ತೆ ಮಾಡುವ ಅವಶ್ಯಕತೆ ಬಿದ್ದರೆ, ನಾನು ಅದನ್ನು ಮತ್ತೆ ಮಾಡುತ್ತೇನೆ) ” ಎಂದು ಅವರು ಹೇಳಿದ್ದಾರೆ.

‘ದೆಹಲಿ ರಾಯಿಟ್ಸ್: ದಿ ಅನ್ಟೋಲ್ಡ್ ಸ್ಟೋರಿ’ ಪುಸ್ತಕದ ಲೇಖಕರೊಂದಿಗೆ ವೇದಿಕೆ ಹಂಚಿಕೊಂಡು ಮೇಲಿನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೇಬಲ್ ರತನ್ ಲಾಲ್ ಅವರನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಸರಿಯಾಗಿ ಒಂದು ವರ್ಷದ ಹಿಂದೆ ಫೆಬ್ರುವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ರ‍್ಯಾಲಿಯ ನೇತೃತ್ವ ವಹಿಸಿದ್ದರು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಈ ಪ್ರದೇಶದಿಂದ ತೆರವುಗೊಳಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು, ವಿಫಲವಾದರೆ ತಾವು ಬೀದಿಗೀಳಿಯ ಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲೇ ಪೊಲೀಸರಿಗೆ ವಾರ್ನಿಂಗ್ ಮಾಡಿದ್ದರು.

ಕಳೆದ ವರ್ಷ ಫೆಬ್ರವರಿ 23 ರಂದು ಅವರು ಟ್ವೀಟ್ ಮಾಡಿದ ವೀಡಿಯೊದಲ್ಲಿ, ಅವರು ಮೌಜ್ಪುರ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರವಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಅವರು ಪೊಲೀಸರಿಗೆ ಎಚ್ಚರಿಕೆ ನೀಡಿದಾಗ ಡಿಸಿಪಿ (ಈಶಾನ್ಯ) ವೇದ ಪ್ರಕಾಶ್ ಸೂರ್ಯ ಅವರ ಪಕ್ಕದಲ್ಲೆ ನಿಂತಿದ್ದಾರೆ.

ಮರುದಿನ ಆ ಜಿಲ್ಲೆಯಲ್ಲಿ ಗಲಭೆ-ಹಿಂಸಾಚಾರ ಆರಂಭವಾಗಿ 53 ಮಂದಿ ಸಾವನ್ನಪ್ಪಿದ್ದರು.
“ಜಿಹಾದಿ ಪಡೆಗಳು ದೆಹಲಿಯಲ್ಲಿ ಗಲಭೆಗಳನ್ನು ರೂಪಿಸಿ ಒಂದು ವರ್ಷವಾಗಿದೆ. ಗಣರಾಜ್ಯೋತ್ಸವದಂದು ಏನಾಯಿತು ಎಂಬುದರಂತೆಯೇ ಈಗಲೂ ಅದೇ ಮಾದರಿಯನ್ನು ನೋಡಲಾಗುತ್ತಿದೆ. ವಿಧ್ವಂಸಕರು ಎಂದು ಕರೆಯಲ್ಪಡುವವರು ರಾಜಧಾನಿಯಲ್ಲಿ ಶಾಂತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ, ಭಾರತದ ವಿರೋಧಿ ಪಡೆಗಳ ನೆರವು ಮತ್ತು ಧನಸಹಾಯವನ್ನು ದೇಶದ ಒಳಗೆ ಮತ್ತು ಹೊರಗಿನಿಂದ ಪಡೆಯುತ್ತಿದ್ದಾರೆ. ಮತ್ತು ‘ಪ್ರದರ್ಶನ್ ಸೆ ದಂಗಾ ತಕ್ (ಪ್ರತಿಭಟನೆಯಿಂದ ಗಲಭೆಗಳವರೆಗೆ)’ ಈ ಮಾದರಿ ತುಂಬಾ ಸ್ಪಷ್ಟವಾಗಿದೆ” ಎಂದು ಅವರು ಪರೋಕ್ಷವಾಗಿ ರೈತ ಪ್ರತಿಭಟನೆಯ ಮೇಲೆ ಆರೋಪ ಮಾಡಿದ್ದಾರೆ.

“ನಾವು ಗಲಭೆಯ ಹಿಂದೂ ಸಂತ್ರಸ್ತರಿಗೆ ಪ್ರತ್ಯೇಕವಾಗಿ ಸಹಾಯ ಮಾಡಿದ್ದೇವೆ. ತದನಂತರ ನಾವು ಇನ್ನೊಂದು ಬದಿಗೆ ಏಕೆ ಸಹಾಯ ಮಾಡುವುದಿಲ್ಲ ಎಂದು ಪ್ರಶ್ನಿಸಲಾಗಿತು. ವಕ್ಫ್ ಮಂಡಳಿ, ಇಡೀ ದೆಹಲಿ ಸರ್ಕಾರ ಅವರ ಹಿಂದೆ ನಿಂತಿದೆ. ಮಾಧ್ಯಮ, ಎನ್‌ಜಿಒಗಳು ಎಲ್ಲರೂ ಅವರೊಂದಿಗೆ ಇವೆ. ನಾವೇಕೆ ಸಹಾಯ ಮಾಡಬೇಕು ”ಎಂದು ಮಿಶ್ರಾ ಹೇಳಿದ್ದಾರೆ.

“ಈ ಪುಸ್ತಕವು ಗಲಭೆಯ ಸಂಚುಕೋರರ ಬಗ್ಗೆ ಬಹಳಷ್ಟು ಹೊಂದಿದೆ. ಆದ್ದರಿಂದ ನೀವು ನನ್ನ ಬಗ್ಗೆ ಪುಸ್ತಕದಲ್ಲಿ ಹೆಚ್ಚು ಕಾಣುವುದಿಲ್ಲ” ಎಂದು ಅವರು ನಗುತ್ತಾ ಹೇಳಿದರು.

ಈ ಪುಸ್ತಕವನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಮೋನಿಕಾ ಅರೋರಾ ಇತರ ಕೆಲವರೊಂದಿಗೆ ಸೇರಿ ಬರೆದಿದ್ದಾರೆ. ಕಳೆದ ವರ್ಷ ಬ್ಲೂಮ್ಸ್‌ಬರಿ ಪ್ರಕಟಣೆಯಿಂದ ಹೊರ ಹೋದ ನಂತರ ಇದನ್ನು ಗರುಡ ಪ್ರಕಾಶನ ಪ್ರಕಟಿಸಿದೆ.


ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...