Homeಮುಖಪುಟ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಸೋಮವಾರ ಸಂವಿಧಾನ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಅಗತ್ಯ ಬಿದ್ದರೆ ಕಳೆದ ವರ್ಷ ಫೆಬ್ರವರಿ 23 ರಂದು ತಾವು ಮಾಡಿದ್ದನ್ನು “ಮತ್ತೆ” ಮಾಡುವುದಾಗಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆಜ್ ಏಕ್ ಸಾಲ್ ಹೋ ಗಯಾ ಹೈ, ಇಸ್ಲಿಯೆ ಯೆ ಬಾತ್ ದೋಬಾರಾ ಬೊಲ್ನಾ ಚಾಹತಾ ಹೂ- ಫೆಬ್ರವರಿ 23 ಪಿಚ್ಲ್ ಸಾಲ್ ಜೋ ಕಿಯಾ, ಅಗರ್ ಜರೂರತ್ ಪಡೆ ತೋಹ್ ದೋಬಾರಾ ಕರ್ ಲುಂಗಾ (ಈಗ ಒಂದು ವರ್ಷವಾಯಿತು. ಅದಕ್ಕೆ ನಾನು ಈ ಮಾತನ್ನು ಮತ್ತೆ ಹೇಳಲು ಬಯಸುತ್ತೇನೆ. ಫೆಬ್ರವರಿ 23 ರಂದು ನಾನು ಮಾಡಿದ್ದನ್ನು ಮತ್ತೆ ಮಾಡುವ ಅವಶ್ಯಕತೆ ಬಿದ್ದರೆ, ನಾನು ಅದನ್ನು ಮತ್ತೆ ಮಾಡುತ್ತೇನೆ) ” ಎಂದು ಅವರು ಹೇಳಿದ್ದಾರೆ.

‘ದೆಹಲಿ ರಾಯಿಟ್ಸ್: ದಿ ಅನ್ಟೋಲ್ಡ್ ಸ್ಟೋರಿ’ ಪುಸ್ತಕದ ಲೇಖಕರೊಂದಿಗೆ ವೇದಿಕೆ ಹಂಚಿಕೊಂಡು ಮೇಲಿನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೇಬಲ್ ರತನ್ ಲಾಲ್ ಅವರನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಸರಿಯಾಗಿ ಒಂದು ವರ್ಷದ ಹಿಂದೆ ಫೆಬ್ರುವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ರ‍್ಯಾಲಿಯ ನೇತೃತ್ವ ವಹಿಸಿದ್ದರು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಈ ಪ್ರದೇಶದಿಂದ ತೆರವುಗೊಳಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು, ವಿಫಲವಾದರೆ ತಾವು ಬೀದಿಗೀಳಿಯ ಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲೇ ಪೊಲೀಸರಿಗೆ ವಾರ್ನಿಂಗ್ ಮಾಡಿದ್ದರು.

ಕಳೆದ ವರ್ಷ ಫೆಬ್ರವರಿ 23 ರಂದು ಅವರು ಟ್ವೀಟ್ ಮಾಡಿದ ವೀಡಿಯೊದಲ್ಲಿ, ಅವರು ಮೌಜ್ಪುರ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರವಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಅವರು ಪೊಲೀಸರಿಗೆ ಎಚ್ಚರಿಕೆ ನೀಡಿದಾಗ ಡಿಸಿಪಿ (ಈಶಾನ್ಯ) ವೇದ ಪ್ರಕಾಶ್ ಸೂರ್ಯ ಅವರ ಪಕ್ಕದಲ್ಲೆ ನಿಂತಿದ್ದಾರೆ.

ಮರುದಿನ ಆ ಜಿಲ್ಲೆಯಲ್ಲಿ ಗಲಭೆ-ಹಿಂಸಾಚಾರ ಆರಂಭವಾಗಿ 53 ಮಂದಿ ಸಾವನ್ನಪ್ಪಿದ್ದರು.
“ಜಿಹಾದಿ ಪಡೆಗಳು ದೆಹಲಿಯಲ್ಲಿ ಗಲಭೆಗಳನ್ನು ರೂಪಿಸಿ ಒಂದು ವರ್ಷವಾಗಿದೆ. ಗಣರಾಜ್ಯೋತ್ಸವದಂದು ಏನಾಯಿತು ಎಂಬುದರಂತೆಯೇ ಈಗಲೂ ಅದೇ ಮಾದರಿಯನ್ನು ನೋಡಲಾಗುತ್ತಿದೆ. ವಿಧ್ವಂಸಕರು ಎಂದು ಕರೆಯಲ್ಪಡುವವರು ರಾಜಧಾನಿಯಲ್ಲಿ ಶಾಂತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ, ಭಾರತದ ವಿರೋಧಿ ಪಡೆಗಳ ನೆರವು ಮತ್ತು ಧನಸಹಾಯವನ್ನು ದೇಶದ ಒಳಗೆ ಮತ್ತು ಹೊರಗಿನಿಂದ ಪಡೆಯುತ್ತಿದ್ದಾರೆ. ಮತ್ತು ‘ಪ್ರದರ್ಶನ್ ಸೆ ದಂಗಾ ತಕ್ (ಪ್ರತಿಭಟನೆಯಿಂದ ಗಲಭೆಗಳವರೆಗೆ)’ ಈ ಮಾದರಿ ತುಂಬಾ ಸ್ಪಷ್ಟವಾಗಿದೆ” ಎಂದು ಅವರು ಪರೋಕ್ಷವಾಗಿ ರೈತ ಪ್ರತಿಭಟನೆಯ ಮೇಲೆ ಆರೋಪ ಮಾಡಿದ್ದಾರೆ.

“ನಾವು ಗಲಭೆಯ ಹಿಂದೂ ಸಂತ್ರಸ್ತರಿಗೆ ಪ್ರತ್ಯೇಕವಾಗಿ ಸಹಾಯ ಮಾಡಿದ್ದೇವೆ. ತದನಂತರ ನಾವು ಇನ್ನೊಂದು ಬದಿಗೆ ಏಕೆ ಸಹಾಯ ಮಾಡುವುದಿಲ್ಲ ಎಂದು ಪ್ರಶ್ನಿಸಲಾಗಿತು. ವಕ್ಫ್ ಮಂಡಳಿ, ಇಡೀ ದೆಹಲಿ ಸರ್ಕಾರ ಅವರ ಹಿಂದೆ ನಿಂತಿದೆ. ಮಾಧ್ಯಮ, ಎನ್‌ಜಿಒಗಳು ಎಲ್ಲರೂ ಅವರೊಂದಿಗೆ ಇವೆ. ನಾವೇಕೆ ಸಹಾಯ ಮಾಡಬೇಕು ”ಎಂದು ಮಿಶ್ರಾ ಹೇಳಿದ್ದಾರೆ.

“ಈ ಪುಸ್ತಕವು ಗಲಭೆಯ ಸಂಚುಕೋರರ ಬಗ್ಗೆ ಬಹಳಷ್ಟು ಹೊಂದಿದೆ. ಆದ್ದರಿಂದ ನೀವು ನನ್ನ ಬಗ್ಗೆ ಪುಸ್ತಕದಲ್ಲಿ ಹೆಚ್ಚು ಕಾಣುವುದಿಲ್ಲ” ಎಂದು ಅವರು ನಗುತ್ತಾ ಹೇಳಿದರು.

ಈ ಪುಸ್ತಕವನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಮೋನಿಕಾ ಅರೋರಾ ಇತರ ಕೆಲವರೊಂದಿಗೆ ಸೇರಿ ಬರೆದಿದ್ದಾರೆ. ಕಳೆದ ವರ್ಷ ಬ್ಲೂಮ್ಸ್‌ಬರಿ ಪ್ರಕಟಣೆಯಿಂದ ಹೊರ ಹೋದ ನಂತರ ಇದನ್ನು ಗರುಡ ಪ್ರಕಾಶನ ಪ್ರಕಟಿಸಿದೆ.


ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...