Homeಮುಖಪುಟ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಸೋಮವಾರ ಸಂವಿಧಾನ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಅಗತ್ಯ ಬಿದ್ದರೆ ಕಳೆದ ವರ್ಷ ಫೆಬ್ರವರಿ 23 ರಂದು ತಾವು ಮಾಡಿದ್ದನ್ನು “ಮತ್ತೆ” ಮಾಡುವುದಾಗಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆಜ್ ಏಕ್ ಸಾಲ್ ಹೋ ಗಯಾ ಹೈ, ಇಸ್ಲಿಯೆ ಯೆ ಬಾತ್ ದೋಬಾರಾ ಬೊಲ್ನಾ ಚಾಹತಾ ಹೂ- ಫೆಬ್ರವರಿ 23 ಪಿಚ್ಲ್ ಸಾಲ್ ಜೋ ಕಿಯಾ, ಅಗರ್ ಜರೂರತ್ ಪಡೆ ತೋಹ್ ದೋಬಾರಾ ಕರ್ ಲುಂಗಾ (ಈಗ ಒಂದು ವರ್ಷವಾಯಿತು. ಅದಕ್ಕೆ ನಾನು ಈ ಮಾತನ್ನು ಮತ್ತೆ ಹೇಳಲು ಬಯಸುತ್ತೇನೆ. ಫೆಬ್ರವರಿ 23 ರಂದು ನಾನು ಮಾಡಿದ್ದನ್ನು ಮತ್ತೆ ಮಾಡುವ ಅವಶ್ಯಕತೆ ಬಿದ್ದರೆ, ನಾನು ಅದನ್ನು ಮತ್ತೆ ಮಾಡುತ್ತೇನೆ) ” ಎಂದು ಅವರು ಹೇಳಿದ್ದಾರೆ.

‘ದೆಹಲಿ ರಾಯಿಟ್ಸ್: ದಿ ಅನ್ಟೋಲ್ಡ್ ಸ್ಟೋರಿ’ ಪುಸ್ತಕದ ಲೇಖಕರೊಂದಿಗೆ ವೇದಿಕೆ ಹಂಚಿಕೊಂಡು ಮೇಲಿನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೇಬಲ್ ರತನ್ ಲಾಲ್ ಅವರನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಸರಿಯಾಗಿ ಒಂದು ವರ್ಷದ ಹಿಂದೆ ಫೆಬ್ರುವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ರ‍್ಯಾಲಿಯ ನೇತೃತ್ವ ವಹಿಸಿದ್ದರು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಈ ಪ್ರದೇಶದಿಂದ ತೆರವುಗೊಳಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು, ವಿಫಲವಾದರೆ ತಾವು ಬೀದಿಗೀಳಿಯ ಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲೇ ಪೊಲೀಸರಿಗೆ ವಾರ್ನಿಂಗ್ ಮಾಡಿದ್ದರು.

ಕಳೆದ ವರ್ಷ ಫೆಬ್ರವರಿ 23 ರಂದು ಅವರು ಟ್ವೀಟ್ ಮಾಡಿದ ವೀಡಿಯೊದಲ್ಲಿ, ಅವರು ಮೌಜ್ಪುರ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರವಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಅವರು ಪೊಲೀಸರಿಗೆ ಎಚ್ಚರಿಕೆ ನೀಡಿದಾಗ ಡಿಸಿಪಿ (ಈಶಾನ್ಯ) ವೇದ ಪ್ರಕಾಶ್ ಸೂರ್ಯ ಅವರ ಪಕ್ಕದಲ್ಲೆ ನಿಂತಿದ್ದಾರೆ.

ಮರುದಿನ ಆ ಜಿಲ್ಲೆಯಲ್ಲಿ ಗಲಭೆ-ಹಿಂಸಾಚಾರ ಆರಂಭವಾಗಿ 53 ಮಂದಿ ಸಾವನ್ನಪ್ಪಿದ್ದರು.
“ಜಿಹಾದಿ ಪಡೆಗಳು ದೆಹಲಿಯಲ್ಲಿ ಗಲಭೆಗಳನ್ನು ರೂಪಿಸಿ ಒಂದು ವರ್ಷವಾಗಿದೆ. ಗಣರಾಜ್ಯೋತ್ಸವದಂದು ಏನಾಯಿತು ಎಂಬುದರಂತೆಯೇ ಈಗಲೂ ಅದೇ ಮಾದರಿಯನ್ನು ನೋಡಲಾಗುತ್ತಿದೆ. ವಿಧ್ವಂಸಕರು ಎಂದು ಕರೆಯಲ್ಪಡುವವರು ರಾಜಧಾನಿಯಲ್ಲಿ ಶಾಂತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ, ಭಾರತದ ವಿರೋಧಿ ಪಡೆಗಳ ನೆರವು ಮತ್ತು ಧನಸಹಾಯವನ್ನು ದೇಶದ ಒಳಗೆ ಮತ್ತು ಹೊರಗಿನಿಂದ ಪಡೆಯುತ್ತಿದ್ದಾರೆ. ಮತ್ತು ‘ಪ್ರದರ್ಶನ್ ಸೆ ದಂಗಾ ತಕ್ (ಪ್ರತಿಭಟನೆಯಿಂದ ಗಲಭೆಗಳವರೆಗೆ)’ ಈ ಮಾದರಿ ತುಂಬಾ ಸ್ಪಷ್ಟವಾಗಿದೆ” ಎಂದು ಅವರು ಪರೋಕ್ಷವಾಗಿ ರೈತ ಪ್ರತಿಭಟನೆಯ ಮೇಲೆ ಆರೋಪ ಮಾಡಿದ್ದಾರೆ.

“ನಾವು ಗಲಭೆಯ ಹಿಂದೂ ಸಂತ್ರಸ್ತರಿಗೆ ಪ್ರತ್ಯೇಕವಾಗಿ ಸಹಾಯ ಮಾಡಿದ್ದೇವೆ. ತದನಂತರ ನಾವು ಇನ್ನೊಂದು ಬದಿಗೆ ಏಕೆ ಸಹಾಯ ಮಾಡುವುದಿಲ್ಲ ಎಂದು ಪ್ರಶ್ನಿಸಲಾಗಿತು. ವಕ್ಫ್ ಮಂಡಳಿ, ಇಡೀ ದೆಹಲಿ ಸರ್ಕಾರ ಅವರ ಹಿಂದೆ ನಿಂತಿದೆ. ಮಾಧ್ಯಮ, ಎನ್‌ಜಿಒಗಳು ಎಲ್ಲರೂ ಅವರೊಂದಿಗೆ ಇವೆ. ನಾವೇಕೆ ಸಹಾಯ ಮಾಡಬೇಕು ”ಎಂದು ಮಿಶ್ರಾ ಹೇಳಿದ್ದಾರೆ.

“ಈ ಪುಸ್ತಕವು ಗಲಭೆಯ ಸಂಚುಕೋರರ ಬಗ್ಗೆ ಬಹಳಷ್ಟು ಹೊಂದಿದೆ. ಆದ್ದರಿಂದ ನೀವು ನನ್ನ ಬಗ್ಗೆ ಪುಸ್ತಕದಲ್ಲಿ ಹೆಚ್ಚು ಕಾಣುವುದಿಲ್ಲ” ಎಂದು ಅವರು ನಗುತ್ತಾ ಹೇಳಿದರು.

ಈ ಪುಸ್ತಕವನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಮೋನಿಕಾ ಅರೋರಾ ಇತರ ಕೆಲವರೊಂದಿಗೆ ಸೇರಿ ಬರೆದಿದ್ದಾರೆ. ಕಳೆದ ವರ್ಷ ಬ್ಲೂಮ್ಸ್‌ಬರಿ ಪ್ರಕಟಣೆಯಿಂದ ಹೊರ ಹೋದ ನಂತರ ಇದನ್ನು ಗರುಡ ಪ್ರಕಾಶನ ಪ್ರಕಟಿಸಿದೆ.


ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...